ರಾಜ್ಯದ ನಾಲ್ಕು ವಿವಿಗಳಲ್ಲಿ ಪೂರ್ಣಕಾಲಿಕ ಕುಲಪತಿಗಳೇ ಇಲ್ಲ

Date:

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗ ವಿಶ್ವವಿದ್ಯಾಲಯ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯಗಳು ಪೂರ್ಣಕಾಲಿಕ ಕುಲಪತಿಗಳು ಇಲ್ಲದೆ ಕಾರ್ಯನಿರ್ವಹಿಸುತ್ತಿವೆ.

ಮೂರು ತಿಂಗಳ ಹಿಂದೆಯೇ ಕುಲಪತಿ ಹುದ್ದೆಗಳಿಗೆ ಶೋಧ ಸಮಿತಿಗಳು ಹೆಸರುಗಳನ್ನು ಶಾರ್ಟ್‌ಲಿಸ್ಟ್‌ ಮಾಡಿದರೂ, ಕುಲಪತಿಗಳ ನೇಮಕವಾಗಿಲ್ಲ ಎಂದು ಹೇಳಲಾಗಿದೆ. ಹಿಂದೆ ಇದ್ದ ಕುಲಪತಿಗಳು ನಿವೃತ್ತರಾದ ಬಳಿಕ, ತಾತ್ಕಾಲಿಕ ಅಥವಾ ಉಸ್ತುವಾರಿ ಕುಲಪತಿಗಳ ಅಡಿಯಲ್ಲಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ.

ಮೂಲಗಳ ಪ್ರಕಾರ, ಈ ನಾಲ್ಕು ವಿಶ್ವವಿದ್ಯಾಲಯಗಳಿಗೆ ಹೊಸ ಕುಲಪತಿಗಳ ಹೆಸರನ್ನು ರಾಜ್ಯಪಾಲರು ಘೋಷಿಸಲು ಅಗತ್ಯ ಔಪಚಾರಿಕ ಕ್ರಮಗಳನ್ನು ಸರ್ಕಾರ ಪೂರ್ಣಗೊಳಿಸಿಲ್ಲ. ಈ ವಿಶ್ವವಿದ್ಯಾನಿಲಯಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಮತ್ತು ಇತರ ವಿಷಯಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಉಸ್ತುವಾರಿ ಅಥವಾ ತಾತ್ಕಾಲಿಕ ಕುಲಪತಿಗಳಿಗೆ ಅಧಿಕಾರ ನೀಡಲಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಶ್ವವಿದ್ಯಾಲಯಗಳಲ್ಲಿನ ಪ್ರಮುಖ ಯೋಜನೆಗಳನ್ನು ಉಸ್ತುವಾರಿ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ರಾಜ್ಯದಲ್ಲಿ ಎನ್‌ಇಪಿ ಸೃಷ್ಟಿಸಿದ ಸವಾಲುಗಳು ಬಹಿರಂಗ; ಸಮೀಕ್ಷೆ ಹೇಳುವುದೇನು?

“ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ ಮತ್ತು ಹೆಚ್ಚಿನ ಇಲಾಖೆಗಳು ತೀವ್ರ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿವೆ. ಉನ್ನತ ಶಿಕ್ಷಣ ಸಂಸ್ಥೆಗಳ ಸುಗಮ ಕಾರ್ಯಾಚರಣೆಗೆ ಕುಲಪತಿಗಳ ನೇಮಕ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು” ಎಂದು ಶಿಕ್ಷಣ ತಜ್ಞರು ಹೇಳುತ್ತಿದ್ದಾರೆ.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರೊ. ನಾಗನ್ನವರ್ ಅವರು ಕಳೆದ ಹಲವಾರು ತಿಂಗಳುಗಳಿಂದ ಉಸ್ತುವಾರಿ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲಿನ ಕುಲಪತಿಗೆ ಹುದ್ದೆಗೆ ಪ್ರಾಧ್ಯಾಪಕ ಎಚ್‌.ವೈ ಕಾಂಬಲ್, ಸಿಎಮ್ ಥೈಗರಾಜ್ ಮತ್ತು ಎಚ್‌ಟಿ ಪೋಟೆ ಅವರ ಹೆಸರುಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗಿದೆ. ಆದರೆ, ಅಂತಿಮ ಘೋಷಣೆ ಬಾಕಿ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...