ಪಠ್ಯದಲ್ಲಿ ಡಾರ್ವಿನ್‌ ಸಿದ್ಧಾಂತ ನಾಪತ್ತೆ; ಫ್ಯಾಸಿಸಂ ಜಾರಿ ತರುವ ಹುನ್ನಾರ

Date:

‘ಹಿಂದುತ್ವ’ವಾದಿಗಳು ‘ಫ್ಯಾಸಿಸಂ’ ಜಾರಿ ತರುವ ನೆಪದಲ್ಲಿ ಎನ್‌ಸಿಇಆರ್‌ಟಿ ಪಠ್ಯ ಕ್ರಮದಲ್ಲಿದ್ದ ಡಾರ್ವಿನ್‌ ಸಿದ್ಧಾಂತ ಕುರಿತ ಪಾಠ ಕೈ ಬಿಡಲಾಗಿದೆ. ಇದು ಬಿಜೆಪಿ ಸರ್ಕಾರದ ನಿರಂಕುಶ ಸರ್ವಾಧಿಕಾರಿ ನಡೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಕೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಒ) ಹೇಳಿದೆ.

ಶಾಲಾ ಪಠ್ಯಗಳ ಹೊರೆ ಕಡಿಮೆ ಮಾಡುವ ನೆಪದಲ್ಲಿ 9ನೇ ಮತ್ತು 10ನೇ ತರಗತಿಗಳ ವಿಜ್ಞಾನ ಪಠ್ಯಪುಸ್ತಕಗಳಿಂದ ಮಾನವ ವಿಕಾಸ ಸಿದ್ಧಾಂತ ತೆಗೆದು ಹಾಕಿರುವ ಎನ್‌ಸಿಇಆರ್‌ಟಿ ಕ್ರಮವನ್ನು ಖಂಡಿಸಬೇಕು ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದ್ದಾರೆ.

“ಪಿಯುಸಿಗೆ ಬಂದಾಗ ವಿದ್ಯಾರ್ಥಿಯೂ ವಿಜ್ಞಾನ ವಿಭಾಗ ಆಯ್ಕೆ ಮಾಡಿದರೆ ಮಾತ್ರ ವಿಕಾಸ ಸಿದ್ಧಾಂತವನ್ನು ಓದಬಹುದಾಗಿದೆ. ಇದು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಮೇಲೆ ಅಪಾಯಕಾರಿ ಪರಿಣಾಮ ಬೀಳುತ್ತದೆ. ಧಾರ್ಮಿಕ ನಂಬಿಕೆಗಳ ಸುತ್ತ ಹುಟ್ಟಿಕೊಂಡಿದ್ದ ಹಲವು ಗೊಂದಲಗಳಿಗೆ ಉತ್ತರ ನೀಡವ ಡಾರ್ವಿನ್‌ ಸಿದ್ಧಾಂತವನ್ನೇ ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ. ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಲು ಇದು ಮಹತ್ವಪೂರ್ಣ ಸಿದ್ಧಾಂತ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ್ಯ ಸಂಗ್ರಾಮ, ಸಾಂಸ್ಕೃತಿಕ ಪರಂಪರೆ ಹಾಗೂ ವೈವಿದ್ಯತೆ ಸೇರಿದಂತೆ ಮುಂತಾದವುಗಳ ಬಗ್ಗೆ ಮಾಹಿತಿ ಒದಗಿಸುತ್ತಿದ್ದ ಪಾಠಗಳನ್ನು ಕೈಬಿಡಲಾಗಿದೆ. ‘ಪ್ರಜಾತಂತ್ರ ಮತ್ತು ವೈವಿಧ್ಯತೆ’,’ಪ್ರಜಾತಂತ್ರದ ಸವಾಲುಗಳು’,’ಮೊಘಲ್ ಆಳ್ವಿಕರು ಮತ್ತುಅವರ ಆಳ್ವಿಕೆ’, ‘ವಸಾಹತುಶಾಹಿ ನಗರಗಳು’ಮತ್ತು’ಭಾರತದ ವಿಭಜನೆ’ಯಂತಹ ಅನೇಕ ಮಹತ್ವಪೂರ್ಣ ಅಧ್ಯಾಯಗಳನ್ನು ಕೈಬಿಡಲಾಗಿದೆ. ದೇಶವನ್ನು ಉಳಿಸಲು, ಶಿಕ್ಷಣದ ಮೇಲಿನ ಈ ದಾಳಿಯನ್ನು ವಿರೋಧಿಸಬೇಕು” ಎಂದು ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...