ಹುಡುಗರಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ ಪಿಯುಸಿ ನಂತರ ವಿದ್ಯಾಭ್ಯಾಸ ಮುಂದುವರೆಸಲು ಬಯಸುತ್ತಾರೆ: ಸಮೀಕ್ಷೆ

Date:

ಹುಡುಗರಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ 12ನೇ ತರಗತಿ (ಪಿಯುಸಿ) ನಂತರದ ವಿದ್ಯಾಭ್ಯಾಸ ಮುಂದುವರೆಸಲು ಬಯಸುತ್ತಾರೆ ಎಂದು ವಾರ್ಷಿಕ ಶಿಕ್ಷಣ ವರದಿ-2023 ಬಹಿರಂಗಪಡಿಸಿದೆ.

ಶಿಕ್ಷಣವು ತಮ್ಮ ಅಧ್ಯಯನದಲ್ಲಿನ ಆಸಕ್ತಿಯಲ್ಲಿ ಸಕ್ರಿಯಗೊಳಿಸುತ್ತದೆ. ಉತ್ತಮ ಮಹಿಳೆಯಾಗಲು ನೆರವಾಗುತ್ತದೆ ಎಂದು ಹೆಣ್ಣು ಮಕ್ಕಳು ನಂಬಿಸಿದ್ದಾರೆ ಎಂದು ಸಮೀಕ್ಷಾ ವರದಿ ಹೇಳಿದೆ.

ಸಾಮಾನ್ಯವಾಗಿ, ಹುಡಿಗಿಯರಿಗಿಂತ ಹುಡುಗರು ವಿದ್ಯಾಭ್ಯಾಸವನ್ನು ಮುಂದುವರೆಸಲು ಇಚ್ಛಿಸುತ್ತಿಲ್ಲ. ಅವರು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಸಕ್ತಿ ಹೊಂದಿಲ್ಲ. ಅವರ ಕುಟುಂಬಸ್ಥರು ಶಿಕ್ಷಣಕ್ಕೆ ಒತ್ತುಕೊಟ್ಟರೂ, ಹುಡುಗರು ಶಿಕ್ಷಣವನ್ನು ಕಡಿತಗೊಳಿಸಬಹುದು. ಆದರೆ, ಹುಡುಗಿರಯಲ್ಲಿ ಈ ನಿರ್ಧಾರಗಳು ಅವರ ಕೈಯಲ್ಲಿರುವುದಿಲ್ಲ ಎಂದು ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹುಡುಗಿಯರು ಕನಿಷ್ಠ ಪದವಿಪೂರ್ವ ಹಂತದವರೆಗೆ ಅಧ್ಯಯನ ಮಾಡಲು ಬಯಸುತ್ತಾರೆ. ಆದರೆ, ಹುಡುಗರು ಪಿಯುಸಿ ನಂತರ ತಮ್ಮ ಶಿಕ್ಷಣವನ್ನು ನಿಲ್ಲಿಸುವ ಮಾತನಾಡುತ್ತಾರೆ. ಅವರು ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರೆ, ಸಾಕು ಎಂಬ ಭಾವನೆಯಲ್ಲಿದ್ದಾರೆ” ಎಂದು ವರದಿ ವಿವರಿಸಿದೆ.

ಈ ಸುದ್ದಿ ಓದಿದ್ದೀರಾ?: ಅಸ್ಸಾಂನಲ್ಲಿ ‘ನ್ಯಾಯ್‌ ಯಾತ್ರೆ’ | ಕೆಲವೇ ಮೀಟರ್ ಮಾರ್ಗ ಬದಲಿಸಿದ್ದಕ್ಕೆ ರಾಹುಲ್‌ ವಿರುದ್ಧ ಎಫ್‌ಐಆರ್‌

“ಹೆಣ್ಣುಮಕ್ಕಳಲ್ಲಿ ತಮ್ಮ ಮದುವೆಯ ವಯಸ್ಸಿಗೆ ಸಂಬಂಧಿಸಿದಂತೆ ಸಾಮಾಜಿಕ ರೂಢಿಗಳನ್ನು ಬದಲಾಯಿಸುವುದು ತಮ್ಮ ಕಲಿಕೆಯ ಪ್ರಮುಖ ಅಂಶವಾಗಿದೆ. ಹೆಚ್ಚಿನ ಹುಡುಗಿಯರು 21 ಅಥವಾ 22ನೇ ವಯಸ್ಸಿನ ನಂತರ ಮದುವೆಯಾಗಬೇಕು ಎನ್ನುತ್ತಾರೆ. ಅಲ್ಲಿಯವರೆಗೆ ವ್ಯಾಸಂಗ ಮುಂದುವರಿಸಲು ತಮ್ಮ ಸಮಯ ನೀಡುತ್ತಾರೆ” ಎಂದು ವರದಿ ತಿಳಿಸಿದೆ.

“ಈ ವಯಸ್ಸಿನವರೆಗೆ ಅವರ ವ್ಯಾಸಂಗವು ಸ್ನಾತಕ ಮತ್ತು ಸ್ನಾತಕ್ಕೊತ್ತರ ಶಿಕ್ಷಣವನ್ನು ಪಡೆಯಬಹುದು. ಇದು ಸಾಮಾಜಿಕವಾಗಿ ಅವರು ಗುರುತಿಸಿಕೊಳ್ಳಲು ಹಾಗೂ ಉದ್ಯೋಗ ಹೊಂದಲು ನೆರವಾಗುತ್ತದೆ” ಎಂದು ವರದಿ ಹೇಳಿದೆ.

ಆದರೆ, “ಹುಡುಗರು ಸಾಧ್ಯವಾದಷ್ಟು ಬೇಗ ಹಣ ಸಂಪಾದಿಸುವ ಯೋಜನೆಯನ್ನು ಹೊಂದಿದ್ದಾರೆ. 14-18 ವಯಸ್ಸಿನ ಎಷ್ಟೋ ಹುಡುಗರು ಶಾಲೆಯಲ್ಲಿ ಓದುತ್ತಿರುವಾಗಲೇ ದುಡಿಯಲು ಪ್ರಾರಂಭಿಸಿದ್ದಾರೆ. ಹಣಕಾಸಿನ ಮುಗ್ಗಟ್ಟಿನ ಸಂದರ್ಭಗಳಲ್ಲಿ, ಹುಡುಗರು ತಮ್ಮ ಶಾಲಾ ಶುಲ್ಕವನ್ನು ಪಾವತಿಸಲು ಬಯಸಿದರೆ ತಮ್ಮದೇ ಆದ ಆದಾಯದ ಮೂಲಗಳನ್ನು ಕಂಡುಕೊಳ್ಳುವ ಆಯ್ಕೆಯನ್ನು ಹೊಂದಬೇಕಾಗಿದೆ” ಎಂದು ವರದಿ ವಿವರಿಸಿದೆ.

ವಾರ್ಷಿಕ ಶಿಕ್ಷಣ ವರದಿಯ ಸಮೀಕ್ಷೆಯು ದೇಶದ 26 ರಾಜ್ಯಗಳ 28 ಜಿಲ್ಲೆಗಳಲ್ಲಿ ನಡೆದಿದೆ ಸಮೀಕ್ಷೆಗೆ 14-18 ವಯಸ್ಸಿನ ಒಟ್ಟು 34,745 ಮಂದಿಯನ್ನು ಒಳಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...