ಪಿಯುಸಿ ಮೌಲ್ಯಮಾಪನ ಯಡವಟ್ಟು; ಬರೆದದ್ದು 22 ಪುಟ, ಮೌಲ್ಯಮಾಪನ ಮಾಡಿದ್ದು 13 ಪುಟ

Date:

ಕಷ್ಟಪಟ್ಟು ದ್ವಿತೀಯ ಪರೀಕ್ಷೆ ಬರೆದ ವಿದ್ಯಾರ್ಥಿಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪಕರು ಸರಿಯಾದ ರೀತಿಯಲ್ಲಿ ಮೌಲ್ಯಮಾಪನ ಮಾಡದೇ ಲೋಪವೆಸಗಿದ್ದಾರೆ. ಇದರಿಂದಾಗಿ, ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕಾದ ವಿದ್ಯಾರ್ಥಿ, ಕನಿಷ್ಠ ಅಂಕ ಪಡೆದಿರುವುದು ಮಂಡ್ಯ ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಕೊಮ್ಮೇರಹಳ್ಳಿ ವಿಶ್ವಮಾನವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ನೂತನ್ ಹೆಚ್.ಎನ್ ಮಾಲ್ಯಮಾಪಕರ ನಿರ್ಲಕ್ಷ್ಯದಿಂದಾಗಿ ರ್‍ಯಾಂಕ್‌ನಿಂದ ವಂಚಿತನಾಗಿದ್ದಾರೆ. ಕಡಿಮೆ ಅಂಕ ಗಳಿಸಿದ್ದ ಮಾನಸಿಕ ತೊಳಲಾಟ ಅನುಭವಿಸಿದ್ದಾರೆ. ನೂತನ್ ಕನ್ನಡದಲ್ಲಿ 78 ಅಂಕಗಳು, ಭೌತವಿಜ್ಞಾನದಲ್ಲಿ 99, ರಸಾಯನಶಾಸ್ತ್ರದಲ್ಲಿ 100, ಗಣಿತದಲ್ಲಿ 97, ಜೀವಶಾಸ್ತ್ರದಲ್ಲಿ 98 ಅಂಕಗಳನ್ನು ಪಡೆದಿದ್ದಾರೆ.

ಆದರೆ, ಇಂಗ್ಲಿಷ್‌ ವಿಷಯದಲ್ಲಿ ಮಾತ್ರ 52 ಅಂಕಗಳನ್ನಷ್ಟೇ ಪಡೆದುಕೊಂಡಿದ್ದಾರೆ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯ ‘ಫೋಟೋಕಾಪಿ’ ಒದಗಿಸುವಂತೆ ಅರ್ಜಿ ಅಲ್ಲಿಸಿದ್ದರು. ತಮಗೆ ಸಿಕ್ಕ ಫೋಟೋಕಾಪಿಯನ್ನು ಪರಿಶೀಲಿಸಿದಾಗ, ಆತ ಇಂಗ್ಲಿಷ್‌ ವಿಷಯದ ಪ್ರಶ್ನೆ ಪತ್ರಿಕೆಗೆ ಒಟ್ಟು 22 ಪುಟಗಳಲ್ಲಿ ಉತ್ತರಗಳನ್ನು ಬರೆದಿದ್ದು, ಮೌಲ್ಯಮಾಪನ ಮಾಡಿದ ಶಿಕ್ಷಕರು ಕೇವಲ 13 ಪುಟಗಳನಷ್ಟೆ ಮೌಲ್ಯಮಾಪನ ಮಾಡಿದ್ದಾರೆ. ಉಳಿದ 9 ಪುಟಗಳ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡದೇ ನಿರ್ಲಕ್ಷ್ಯ ವಹಿಸಿರುವುದು ಬೆಳಕಿಗೆ ಬೆಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದ್ವಿತೀಯ ಪಿಯುಸಿ

ಇದನ್ನು ಗಮನಿಸಿದ ಬಳಿಕ, ಆತನ ಕನ್ನಡ ಭಾಷಾ ವಿಷಯದಲ್ಲೂ ಕೇವಲ 78 ಅಂಕಗಳು ಬಂದಿರುವ ಬಗ್ಗೆಯೂ ವಿದ್ಯಾರ್ಥಿಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೆಲವು ಮೌಲ್ಯಮಾಪಕರ ನಿರ್ಲಕ್ಷದಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಮುಂದಿನ ಉನ್ನತ ವ್ಯಾಸಂಗದಲ್ಲಿ ದ್ವಿತೀಯ ಪಿಯುಸಿ ಅಂಕಗಳನ್ನೆ ಪರಿಗಣಿಸುವುದರಿಂದ ಇಂತಹ ವಿದ್ಯಾರ್ಥಿಗಳು ಜೆಇಇ, ನೀಟ್ ಪರೀಕ್ಷೆಗಳಲ್ಲಿ ನಿರೀಕ್ಷಿತ ಫಲಿತಾಂಶ ಗಳಿಸಲು ಸಾಧ್ಯವಾಗದೇ ಇರುವ ಅಂತಕವು ಇರುತ್ತದೆ. ಅಲ್ಲದೇ ಇಂತಹ ಘಟನೆಗಳಿಂದ ವಿದ್ಯಾರ್ಥಿಯು ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...