ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21ರಿಂದ ಆರಂಭ; ಈ ನಿಯಮಗಳ ಬಗ್ಗೆ ಎಚ್ಚರಿಕೆ ಇರಲಿ!

Date:

ರಾಜ್ಯದಲ್ಲಿ ಮಾರ್ಚ್‌ 21ರಿಂದ (ಶುಕ್ರವಾರ) ಎಸ್‌ಎಸ್‌ಎಸ್‌ ಪರೀಕ್ಷೆಗಳು ಆರಂಭವಾಗಲಿವೆ. ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದಕ್ಕೂ ಮುನ್ನ ಮತ್ತು ಪರೀಕ್ಷಾ ಕೊಠಡಿಯಲ್ಲಿ ಪಾಲಿಸಬೇಕಾದ ಕೆಲವು ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೂಚಿಸಿದೆ.

ರಾಜ್ಯಾದ್ಯಂತ ಒಟ್ಟು 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ 8.96 ಲಕ್ಷ ವಿದ್ಯಾರ್ಥಿಗಳ ಪೈಕಿ, 4.61 ಲಕ್ಷ ಬಾಲಕರು, 4.34 ಲಕ್ಷ ಬಾಲಕಿಯರಿದ್ದಾರೆ. ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ.

ಮಾರ್ಚ್‌ 21ರಂದು ಕಲಿಕೆಯ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ ಹಾಗೂ ಸಂಸ್ಕೃತ ವಿಷಯಗಳ ಪರೀಕ್ಷೆಗಳು ನಡೆಯಲಿವೆ. 24ರಂದು ಗಣಿತ, 26ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ, 29ರಂದು ಸಮಾಜ ವಿಜ್ಞಾನ, ಏಪ್ರಿಲ್‌ 1ರಂದು ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು, ಏಪ್ರಿಲ್ 2ರಂದು ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, ಏಪ್ರಿಲ್ 4ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್‌ ವಿಷಯಗಳಿಗೆ ಪರೀಕ್ಷೆಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಅಥವಾ ನಕಲು ತಡೆಯಲು ಎಲ್ಲ ಕೇಂದ್ರಗಳಲ್ಲಿ ಸಿಟಿ ಟಿವಿ ಮತ್ತು ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳ ಪಾಲಿಸಬೇಕಾದ ನಿಮಯಗಳು;

  • ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ಅನ್ನು ಕಡ್ಡಾಯವಾಗಿ ಹೊಂದಿರಬೇಕು.
  • ಮೊಬೈಲ್ ಫೋನ್, ಎಲೆಕ್ಟ್ರಿಕಲ್ ಉಪಕರಣಗಳ ಬಳಸುವಂತಿಲ್ಲ.
  • ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್‌ಗಳನ್ನು ಮಾತ್ರವೇ ಬಳಸಬೇಕು.
  • ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಡುವ ಮುನ್ನ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
  • ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
  • ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
  • ಹಿಂದುಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ.

ವಿಶೇಷ ಚೇತನ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷ, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿ 50 ನಿಮಿಷ, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿ 40 ನಿಮಿಷ, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿ 30 ನಿಮಿಷ ಕಾಲಾವಕಾಶ ನೀಡಲಾಗುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...