ಪರೀಕ್ಷೆ | ಮೌಲ್ಯಮಾಪಕರಿಗೆ ಮೊದಲು ತರಬೇತಿ ಕೊಡಿ: ವಿವಿಗೆ ಹೈಕೋರ್ಟ್ ಸೂಚನೆ

Date:

ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವವರಿಗೆ ಮೊದಲು ತರಬೇತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ರಾಜೀವ್ ಗಾಂಧಿ ಆರೋಪ ವಿಶ್ವವಿದ್ಯಾಲಯದ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಂಬವರು ಪರೀಕ್ಷೆಗಳ ಥಿಯರಿ ಪತ್ರಿಕೆಗಳಗೆ ಅನಿಯಮಿತವಾಗಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ಆರೋಪಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, “ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಅದು ಅವರ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರಬಹುದು. ಅದಕ್ಕಾಗಿ ಸರಿಯಾದ ರೀತಿಯಲ್ಲಿ ಮೌಲ್ಯಮಾಪನ ಮಾಡಬೇಕು. ಮೌಲ್ಯಮಾಪನ ಮಾಡುವವರಿಗೆ ಅಗತ್ಯ ತರಬೇತಿ ನೀಡಬೇಕು” ಎಂದು ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದ್ದಾರೆ.

“ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಸಾವಿರಾರು ಪ್ರಕರಣಗಳು ಬರುತ್ತಿವೆ. ಅವುಗಳಲ್ಲಿ ಹೆಚ್ಚಿನವು ಮೌಲ್ಯಮಾಪನದಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿವೆ. ಆಡಳಿತಾತ್ಮಕ ತೊಂದರೆಗಳ ಕಾರಣಕ್ಕಾಗಿ ಜವಾಬ್ದಾರಿಯನ್ನು ನಿರಾಕರಿಸಲು ಅಥವಾ ತ್ಯಜಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳಲ್ಲಿ ಶೈಕ್ಷಣಿಕ ಮಂಡಳಿಯು ಯಾವ ರೀತಿಯ ಕ್ರಮ ತೆಗೆದುಕೊಂಡಿದೆ ಎಂಬುದನ್ನು ಪರಿಶೀಲಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಾಗಲೇ ಅವುಗಳಿಗೆ ಮಾದರಿ ಉತ್ತರಗಳು ಅಥವಾ ಪ್ರಮುಖ ಉತ್ತರಗಳನ್ನು ಪ್ರಶ್ನೆ ಪತ್ರಿಕೆ ಹೊಂದಿಸಿದವರಿಂದಲೇ ಸಿದ್ದಪಡಿಸಬಹುದು. ಇದು ವಿಶ್ವವಿದ್ಯಾಲಯದ ಮೇಲೆ ಯಾವುದೇ ರೀತಿಯ ಆಡಳಿತಾತ್ಮಕ ಒತ್ತಡ ಉಂಟುಮಾಡುವುದಿಲ್ಲ. ಬದಲಾಗಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ತೊಂದರೆಗಳನ್ನು ಪರಿಹರಿಸಲು ನೆರವಾಗುತ್ತದೆ” ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...