ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು; 16 ಶಿಕ್ಷಕರ ಅಮಾನತು

Date:

ಏ.3ರಂದು ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮುಖ್ಯ ಶಿಕ್ಷಕ ಸೇರಿದಂತೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಮಾರ್ಚ್‌ 31ರಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಗೊಬ್ಬುರು (ಬಿ) ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಶಿಕ್ಷಕರು ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ, ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಕಲಬುರಗಿ ಅಪರ ಪ್ರಾದೇಶಿಕ ಆಯುಕ್ತ ಆನಂದ ಪ್ರಕಾಶ್ ಆದೇಶ ಹೊರಡಿಸಿದ್ದಾರೆ.

ಕರ್ತವ್ಯದಲ್ಲಿದ್ದ ಪರೀಕ್ಷಾ ಸಿಬ್ಬಂದಿ, ಮೇಲ್ವಿಚಾರಕರು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಟ್ಟು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಹೆಚ್ಚುವರಿ ಆಯುಕ್ತರು ಪ್ರಕಾಶ್ ಮೀನಾ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಸಲ್ಲಿಸಿದ ವರದಿ ಆಧರಿಸಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಪಿ ಇಶಾ ಪಂತ್ ಅವರು ಸೋಮವಾರ ಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೊಠಡಿಯ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಈ ವೇಳೆ, ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಲು ಮೈಕ್ರೋ ಜೆರಾಕ್ಸ್‌ ನಕಲು ಚೀಟಿಗಳನ್ನು ಬಳಸುತ್ತಿದ್ದರು. ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿದೆ ಎಂದು ಇಶಾ ಪಂತ್ ವರದಿ ನೀಡಿದ್ದರು.

ನಕಲು ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕ ಗೋಳಾಲ್ಲಪ್ಪ ಗುರಪ್ಪ, 15 ಸಹಾಯಕ ಶಿಕ್ಷಕರಾದ ಭೀಮಾಶಂಕರ ಮಡಿವಾಳ, ರವೀಂದ್ರ, ದೇವೇಂದ್ರಪ್ಪ ಯರಗಲ್, ಸವಿತಾ ಬಾಯಿ ಜಮಾದಾರ್, ಅನಿತಾ, ನಾಗಮ್ಮ, ರೇವಣಸಿದ್ದಪ್ಪ, ಪರ್ವೀನ್ ಸುಲ್ತಾನ, ಬಾಬು ಪವಾರ್, ಕವಿತಾ, ಜಯಶ್ರೀ, ವಿದ್ಯಾವತಿ, ಗಾಯತ್ರಿ ಬಿರಾದಾರ್, ಮೀನಾಕ್ಷಿ ಹಾಗೂ ಅರುಣಕುಮಾರ ಎಂಬುವವರನ್ನು ಅಮಾನತ್ತುಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಕೃಪಾಂಕ ಬೇಕೆ?

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...