ಕೆಪಿಎಸ್‌ಸಿ | ಮರುಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Date:

ಆಗಸ್ಟ್ 27ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದ್ದು, ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

“ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ತಮ್ಮ ಅಳಲನ್ನು ಹಲವು ಮಾಧ್ಯಮಗಳ ಮುಂದೆ ತೋಡಿಕೊಂಡಿರುವುದನ್ನು ನೋಡಿ ಸಂಕಟವಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ತಾವು ಮಾಡಿರುವ ಅನ್ಯಾಯವನ್ನು ಒಪ್ಪಿಕೊಳ್ಳದೇ ಬೇರೆ ಬೇರೆ ರೀತಿಯಲ್ಲಿ ಇದನ್ನು ಸಮರ್ಥಿಸಿಕೊಳ್ಳುತ್ತಿರುವ ಅಧಿಕಾರಿಗಳ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ.

ಸುಮಾರು ಒಂದು ಲಕ್ಷದ ಮೂವತ್ತಾರು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೆ ಇವರಲ್ಲಿ ಸುಮಾರು ಒಂದು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಗ್ರಾಮೀಣ ಹಿನ್ನೆಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು. ಕೆಲವಾರು ವರ್ಷಗಳಿಂದಲೂ ಇವರು ಕನ್ನಡ ಮಾಧ್ಯಮದ ಮೂಲಕವೇ ಕೆಎಎಸ್ ಪರೀಕ್ಷೆಗಾಗಿ ಅಧ್ಯಯನ ಮಾಡುತ್ತಿದ್ದವರು. ಇಂತವರಿಗೆ ಸರಿಯಾಗಿ ಅರ್ಥವೂ ಆಗದ ರೀತಿಯಲ್ಲಿ ಪ್ರಶ್ನೆಗಳನ್ನು ಕೊಟ್ಟಿದ್ದರ ಹಿಂದೆ ಯಾವ ಉದ್ದೇಶವಿದೆ? ಒಂದೋ ಎರಡೋ ಪ್ರಶ್ನೆಗಳಾಗಿದ್ದರೆ ಏನೋ ಲೋಪವಾಗಿದೆ ಎಂದುಕೊಳ್ಳಬಹುದು. ಸುಮಾರು 60 ಪ್ರಶ್ನೆಗಳಲ್ಲಿ ಅಂದರೆ 120 ಅಂಕಗಳ ಪ್ರಶ್ನೆಗಳಲ್ಲಿ ಪ್ರಶ್ನೆಗಳೇ ಅರ್ಥವಾಗದ ರೀತಿಯಲ್ಲಿ ಗೊಂದಲ ಮೂಡಿಸುವ ಪ್ರಶ್ನೆಗಳಿವೆ ಎಂದರೆ ಇದು ಸಣ್ಣಪುಟ್ಟ ಲೋಪವಾಗಿರಲು ಸಾಧ್ಯವಿಲ್ಲ. ಇದರ ಹಿಂದೆ ಯಾರ ಹುನ್ನಾರವಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ನದಿ ವ್ಯವಸ್ಥೆ ಎಂದು ಕೊಡಬೇಕಾದ ಕಡೆ “ಚರಂಡಿ ವ್ಯವಸ್ಥೆ” ಎಂದೂ, ಭಾರವಾದ ಎಂಬುದರ ಬದಲಿಗೆ ಅತಿ ವೇಗವಾದ ಎಂದೂ, ಸಿಸ್ಟರ್ ಎಂಬುದಕ್ಕೆ ಸಹೋದರ ಎಂದೂ, ರಾಜ್ಯ ವಿಧಾನಸಭೆ ಎಂಬುದರ ಬದಲಿಗೆ ರಾಜ್ಯಸಭೆ ಎಂದೂ, ಕಲೆ ಎಂದು ಕೊಡುವ ಬದಲಿಗೆ ವಸ್ತು ಎಂದೂ, ಬೇರಿನಾಕಾರದ ಎಂದು ಕೊಡುವ ಬದಲಿಗೆ ಸಸ್ಯಾಂಕಿತ ಎಂದೂ, ತಪ್ಪಾದ ಇಲ್ಲವೇ ಸರಿಯಲ್ಲದ ಎಂದು ಕೊಡುವ ಕಡೆ ಸರಿಯಾದ ಎಂದೂ ವಿತ್ತೀಯ ಇಲ್ಲವೇ ಹಣಕಾಸು ಎಂದು ಕೊಡಬೇಕಾದ ಕಡೆ ಆರ್ಥಿಕ ಎಂದೂ ಕೆಎಎಸ್ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಕೊಡುವುದು ಕೇವಲ ಭಾಷಾಂತರದ ಸಮಸ್ಯೆ ಎನಿಸುವುದಿಲ್ಲ. ಒಂದು ಪ್ರಶ್ನೆ ಪತ್ರಿಕೆ ತಯಾರು ಮಾಡಲು ಬೇಕಾದ ಕನಿಷ್ಟ ಮಟ್ಟದ ತಿಳಿವಳಿಕೆಯಾಗಲೀ, ಸೂಕ್ತ ತರಬೇತಿಯಾಗಲೀ, ಸೂಕ್ತ ಮಾನದಂಡವಾಗಲೀ ಕೆಪಿಎಸ್ಸಿ ಹೊಂದಿಲ್ಲ ಎಂಬುದಕ್ಕೆ ಇದು ನಿದರ್ಶನವಾಗಿದೆ.

ಇಷ್ಟು ಬೇಜವಾಬ್ದಾರಿ ಇರುವ ಅಧಿಕಾರಿಗಳಿಗೆ ಅಥವಾ ಸಂಸ್ಥೆಗಳಿಗೆ ಕನ್ನಡಿಗರ ತೆರಿಗೆ ಹಣದಲ್ಲಿ ಕೋಟ್ಯಂತರ ರೂಪಾಯಿಗಳನ್ನು ಸರ್ಕಾರ ವೆಚ್ಚ ಮಾಡುವುದು ಯಾವ ಪುರುಷಾರ್ಥಕ್ಕೆ? ಕರ್ನಾಟಕದಲ್ಲಿ ನಡೆಯುವ ಯಾವುದೇ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮೊದಲು ಕನ್ನಡದಲ್ಲಿ ತಯಾರಾಗಬೇಕು. ಅದನ್ನು ನಂತರ ಇಂಗ್ಲಿಷಿಗೆ ತರ್ಜುಮೆ ಮಾಡಿಸಬೇಕು. ಆದರೆ ಇದನ್ನು ಕೆಪಿಎಸ್ಸಿ ಅನುಸರಿಸದೇ ದುಂಡಾವರ್ತನೆ ಪ್ರದರ್ಶಿಸಿದೆ. ಕರ್ನಾಟಕದಲ್ಲಿ ಪರೀಕ್ಷೆ ನಡೆಸುವಾಗ ಮೊದಲು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ ತಯಾರಿಸಿ ಅದನ್ನು ಕನ್ನಡಕ್ಕೆ ಭಾಷಾಂತರ ಮಾಡಿಸುವುದು ಅವೈಜ್ಞಾನಿಕ ಮತ್ತು ಕನ್ನಡ ವಿರೋಧಿತನ. ಇದನ್ನು ಕರವೇ ತೀವ್ರವಾಗಿ ಖಂಡಿಸುವುದರ ಜೊತೆಗೆ ಈ ಕೂಡಲೇ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಗ್ರಹಪಡಿಸುತ್ತದೆ.

ಈ ಕೂಡಲೇ ಕೆಪಿಎಸ್ಸಿ ಮೊನ್ನೆ ನಡೆಸಿದ ಪರೀಕ್ಷೆಯನ್ನು ಅಸಿಂಧು ಎಂದು ಪರಿಗಣಿಸಿ ಮರುಪರೀಕ್ಷೆಗೆ ಸೂಚನೆ ಹೊರಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸುತ್ತದೆ. ಇದಕ್ಕೆ ಯಾವುದೇ ಸಬೂಬು ಹೇಳಿ ತಮ್ಮ ಕನ್ನಡ ವಿರೋಧಿ ಧೋರಣೆಯನ್ನು ಮುಚ್ಚಿಕೊಳ್ಳುವುದನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡುತ್ತಿದ್ದೇವೆ. ಒಂದು ವೇಳೆ ಕೆಪಿಎಸ್‌ಸಿ ಕನ್ನಡಿಗರ ಆಗ್ರಹಕ್ಕೆ ಮಣಿಯದಿದ್ದರೆ ತೀವ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಕ್ಷಣದ ಆಗ್ರಹಗಳು:
೧. ಕೆಪಿಎಸ್ಸಿ ಕೂಡಲೇ ಮರು ಪರೀಕ್ಷೆಗೆ ಆದೇಶ ಹೊರಡಿಸಬೇಕು.
೨. ಮೊನ್ನೆ ನಡೆದ ಪರೀಕ್ಷೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.
೩. ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಯಾವುದೇ ಪರೀಕ್ಷೆಯ ಪ್ರಶ್ನೆಪತ್ರಿಕೆ ಮೊದಲು ಕನ್ನಡದಲ್ಲಿ ತಯಾರಾಗುವಂತೆ ಆದೇಶ ಹೊರಡಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...