ಎಸಿಎಫ್‌ ನೇಮಕಾತಿ; ಸಂದರ್ಶನ ಸಮಿತಿಗೆ ಕೆಪಿಎಸ್‌ಸಿ ನಕಾರ

Date:

  • ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆಯಿಲ್ಲ ಎಂದ ಕೆಪಿಎಸ್‌ಸಿ
  • ಕೆಪಿಎಸ್‌ಸಿ ಅಧಿಕಾರಿಗಳ ನಡುವೆ ಮುಸುಕಿನ ಗುದ್ದಾಟ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಖಾಲಿ ಹುದ್ದೆ ನೇಮಕಾತಿಗೆ ಸಂದರ್ಶನ ಸಮಿತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರು ಮತ್ತು ಸದಸ್ಯರು ಇರಬೇಕೆಂದು ಸರ್ಕಾರ ನಿರ್ದೇಶಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೆಪಿಎಸ್‌ಸಿ ಅಧಿಕಾರಿಗಳು, ‘ಏಕಾಏಕಿ ಬಂದಿರುವ ಆದೇಶ ಪಾಲನೆ ಮಾಡಲಾಗುವುದಿಲ್ಲ’ ಎಂದು ತಳ್ಳಿಹಾಕಿದ್ದಾರೆ. ಅಧಿಕಾರಿಗಳ ನಡೆ ಸಮಂಜಸವಲ್ಲವೆಂದು ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ನಾಲ್ಕು ಜನರನ್ನೊಳಗೊಂಡ ಸಮಿತಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಇರಬೇಕೆನ್ನುವುದು ರಾಜ್ಯ ಸರ್ಕಾರದ ನಿರ್ದೇಶನ. ಆದರೆ, ಸರ್ಕಾರ ಮುಂಚಿತವಾಗಿ ಮಾಹಿತಿ ನೀಡದೆ ಏಕಾಏಕಿ ವಿಷಯದ ಕುರಿತು ನಿರ್ಧರಿಸುವುದು ಗೊಂದಲಕ್ಕೀಡು ಮಾಡಿದೆ ಎಂದು ಅಧಿಕಾರಿಗಳು ನಿರ್ಲಕ್ಷ್ಯ ಸ್ವಭಾವ ವ್ಯಕ್ತಪಡಿಸಿದ್ದಾರೆ.

“ಸದ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳು ನಡೆದಿರುವುದರಿಂದ ಈ ಹಂತದಲ್ಲಿ ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ” ಎಂದು ಕೆಪಿಎಸ್‌ಸಿ ಸರ್ಕಾರದ ಆದೇಶ ತಳ್ಳಿಹಾಕಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೋಧನಾ ಕೌಶಲ್ಯ ಕಾರ್ಯಗಾರ; ಕಣಜ ಯುವ ಸಂಶೋಧನಾ ಕೇಂದ್ರದಿಂದ ಅರ್ಜಿ ಆಹ್ವಾನ

ಈ ಹಿಂದೆ ಪಿಡಬ್ಲ್ಯೂಡಿಯ ಸಹಾಯಕ ಅಭಿಯಂತರ ಹುದ್ದೆಗೆ ಸಂದರ್ಶನ ಸಮಿತಿಯ ರಚನೆಯಲ್ಲಿ ಬದಲಾವಣೆ ತರಲಾಗಿತ್ತು. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಹುದ್ದೆ ಪಡೆಯಲು ಅನುಕೂಲವಾಗಿತ್ತು.  

ಇಂತಹ ಒಳ್ಳೆಯ ಬದಲಾವಣೆಯನ್ನು ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ತಳ್ಳಿಹಾಕಿರುವುದು ಶೋಭೆಯಲ್ಲ ಎಂದು ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿಯ ಸದಸ್ಯರು, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸ್ಪರ್ಧಾಕಾಂಕ್ಷಿಗಳು ಈಗಾಗಲೇ ಸಾಕಷ್ಟು ಬೇಸತ್ತಿದ್ದಾರೆ ಎಂದು ಹೇಳಲಾಗಿದೆ.

ಕಾರ್ಯದರ್ಶಿಗಳು ಕೈಗೊಳ್ಳುವ ಪ್ರತಿಯೊಂದು ಕೆಲಸ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಿರುತ್ತದೆ ಹಾಗೂ ಪಾರದರ್ಶಕತೆ ಇರುತ್ತದೆ. ಆದರೆ, ಇದಕ್ಕೆ ವಿರುದ್ಧವಾಗಿ ಕೆಪಿಎಸ್‌ಸಿ ಸದಸ್ಯರು ಮತ್ತು ಅಧ್ಯಕ್ಷರು ಕಾರ್ಯದರ್ಶಿಗಳ ನಡೆಗೆ ಸುಖಾ ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸ್ಪರ್ಧಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇವುಗಳನ್ನೆಲ್ಲ ತ್ವರಿತವಾಗಿ ಸರಿಪಡಿಸಬೇಕೆಂದು ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...