ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರಲಿ: ಯುಜಿಸಿ

Date:

ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ನಡೆಯುವ ಪರೀಕ್ಷೆಗಳು ಪ್ರಾದೇಶಿಕ ಭಾಷೆಗಳಲ್ಲೇ ಇರಲಿ ಎಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲ ಕೇಂದ್ರಿಯ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿರುವ ಯುಜಿಸಿ, “ಬೋಧನೆ, ಕಲಿಯುವಿಕೆ ಆಂಗ್ಲ ಭಾಷೆಯಲ್ಲಿದ್ದರೂ ಸಹ ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆ ಬರೆಸುವುದು ಉತ್ತಮ. ಸ್ಥಳೀಯ ಮತ್ತು ಪ್ರಾದೇಶಿಕ ಭಾಷೆಗಳ ಬಳಕೆ ಮಾಡುವುದಕ್ಕೆ ಉತ್ತೇಜಿಸುವ ಉದ್ದೇಶ ಈ ಯೋಜನೆಯದ್ದಾಗಿದೆ” ಎಂದು ಹೇಳಿದೆ.

“ಪಠ್ಯಪುಸ್ತಕ ಕೈಪಿಡಿಗಳ ರಚನೆ ಇಂಗ್ಲಿಷ್‌ಗೆ ಮಾತ್ರ ಸೀಮಿತವಾಗದೆ, ಪ್ರಾದೇಶಿಕ ಭಾಷೆಗಳಲ್ಲು ತರ್ಜುಮೆಗೊಳಿಸುವಂತೆ ಬೇಡಿಕೆ ಇದೆ. ಇದರಿಂದಾಗಿ ಕಲಿಯುವ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳ ಗುಂಪು ಕ್ರಮೇಣವಾಗಿ ಏರಿಕೆಯಾಗುತ್ತದೆ. ಇತ್ತೀಚೆಗೆ ಐಐಟಿಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಕೆಯನ್ನು ಅರ್ಧಕ್ಕೆ ಬಿಟ್ಟಿದ್ದಾರೆ. ಇನ್ನೂ ಕೆಲವರು ವರ್ಗಾವಣೆಗೊಂಡಿದ್ದಾರೆ. ಇಂತಹ ಸನ್ನಿವೇಶಗಳನ್ನು ತಡೆಯಲು ಇದೊಂದು ಸರಿಯಾದ ಮಾರ್ಗವಾಗಿದೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಾದೇಶಿಕ ಭಾಷೆಗಳಲ್ಲಿ ಪುಸ್ತಕ ಪ್ರಕಟಣೆ, ಪರೀಕ್ಷೆ ಬರೆಯುವುದರಿಂದ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತದೆ. 2035ರ ವೇಳೆಗೆ ಉನ್ನತ ಶಿಕ್ಷಣದಲ್ಲಿ ದಾಖಲಾತಿ ದರ (ಜಿಇಆರ್) ಶೇಕಡಾ 27 ರಿಂದ 50ಕ್ಕೆ ಹೆಚ್ಚಿಸಬಹುದು” ಎಂದು ಯುಜಿಸಿ ಮುಖ್ಯಸ್ಥ ಜಗದೀಶ್‌ ಕುಮಾರ್ ಎಂ ತಿಳಿಸಿದ್ದಾರೆ.

ಸ್ಥಳೀಯ ಭಾಷೆಗಳಲ್ಲಿ ಮೂಲ ಬರವಣಿಗೆಯ ಅನುವಾದವನ್ನು ಉತ್ತೇಜಿಸಬೇಕು ಮತ್ತು ಬೋಧನೆ-ಕಲಿಕೆಯಲ್ಲಿ ಸ್ಥಳೀಯ ಭಾಷೆಯನ್ನು ಬಳಸಬೇಕೆಂದು ವಿವಿಗಳಿಗೆ ಯುಜಿಸಿ ಹೇಳಿದೆ. 

ಈ ಸುದ್ದಿ ಓದಿದ್ದೀರಾ?: ಮೇ.25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...