‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ’ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Date:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪ್ರೊಫೆಶನಲ್ ಕೋರ್ಸ್‌ನ ವಿದ್ಯಾರ್ಥಿಗಳಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್‌ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ ಎಂದು ಕೆಎಂಡಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜೂನ್ 21ರಿಂದ ಅವಕಾಶ ಕಲ್ಪಿಸಲಾಗಿದ್ದು, ಜುಲೈ 7, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಂದು ನಿಗಮವು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಲು ಅರ್ಜಿ ಸಲ್ಲಿಸಬಹುದು.

ಅರ್ಹತೆ

  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್ ಕೋರ್ಸ್‌ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 5,00,000/- ವನ್ನು ನೀಡಲಾಗುತ್ತದೆ.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬಿ. ಡಿ. ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 1,00,000 ವರೆಗೆ ಮತ್ತು ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್‌ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 50,000ಗಳವರೆಗೆ ಸಾಲದ ನೆರವು.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬ್ಯಾಚುಲರ್ ಆಫ್ ಆರ್ಕಿಟೆಕ್ಟ್‌/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 50,000 ನೆರವು.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ ಬಿ ಎ, ಎಂ ಸಿ ಎ, ಎಲ್ ಎಲ್ ಬಿ ಕೋರ್ಸ್‌ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ ರೂ.50,000/-ಗಳನ್ನು ಸಾಲವಾಗಿ ನೀಡಲಾಗುತ್ತದೆ.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Sc. in Horticulture, Agriculture, Dairy Technology, Forestry, Veterinary, Animal science, Food Technology, Bio Technology, Fisheries, Sericulture, Home/community Sciences, Food Nutrition and Dietetics, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳ ವರೆಗೆ ಸಾಲ.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳವರೆಗೆ ಸಾಲ.
  • ಎಲ್ಲ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಕ್ಕಿಂತ ಕಡಿಮೆ ಇರಬೇಕು.. ವಿದ್ಯಾರ್ಥಿಯು ಪಡೆದ ಸಾಲವನ್ನು ಕೋರ್ಸ್ ಮುಗಿದ 1 ವರ್ಷದ ನಂತರ 48 ತಿಂಗಳ ಅವಧಿಯಲ್ಲಿ 2% ಬಡ್ಡಿ ದರದೊಂದಿಗೆ ಮರುಪಾವತಿ ಮಾಡಬೇಕು.

ಇರಬೇಕಾದ ದಾಖಲೆಗಳು:

  1. ಬೊನಾಫೈಡ್/ಅಧ್ಯಯನ ಪ್ರಮಾಣಪತ್ರ
  2. ಕಾಲೇಜು ಶುಲ್ಕದ ವಿವರ
  3. ಹಿಂದಿನ ವರ್ಷ ಪಾಸಾದ ಅಂಕಪಟ್ಟಿ
  4. ಕಾಲೇಜು ಬ್ಯಾಂಕ್ ವಿವರಗಳು
  5. ಭದ್ರತಾ ಠೇವಣಿ (ಸಾಲದ ಮೊತ್ತದ 12%) ಪಾವತಿ ಮಾಡಿದ ರಶೀದಿ
  6. KEA ದಾಖಲಾತಿ ಆದೇಶ ಪ್ರತಿ
  7. ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ

ಆನ್‌ಲೈನ್ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಕೆಎಂಡಿಸಿಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Website ಲಿಂಕ್: https://kmdconline.karnataka.gov.in/Portal/home

kmdc

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...