ಬಿಎಸ್ಸಿ ನರ್ಸಿಂಗ್ ಶಿಕ್ಷಣಕ್ಕೆ ಸಿಇಟಿ ಕಡ್ಡಾಯ

Date:

  • ಹೆಚ್ಚು ಪ್ರವೇಶ ಶುಲ್ಕ ವಸೂಲಿಗೆ ಕಡಿವಾಣ
  • ಕೆಇಎ’ಯಿಂದ ಏ.14 ರಿಂದ ಅರ್ಜಿ ಪ್ರಕ್ರಿಯೆ ಆರಂಭ

ಮುಂದಿನ ದಿನಗಳಲ್ಲಿ ನರ್ಸಿಂಗ್ ಶಿಕ್ಷಣ ಪಡೆಯಬೇಕೆಂದು ಇಚ್ಚಿಸುವವರು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯವಾಗಿ ಬರೆಯಲೇಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ

ಈ ಹಿಂದೆ ಬಿಎಸ್ಸಿ ಕೋರ್ಸ್‌ಗಳಿಗೆ ಯಾವುದೇ ಪ್ರವೇಶ ಪರೀಕ್ಷೆಯಿಲ್ಲದೆ ಕೆಇಎ ಮೂಲಕ ನರ್ಸಿಂಗ್ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಕೆಇಎ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿಯನ್ನು ಕರೆಯಲಾಗುತ್ತಿತ್ತು. ದ್ವಿತೀಯ ಪಿಯು ಅಂಕಗಳ ಆಧಾರದ ಮೇಲೆ ಸರ್ಕಾರಿ ಕೋಟಾದ ಶೇ.20ರಷ್ಟು ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್.ಎಸ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ವರ್ಷದಿಂದ ನರ್ಸಿಂಗ್ ಪದವಿ ಪಡೆಯಲು ಇಚ್ಛಿಸುವವರು ಸಿಇಟಿ ಎದುರಿಸಬೇಕಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆಯನ್ನು ಪ್ರಕಟಸಲಿದ್ದು, ಸಿಇಟಿ-2023ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 14 ರಿಂದ ಮೂರು ದಿನಗಳವರೆಗೆ ಅವಕಾಶ ನೀಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಏ.25ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ?

ಸಿಇಟಿ ಪರೀಕ್ಷೆ ನಂತರ ಕೌನ್ಸೆಲಿಂಗ್ ಮತ್ತಿತ್ತರ ಕ್ರಮಗಳು ಇರುತ್ತದೆ. ಈ ವರ್ಷದಿಂದ ಕೋರ್ಸ್‌ಗೆ ಸರ್ಕಾರಿ ಮತ್ತು ಮ್ಯಾನೇಜ್‌ಮೆಂಟ್ ಕೋಟಾ ಎರಡು ಇವೆ. ಇದೇ ಮೊದಲ ಬಾರಿಗೆ ನರ್ಸಿಂಗ್‌ ಶಿಕ್ಷಣದಲ್ಲಿ ಇನ್ನಷ್ಟು ಗುಣಮಟ್ಟ ತರಲು ಕೆಸಿಇಟಿ ನಡೆಸಲು ನಿರ್ಧರಿಸಲಾಗಿದೆ.

ಮ್ಯಾನೆಜ್ ಮೆಂಟ್ ಸೀಟುಗಳಿಗಾಗಿ ವಿದ್ಯಾರ್ಥಿಗಳ ಬಳಿ ಶಿಕ್ಷಣ ಸಂಸ್ಥೆಗಳು ಹೆಚ್ಚು ಹಣ ವಸೂಲಿ ಮಾಡಿಕೊಳ್ಳುತ್ತವೆ. ಇವೆಲ್ಲದಕ್ಕೂ ಕಡಿವಾಣ ಹಾಕುವ ನಿಟ್ಟಿನಲ್ಲಿ, ಬಿಎಸ್ಸಿಗೆ ಸಿಇಟಿ ಕಡ್ಡಾಯ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 498 ನೋಂದಾಯಿತ ನರ್ಸಿಂಗ್ ಕಾಲೇಜುಗಳು ಸುಮಾರು 35,000 ಸೀಟುಗಳನ್ನು ನೀಡುತ್ತಿವೆ. ಈ ಹಿಂದೆ ಕೆಇಎ ಒಟ್ಟು 7,332 ಸರ್ಕಾರಿ ಕೋಟಾ ಸೀಟುಗಳನ್ನು ಭರ್ತಿ ಮಾಡಿತ್ತು. ಉಳಿದ ಸೀಟುಗಳನ್ನು ನರ್ಸಿಂಗ್ ಸಂಸ್ಥೆಗಳು ಮ್ಯಾನೇಜ್‌ಮೆಂಟ್ ಕೋಟಾ ಸೀಟುಗಳಾಗಿ ಭರ್ತಿ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...