ಶಿಕ್ಷಣ ಕ್ಷೇತ್ರದ ಬದಲಾವಣೆಗೆ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡಲಿ: ನಿರಂಜನಾರಾಧ್ಯ ವಿ ಪಿ

Date:

  • ಪಠ್ಯಪುಸ್ತಕ, ಶಿಕ್ಷಣ ಕ್ಷೇತ್ರ ಸಂವಿಧಾನಕ್ಕೆ ಬದ್ಧವಾಗಿರಲಿ
  • ಶಿಕ್ಷಕರ ನೇಮಕ ವೇಗಗತಿಯಲ್ಲಿ ಆರಂಭವಾಗಲಿ

ಶಾಲಾ ಶಿಕ್ಷಣವನ್ನು ಹಾಳುಗೆಡವಿ, ರಾಜಕೀಯ ದಾಳವನ್ನಾಗಿ ಬಳಸಿಕೊಂಡಿದ್ದ ಬಿಜೆಪಿ ಸರ್ಕಾರದ ರೀತಿನೀತಿಗಳನ್ನು ಅಲ್ಲಗೆಳೆದು ಶಿಕ್ಷಣ ಕ್ಷೇತ್ರದಲ್ಲಿ ಅಗಬೇಕಿರುವ ಅಭಿವೃದ್ಧಿಯ ಬಗ್ಗೆ ಮೊದಲ ಸಚಿವ ಸಂಪುಟದಲ್ಲಿ ಚರ್ಚಿಸಬೇಕೆಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ  ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಮನವಿ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭಿಮತ ಪಡೆದು ವಿಜಯ ಸಾಧಿಸಿದೆ. ಸನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಾದ ನಂತರ ವಾಡಿಕೆಯಂತೆ ನಡೆಯುವ ಮೊದಲ ಸಚಿವ ಸಂಪುಟ ಸಭೆಯಲ್ಲಿ ಶಾಲಾ ಶಿಕ್ಷಣದಲ್ಲಾಗಿರುವ ಅನ್ಯಾಯದ ಬಗ್ಗೆ ಚರ್ಚಿಸಲು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಅವರು ಮನವಿ ಮಾಡಿದ್ದಾರೆ.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಶಿಕ್ಷಣವನ್ನು ಸಂಪೂರ್ಣವಾಗಿ ರಾಜಕೀಯಕ್ಕೆ ಬಳಸಿಕೊಂಡಿತ್ತು. ರಾಷ್ಟ್ರೀಯತೆಯ ಹೆಸರಲ್ಲಿ ವಿದ್ಯಾರ್ಥಿಗಳ ತಲೆಯಲ್ಲಿ ವಿಷ ಬೀಜ ಬಿತ್ತುತ್ತಿದೆ. ಶಿಕ್ಷಣದ ಪ್ರಕ್ರಿಯೆಯನ್ನೇ ಸರ್ವನಾಶ ಮಾಡಲಾಗಿದೆ. ಬಡ ಮಕ್ಕಳಿಗೆ ಸಿಗುತ್ತಿದ್ದ ಹಲವು ಸಂವಿಧಾನಬದ್ಧ ಉತ್ತೇಜಕಗಳನ್ನು ಕಸಿದುಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳನ್ನು ಹೀನಾಯವಾಗಿ ದುರ್ಬಲಗೊಳಿಸಿದ್ದಾರೆ. ಇದರಲ್ಲಿ ಹಲವು ಅಧಿಕಾರಿಗಳ ಪಾತ್ರವೂ ಇದೆ ಈ ಬಗ್ಗೆ ತಾವು ಗಮನ ಹರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿನ ಹೊಸ ಸರ್ಕಾರ ಶಿಕ್ಷಣವನ್ನು ಸಾಮಾಜಿಕ ಒಳಿತು ಮತ್ತು ಸಾಮಾಜಿಕ ಪರಿವರ್ತನೆಯ ಸಾಧನವೆಂಬ ವಿಶಾಲ ದೃಷ್ಟಿಯಲ್ಲಿ ಪರಿಭಾವಿಸಬೇಕಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಶಾಲೆ ಆರಂಭವಾಗಲು ಕೇವಲ 10 ದಿನಗಳು (ಮೇ 29,2023) ಮಾತ್ರ ಬಾಕಿ ಇದೆ. ಶಿಕ್ಷಣದ ವಿಷಯವನ್ನು ಅತ್ಯಂತ ಜರೂರಿನ ವಿಷಯವನ್ನಾಗಿ ಪರಿಗಣಿಸಿ, ಎಲ್ಲ ರೀತಿಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನಿರೀಕ್ಷೆಗಿಂತ ಕಡಿಮೆ ಫಲಿತಾಂಶ; ಮರು ಪರೀಕ್ಷೆಗೆ ಸಜ್ಜಾದ 151 ಪಿಯುಸಿ ವಿದ್ಯಾರ್ಥಿಗಳು

ಶಿಕ್ಷಣ ಕ್ಷೇತ್ರದಲ್ಲಿ ತರಬೇಕಾದ ತಕ್ಷಣದ ಆದ್ಯತೆ

2021-22  ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಸರಿ ಸುಮಾರು1,41,358 . ಈ ಪೈಕಿ 13,352  ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಶಾಲೆ ಆರಂಭವಾಗುವ ಮುನ್ನ ಅವರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸುವುದು.

2019-2010  ಸ್ಥಗಿತವಾಗಿರುವ ಬೈಸಿಕಲ್ ವಿತರಣೆ ಪುನರ್ ಆರಂಭಿಸುವುದು. ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತೀ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಇಂದಿರಾ ಕ್ಯಾಂಟೀನ್ ನಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಚಿತ ಊಟ ಒದಗಿಸಬೇಕು . 

ಸ್ಪಷ್ಟ ಮಾರ್ಗಸೂಚಿ  ಹೊರಡಿಸುವುದು .

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಸಾರಾಸಗಟಾಗಿ ತಿರಸ್ಕರಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ, ಜಾರಿಗೊಳಿಸುವುದು. ಸಂವಿಧಾನಕ್ಕೆ ವಿರುದ್ಧವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದ ಸಮಿತಿಯ ಅಧ್ಯಕ್ಷರು ಮತ್ತು ತಂಡದ ಸದಸ್ಯರ  ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದು. ಪಠ್ಯಗಳ ಸರಬರಾಜು ಮತ್ತು ಅವುಗಳಕ್ಕ ಮುದ್ರಣಕ್ಕೆ ಖರ್ಚಾದ ಹಣ ಅವರಿಂದಲೇ ವಸೂಲು ಮಾಡಬೇಕು.

ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ ಪ್ರಕ್ರಿಯೆಯನ್ನುಪೂರ್ಣವಾಗಿ ನಿಲ್ಲಿಸುವುದು. ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ಪೂರ್ಣವಾಗಿ ನಿಯಂತ್ರಿಸುವುದದು

ಮಕ್ಕಳಿಗೆ ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರ ಯೋಜನೆಯನ್ನು ಜಾರಿಗೊಳಿಸುವುದು. ರಾಜ್ಯದಲ್ಲಿ ಅಪೌಷ್ಠಿಕತೆ ತೊಡೆದು ಹಾಕಲು ಅಂಗನವಾಡಿಯಿಂದ  10 ನೇ ತರಗತಿಯ ಎಲ್ಲಾ ಮಕ್ಕಳಿಗೆ  ಪ್ರತಿದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ಅಣಬೆಯಂತೆ ತೆರೆಯಲು ನೀಡುವ ಅನುಮತಿಯನ್ನು ಸ್ಥಗಿತಗೊಳಿಸಬೇಕು. ರಾಜ್ಯ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇ. 20 ರಷ್ಟು ಮೀಸಲಿಡಬೇಕು  ಎಂದು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...