‘ಕಲಿಕಾ ಚೇತರಿಕಾ’ ಕ್ರಮ; ಶೈಕ್ಷಣಿಕ ಕೌಶಲ್ಯಗಳಲ್ಲಿ ಸುಧಾರಣೆ

Date:

  • ಕಲಿಕಾ ಸಾಮರ್ಥ್ಯದಲ್ಲಿ ಸುಧಾರಣೆಯಾಗಿದೆ ಎಂದ ಶೇ.87ರಷ್ಟು ಶಿಕ್ಷಕರು
  • ಭಾಷೆ, ಸಂಖ್ಯಾಶಾಸ್ತ್ರಗಳಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮುಂದು

ಕೋವಿಡ್ ಕಾಲದಲ್ಲಿ ಶಾಲಾ ಕಲಿಕೆ ಅರ್ಧಕ್ಕೆ ನಿಂತ ಕಾರಣ 2022-23ನೇ ಶೈಕ್ಷಣಿಕ ಸಾಲಿನಲ್ಲಿ ‘ಕಲಿಕಾ ಚೇತರಿಕಾ’ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಆರಂಭಿಸಿತ್ತು. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಕೌಶಲ್ಯ ಸುಧಾರಣೆಯಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೋವಿಡ್ ಉಲ್ಬಣಗೊಂಡಿದ್ದ ಸಮಯದಲ್ಲಿ ಲಾಕ್‌ಡೌನ್ ಹೇರಿದ್ದ ಕಾರಣ, ಇಡೀ ದೇಶವೇ ಜೈಲಿನಂತಾಗಿತ್ತು. ಶಾಲಾ–ಕಾಲೇಜುಗಳಲ್ಲಿ ಭೋದನೆಯೂ ಮೊಟಕುಗೊಂಡಿತ್ತು. ಈ ವೇಳೆ, ಆನ್‌ಲೈನ್ ತರಗತಿ ಆರಂಭವಾದುದರಿಂದ ವಿದ್ಯಾರ್ಥಿಗಳ ಕಲಿಕೆ ಹಿಂದುಳಿದೆ ಎಂದು ಹಲವು ಶಿಕ್ಷಣ ತಜ್ಞರು ಆಕ್ಷೇಪಿಸಿದ್ದರು. ಇದನ್ನು ಸುಧಾರಿಸುವ ಸಲುವಾಗಿ ‘ಕಲಿಕಾ ಚೇತರಿಕೆ’ ಎಂಬ ಕಾರ್ಯಕ್ರಮ ಆರಂಭಿಸಲಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದಾಗುತ್ತಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಎರಡು ವರ್ಷ ಮಕ್ಕಳು ಪುಸ್ತಕ ಹಿಡಿದಿರಲಿಲ್ಲ. ಜೊತೆಗೆ ಭೌತಿಕವಾಗಿ ತರಗತಿಗಳಿಗೂ ಹಾಜರಾಗಿರಲಿಲ್ಲ. ಇದರಿಂದಾಗಿ ಎಲ್ಲರ ಕಲಿಕಾ ಮಟ್ಟ ಕುಸಿತ ಕಂಡಿತ್ತು. ಇದನ್ನು ಸರಿದೂಗಿಸಲು ಶಿಕ್ಷಣ ಇಲಾಖೆ 2022-23 ಶೈಕ್ಷಣಿಕ ಸಾಲನ್ನು ಕಲಿಕಾ ಚೇತರಿಕೆ ಎಂದು ಘೋಷಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಿಕಾ ಚೇತರಿಕೆಯ ಸಮೀಕ್ಷೆಯೊಂದಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಕರಲ್ಲಿ ಶೇ.87ರಷ್ಟು ಮಂದಿ ಮತ್ತು ಸಮೀಕ್ಷೆಗೆ ಒಳಪಟ್ಟಿದ್ದ ಪೋಷಕರಲ್ಲಿ ಶೇ.88ರಷ್ಟು ಮಂದಿ ಕಲಿಕಾ ಚೇತರಿಕೆಯಿಂದ ಮಕ್ಕಳು ಉತ್ತಮವಾಗಿ ಕಲಿಯುತ್ತಿದ್ದಾರೆ ಎಂದಿದ್ದಾರೆ. ಶೇ.89ರಷ್ಟು ವಿದ್ಯಾರ್ಥಿಗಳು ಮತ್ತು ಶೇ.84ರಷ್ಟು ಶಿಕ್ಷಕರು ಶಾಲೆಗೆ ಬರಲು ಹೆಚ್ಚಿನ ಆಸಕ್ತಿ ಮತ್ತು ಸುಧಾರಿತ ಹಾಜರಾತಿ ಕುರಿತು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಅನೇಕ ಸರ್ಕಾರಿ ಶಾಲೆಗಳಲ್ಲಿ ನಡೆಸಿದ ಸಮೀಕ್ಷೆಯ ಆಧಾರದ ಮೇಲೆ ವಿಮರ್ಶೆಯ ಫಲಿತಾಂಶಗಳ ಪ್ರಕಾರ ತರಗತಿ ಎರಡರಿಂದ ಒಂಭತ್ತನೆ ತರಗತಿ ವಿದ್ಯಾರ್ಥಿಗಳಲ್ಲಿ ಭಾಷೆ, ಸಂಖ್ಯಾಶಾಸ್ತ್ರ ಮತ್ತು ಇತರ ಕೌಶಲ್ಯಗಳಲ್ಲಿ ಸುಧಾರಣೆ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ?: ವೇದಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ; ಎಐಡಿಎಸ್‌ಒ ಕಿಡಿ

ಕಲಿಕಾ ಚೇತರಿಕಾ ಎಂದರೇನು?

ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ಸರ್ಕಾರ ಆರಂಭಿಸಿತ್ತು. ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿತ್ತು.

ಕೋವಿಡ್‌ನಿಂದಾಗಿ ಕಳೆದ ಎರಡು ಮೂರು ವರ್ಷಗಳಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ನಡೆಯದೆ, ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಈ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ರೂಪಿಸಿತ್ತು.

ಫಲಕಗಳು ಮತ್ತು ಕಲಿಕಾ ಹಾಳೆ ಆಧರಿಸಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಾರೆ. ಪ್ರತಿ ತರಗತಿಯಲ್ಲೂ ಹಿಂದಿನ ಎರಡು ವರ್ಷಗಳ ಅಗತ್ಯ ಕಲಿಕಾ ಫಲಗಳು, ಪ್ರಸ್ತುತ ತರಗತಿಯ ಅಗತ್ಯ ಕಲಿಕಾ ಫಲಗಳನ್ನು ಆಧರಿಸಿ ಕಲಿಕಾ ಸಾಮಗ್ರಿಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ವಿಷಯದ ಕಲಿಕಾ ಹಾಳೆ ಪುಸ್ತಕವು 150 ಪುಟಗಳನ್ನು ಒಳಗೊಂಡಿದೆ. ಕಲಿಕಾ ಹಾಳೆಯಲ್ಲಿ ಹಿಂದಿನ ಎರಡು ವರ್ಷಗಳ ವಿಷಯಗಳು ಮಕ್ಕಳಿಗೆ ಎಷ್ಟು ಅರ್ಥವಾಗಿವೆ ಎಂಬುದನ್ನು ಮೌಲ್ಯಮಾಪನ ಮಾಡಿ ಶಿಕ್ಷಕರು ಅಂಕ ನೀಡುತ್ತಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...