ನೀಟ್‌ ಪರೀಕ್ಷೆ | ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರು

Date:

  • 13 ಭಾಷೆಗಳಲ್ಲಿ 720 ಅಂಕಗಳಿಗೆ ಪರೀಕ್ಷೆಯಿತ್ತು
  • ನಿಗದಿತ ಅವಧಿ ಮೀರಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ  

ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕೆ ಮಣಿಪುರ ರಾಜ್ಯ ಹೊರತು ಪಡಿಸಿ, ಉಳಿದೆಲ್ಲ ರಾಜ್ಯಗಳ 400ಕ್ಕೂ ಹೆಚ್ಚು ನಗರಗಳಲ್ಲಿ ನೀಟ್ (ಪರೀಕ್ಷೆ) ನಡೆದಿದೆ. 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಪರೀಕ್ಷೆ ನಡೆಯುತ್ತಿದ್ದ ದಿನದಂದೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಗೊಂದಲಗಳ ನಡುವೆಯೂ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ, ಪರೀಕ್ಷೆ ಬರೆದಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಪಶುವೈದ್ಯಕೀಯ, ಹೋಮಿಯೊಪಥಿ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ನಡೆಸಿತು. ಎಲ್ಲ ಕೇಂದ್ರಗಳ ಬಳಿ ಪೊಲೀಸ್‌ ಭದ್ರತೆ ಇತ್ತು. ವಿದ್ಯಾರ್ಥಿಗಳು ಧರಿಸಿ ಬಂದಿದ್ದ ಶೂ, ಆಭರಣಗಳನ್ನು ತೆಗೆಸಿ ಕೇಂದ್ರಕ್ಕೆ ಪ್ರವೇಶ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀಟ್ ಬರೆಯಲು 20,87,499 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ನೀಟ್‌ಗೆ ದೇಶದಲ್ಲೇ ಹೆಚ್ಚು ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದೆ. 245 ಕೇಂದ್ರಗಳಲ್ಲಿ 1,47,581 ಅಭ್ಯರ್ಥಿಗಳು ಪರೀಕ್ಷೆಗೆ ನಡೆದಿದ್ದು, ಕಳೆದ ವರ್ಷಕ್ಕಿಂತ 5,295 ಹೆಚ್ಚು ಮಂದಿ ತಮಿಳುನಾಡಿನಲ್ಲಿ ಪರೀಕ್ಷೆ ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಐಟಿಗಳಲ್ಲಿ ನೆಪಕ್ಕಷ್ಟೇ ಇರುವ ಎಸ್‌ಸಿ, ಎಸ್‌ಟಿ ವಿಭಾಗಗಳು

ಪರೀಕ್ಷೆಯಿಂದ ಹೊರಗುಳಿದ ಮಣಿಪುರ

ಮಣಿಪುರದಲ್ಲಿ 5,751 ವಿದ್ಯಾರ್ಥಿಗಳು ಹಾಜರಾಗಲು ಸಿದ್ಧರಾಗಿದ್ದರು. ಆದರೆ, ಅಲ್ಲಿ ಹಿಂಸಾಚಾರ ಕೈ ಮೀರಿದ್ದರಿಂದ ಗೃಹ ಸಚಿವಾಲಯದ ಮನವಿ ಮೇರೆಗೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲಿನ 22 ಕೇಂದ್ರಗಳನ್ನು ಹೊರತುಪಡಿಸಿ ಭಾರತದಾದ್ಯಂತ 4,075 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...