ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ಏ. 28 ಅಂತಿಮ ದಿನ

Date:

ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ಅಬ್ಬರ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದ ಸಡಗರ ಹೆಚ್ಚಾಗಿದೆ. ಈ ಮಧ್ಯೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 28ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ.

2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯಿರುವ ಸುತ್ತೋಲೆ ಹೊರಡಿಸಿದೆ.

ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, 2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಎಲ್ಲ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಏ.21ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದೆ. ಏ. 28ರವರೆಗೂ ಮಾತ್ರ ದಂಡ ರಹಿತ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 4ರ ಒಳಗೆ ದಂಡ ಸಹಿತ ಶುಲ್ಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮರು ಮೌಲ್ಯಮಾಪನದ ಫಲಿತಾಂಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಕೆಎಸ್‌ಇಎಬಿ ಅಧ್ಯಕ್ಷ ರಾಮಚಂದ್ರನ್‌ ಹೇಳಿದ್ದಾರೆ. 

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯು ಫಲಿತಾಂಶ | ಅನುತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆ

ಫಲಿತಾಂಶದ ಪ್ರತಿಯನ್ನು ಪಿಯು ಪರೀಕ್ಷಾ ಪೋರ್ಟಲ್‌ ಮೂಲಕ ಆಯಾ ವಿದ್ಯಾರ್ಥಿಗಳಿಗೆ ಕಳುಹಿಸಲಾಗುವುದು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವುದಿಲ್ಲ. ಮಂಡಳಿ ನೀಡಿದ ಫಲಿತಾಂಶದ ಪಟ್ಟಿ ಆಧಾರದಲ್ಲಿ ಹಾಗೂ ಉತ್ತೀರ್ಣರಾದವರು ಫಲಿತಾಂಶ ತಿರಸ್ಕರಿಸಿ, ಫಲಿತಾಂಶದ ಪ್ರತಿ ಸಲ್ಲಿಸಿ ಪೂರಕ ಪರೀಕ್ಷೆ ತೆಗೆದುಕೊಳ್ಳಬಹುದು.

ಶುಲ್ಕದ ವಿವರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ,ಒಂದು ವಿಷಯಕ್ಕೆ-140 ರೂಪಾಯಿ. ಎರಡು ವಿಷಯಕ್ಕೆ- 270 ರೂಪಾಯಿ. ಮೂರು ಅಥವಾ ಹೆಚ್ಚಿನ ವಿಷಯಗಳು- 400 ರೂಪಾಯಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ಪಡೆಯಬೇಕಾದ ಅಂಕಪಟ್ಟಿ ಶುಲ್ಕ- 50 ರೂಪಾಯಿ ಪಾವತಿಸಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...