ಬಿಎಸ್ಸಿ ನರ್ಸಿಂಗ್ ‘ಸಿಇಟಿ’ಗೆ ಅರ್ಜಿ ಆಹ್ವಾನ

Date:

ಬಿಎಸ್ಸಿ ನರ್ಸಿಂಗ್ ಪರೀಕ್ಷೆಗೆ ಈ ವರ್ಷದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯ ಎಂದು ಪ್ರಕಟಣೆಯಾದ ಬೆನ್ನಲ್ಲೆ, ಆನ್‌ಲೈನ್‌ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.

ಮ್ಯಾನೆಜ್‌ಮೆಂಟ್ ಸೀಟಿಗಾಗಿ ಹಲವು ವಿದ್ಯಾರ್ಥಿಗಳು ಪರದಾಡುವುದನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ವರ್ಷದಿಂದ ಬಿಎಸ್ಸಿ ನರ್ಸಿಂಗ್‌ ವಿಷಯಕ್ಕೂ ಸಿಇಟಿ ಕಡ್ಡಾಯ ಮಾಡಿದೆ. ಅರ್ಜಿ ಸಲ್ಲಿಕೆಗೆ ಏ.22 ಕೊನೆಯ ದಿನಾಂಕವಾಗಿದೆ.

ಬಿಎಸ್ಸಿ (ನರ್ಸಿಂಗ್) ಕೋರ್ಸ್‌ಗಳಿಗೆ ಸಿಇಟಿ ಮೂಲಕ ಪ್ರವೇಶಾತಿ ಬಯಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ವಿಷಯಗಳನ್ನು ಅಭ್ಯಸಿಸಿ ಒಟ್ಟಾರೆ ಕನಿಷ್ಠ ಶೇ.45ರಷ್ಟು ಅಂಕಗಳನ್ನು ಒಡೆದು ತೇರ್ಗಡೆಯಾಗಿರಬೇಕು. ಜೊತೆಗೆ, ಇಂಗ್ಲಿಷ್‌ ವಿಷಯವನ್ನೂ ಅಭ್ಯಾಸ ಮಾಡಿರಬೇಕು. ಎಸ್ಸಿ, ಎಸ್ಟಿ, ಮತ್ತು ಇತರೆ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಮತ್ತು 3ಬಿಗಳಿಗೆ ಸೇರಿರುವ ಅಭ್ಯರ್ಥಿಗಳು ಶೇ.40 ರಷ್ಟು ಅಂಕಗಳಿಸಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಸ್ಸಿ ನರ್ಸಿಂಗ್ ಕೋಸ್‌ಗಳ ಪ್ರವೇಶಾತಿಗೆ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಏ. 22 ರಾತ್ರಿ 11.59 ರವರೆಗೆ ಸಿಇಟಿ-2023ಕ್ಕೆ ನೋಂದಣಿ ಮಾಡಿಕೊಂಡು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ದಿನದೊಳಗೆ ನಿಗದಿತ ಶುಲ್ಕವನ್ನು ಪಾವತಿಸಬೇಕು.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ?: ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರಲಿ: ಯುಜಿಸಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...