10ನೇ ತರಗತಿ ಪಠ್ಯದಿಂದ ಪ್ರಜಾಪ್ರಭುತ್ವದ ವಿಷಯ ಕೈಬಿಟ್ಟ ಕೇಂದ್ರ ಸರ್ಕಾರ

Date:

ವಿಜ್ಞಾನ ಪಠ್ಯದಲ್ಲಿ ಪೀರಿಯಾಡಿಕ್‌ ಟೇಬಲ್‌ ಮಾಯ

ಮಕ್ಕಳಿಗೆ ಹೊರೆಯಾಗುತ್ತಿದೆ ಎಂದ ʼಎನ್‌ಸಿಇಆರ್‌ಟಿʼ

ಹತ್ತನೇ ತರಗತಿಯ ಪಠ್ಯಪುಸ್ತಕಗಳಿಂದ ಪ್ರಜಾಪ್ರಭುತ್ವದ ಕುರಿತು ಮತ್ತು ರಸಾಯನ ಶಾಸ್ತ್ರವನ್ನು ಅರಿಯಲು ಪ್ರಮುಖ ಅಧ್ಯಾಯವಾದ ʼಪೀರಿಯಾಡಿಕ್‌ ಟೇಬಲ್‌ʼ ಸೇರಿದಂತೆ 6 ಅಧ್ಯಾಯಗಳನ್ನು ಕೇಂದ್ರದ ʼಎನ್‌ಸಿಇಆರ್‌ಟಿʼ (ನ್ಯಾಶನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಆಂಡ್‌ ಟ್ರೈನಿಂಗ್‌) ಕೈಬಿಟ್ಟಿದೆ. ಈ ಅಧ್ಯಾಯಗಳು ಮಕ್ಕಳ ಓದಿಗೆ ಹೆಚ್ಚಿನ ಹೊರೆಯಾಗಲಿವೆ ಎಂಬ ಕಾರಣ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪ್ರಜಾ ಸತ್ತಾತ್ಮಕ ರಾಜಕೀಯʼ ವಿಷಯದಲ್ಲಿ, ಐದನೇ ಅಧ್ಯಾಯವಾದ ʼಪಾಪ್ಯುಲರ್‌ ಸ್ಟ್ರಗಲ್ಸ್‌ ಆಂಡ್‌ ಮೂಮೆಂಟ್ಸ್‌ʼ, ಆರನೇ ಅಧ್ಯಾಯವಾದ ʼಪೊಲಿಟಿಕಲ್‌ ಪಾರ್ಟೀಸ್‌ʼ ಮತ್ತು ಎಂಟನೇ ಅಧ್ಯಾಯವಾದ ʼಚಾಲೆಂಜಸ್‌ ಟು ಡೆಮಾಕ್ರಸಿʼ ಈ ಮೂರು ಅಧ್ಯಾಯಗಳನ್ನು ಕೈ ಬಿಡಲಾಗಿದೆ.

ʼವಿಜ್ಞಾನʼ ವಿಷಯದಲ್ಲಿ, ಐದನೇ ಅಧ್ಯಾಯವಾದ ʼಪೀರಿಯಾಡಿಕ್‌ ಕ್ಲಾಸಿಫಿಕೇಶನ್‌ ಆಫ್‌ ಎಲಿಮೆಂಟ್ಸ್‌ʼ, 14ನೇ ಅಧ್ಯಾಯವಾದ ʼಸೋರ್ಸ್‌ ಆಫ್‌ ಎನರ್ಜಿʼ 16ನೇ ಅಧ್ಯಾಯವಾದ ʼಸಸ್ಟೇನೆಬಲ್‌ ಮ್ಯಾನೇಜ್‌ಮೆಂಟ್‌ ಆಫ್‌ ನ್ಯಾಚುರಲ್‌ ರೀಸೋರ್ಸಸ್‌ʼ ಈ ಮೂರು ಅಧ್ಯಾಯಗಳನ್ನು ಎನ್‌ಸಿಇಆರ್‌ಟಿ ಕೈ ಬಿಟ್ಟಿದೆ.

NCERT 1

ಕಳೆದ ವರ್ಷ ಇದೇ 10ನೇ ತರಗತಿಯ ಪಠ್ಯದಿಂದ ʼಥಿಯರಿ ಆಫ್‌ ಎವಲ್ಯೂಷನ್‌ʼ ಅಧ್ಯಾಯವನ್ನು ತೆಗೆದು ಹಾಕಲಾಗಿತ್ತು. ಅದೇ ಸಂದರ್ಭದಲ್ಲೇ ವಿಜ್ಞಾನ ಪ್ರಜಾಪ್ರಭುತ್ವ ರಾಜಕಾರಣ ವಿಷಯಗಳಲ್ಲಿನ 6 ಅಧ್ಯಾಯಗಳನ್ನು ಕೂಡ ʼಎನ್‌ಸಿಇಆರ್‌ಟಿʼ ಕೈ ಬಿಟ್ಟಿದೆ. ಇತ್ತೀಚೆಗೆ ಪಠ್ಯಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯವಾಗಿರುವ ಹಿನ್ನೆಲೆ ನಿರ್ದಿಷ್ಟ ಅಧ್ಯಾಯಗಳು ಮಾಯವಾಗಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರ ಗಮನಕ್ಕೆ ಬಂದಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಮನೆಯಲ್ಲೇ ಅಭ್ಯಾಸ ಮಾಡುವ ಮಕ್ಕಳಿಗೆ ನಿರ್ದಿಷ್ಟ ಅಧ್ಯಾಯಗಳು ಹೊರೆಯಾಗಿ ಪರಿಣಮಿಸಲಿವೆ. ಕೆಲವು ಅಧ್ಯಾಯಗಳು ಪ್ರಸ್ತುತವಲ್ಲ. ಹೀಗಾಗಿ ಆಯ್ದ ಅಧ್ಯಾಯಗಳನ್ನು ಪಠ್ಯಕ್ರಮದಿಂದ ತೆಗೆದಿರುವುದಾಗಿ ಎನ್‌ಸಿಇಆರ್‌ಟಿ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿತ್ತು.

“10ನೇ ತರಗತಿ ಮುಗಿಸಿದ ಬಳಿಕ ಪದವಿ ಪೂರ್ವ ಶಿಕ್ಷಣಕ್ಕೆ ಕಾಲಿಡುವ ವಿದ್ಯಾರ್ಥಿಗಳು ವಿಜ್ಞಾನ ವಿಭಾಗ ಆಯ್ದುಕೊಂಡರೆ ಅವರಿಗೆ ʼಪೀರಿಯಾಡಿಕ್‌ ಟೇಬಲ್‌ʼನ ಪರಿಚಯವಿಲ್ಲದೆ ಅವರಿಗೆ ಕೆಮಿಸ್ಟ್ರಿಯ ಬಗ್ಗೆ ತಿಳಿಯಲು ಸಾಧ್ಯವಿಲ್ಲ. ಹಾಗೆಯೇ ಪ್ರಜಾಪ್ರಭುತ್ವ ಮತ್ತು ಇತಿಹಾಸದ ಬಗ್ಗೆ ತಿಳಿಯದೇ ಉನ್ನತ ಮಟ್ಟದ ಶಿಕ್ಷಣಕ್ಕೆ ಕಾಲಿಟ್ಟರೆ ಮಕ್ಕಳು ಗೊಂದಲಕ್ಕೆ ಸಿಲುಕಿಕೊಳ್ಳುತ್ತಾರೆ” ಪೋಷಕರು ಮತ್ತು ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...