ಮೇ 25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

Date:

  • 1,316 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿರುವ ಶಿಕ್ಷಣ ಇಲಾಖೆ
  • ಅನಧಿಕೃತ ಶಾಲೆಗಳಿಂದ ಮಕ್ಕಳ ಭವಿಷ್ಯಕ್ಕೆ ಕುತ್ತು

ರಾಜ್ಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಶಾಲೆಗಳನ್ನು ಮೇ 25ರೊಳಗೆ ಮುಚ್ಚಿಸಬೇಕು. ಈ ಕುರಿತು ವರದಿಯನ್ನು ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ರಾಜ್ಯದಲ್ಲಿ 1,316 ಅನಧಿಕೃತವಾಗಿ ಶಾಲೆಗಳಿವೆ ಎಂದು ಇಲಾಖೆ ಪತ್ತೆ ಹಚ್ಚಿದೆ. “ಹಿಂದಿನ ವರ್ಷದಲ್ಲಿ ಅಂದರೆ 2022-23ರಲ್ಲಿ ಅನಧಿಕೃತ ಶಾಲೆಗಳನ್ನು ಪಟ್ಟಿ ಮಾಡಲಾಗಿದೆ. ಈ ಅನಧಿಕೃತ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕಾಗಿದೆ. 2023-24ರ ಸಾಲಿನಲ್ಲಿಯೂ ಈ ಅನಧಿಕೃತ ಶಾಲೆಗಳನ್ನು ಮುಂದುವರಿಸಿದರೆ, ಇಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪೂರೈಸುವ ಪ್ರಮಾಣ ಪತ್ರಗಳ ನೈಜತೆಯ ಬಗ್ಗೆ ದೃಢೀಕರಿಸುವುದು ಕಷ್ಟವಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯದಲ್ಲಿ ತೊಂದರೆಯನ್ನುಂಟು ಮಾಡುತ್ತದೆ” ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

2023-24ರ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಅನಧಿಕೃತ ಶಾಲೆಗಳು ನಡೆಯುವುದು ಕಂಡುಬಂದರೆ ಜಿಲ್ಲಾ ಉಪನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎನ್ನಲಾಗಿದೆ. ಶಾಲಾ ನೋಂದಣಿ ಅಥವಾ ಅನುಮತಿಯನ್ನು ಪಡೆಯದೇ ನಡೆಸುತ್ತಿರುವ ಶಾಲೆಗಳು, ನೋಂದಣಿ ಇಲ್ಲದೆ ಉನ್ನತೀಕರಿಸಿದ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳು, ರಾಜ್ಯಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿಯನ್ನು ಪಡೆದು, ಅನಧಿಕೃತವಾಗಿ ಕೇಂದ್ರ ಪಠ್ಯಕ್ರಮದಲ್ಲಿ ಬೋಧಿಸುತ್ತಿರುವ ಶಾಲೆಗಳು, ಅನಧಿಕೃತವಾಗಿ ಬೇರೆ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಾಲೆಗಳು ಅನಧಿಕೃತ ಶಾಲೆಗಳೆಂದು ಪರಿಗಣಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (ಕೆಪಿಎಂಟಿಸಿಸಿ), “ಅನಧಿಕೃತ ಶಾಲೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಶಿಕ್ಷಣ ಇಲಾಖೆಯು ಈ ಬಗ್ಗೆ ಕ್ರಮ ವಹಿಸಬೇಕು. ಅಕ್ರಮವಾಗಿ ನಿರ್ಮಾಣವಾಗಿರುವ ಶಾಲೆಗಳ ಬಗ್ಗೆ ಶೀಘ್ರವಾಗಿ ಮಾಹಿತಿ ನೀಡಿದರೆ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯಾವ ಶಾಲೆಗೆ ಸೇರಿಸಬೇಕೆಂದು ಚಿಂತನೆ ನಡೆಸುತ್ತಾರೆ” ಎಂದು ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ?: ಕೇಂದ್ರೀಕರಣಗೊಳ್ಳುತ್ತಿರುವ ಶಿಕ್ಷಣ; ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣ ಅತಂತ್ರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...