ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಅಂಬೇಡ್ಕರ್‌ರನ್ನು ‘ಆಧುನಿಕ ಮನು’ ಎಂದು ಉಲ್ಲೇಖ; ವ್ಯಾಪಕ ಆಕ್ರೋಶ

Date:

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ‘ಆಧುನಿಕ ಮನು’ ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ. ಅಂಬೇಡ್ಕರ್‌ರನ್ನು ಮನುಗೆ ಹೋಲಿಕೆ ಮಾಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಶುಕ್ರವಾರ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆಗಳು ನಡೆದಿವೆ. ಪರೀಕ್ಷೆಯಲ್ಲಿ ನೀಡಲಾಗಿದ್ದ ಇಂಗ್ಲಿಷ್ ವಿಷಯದ ಪ್ರಶ್ನೆಪತ್ರಿಕೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ‘ಆಧುನಿಕ ಮನು’ ಎಂದು ಉಲ್ಲೇಖಿಸಲಾಗಿದೆ. ‘ಡಾ. ಬಿ.ಆರ್ ಅಂಬೇಡ್ಕರ್ ವಾಸ್‌ ದಿ ಮಾಡೆರ್ನ್‌ ಮನು. ಹೌ?’ ಎಂದು ಪ್ರಶ್ನೆಯನ್ನು ಮುದ್ರಿಸಲಾಗಿದೆ.

ಈ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆಯೇ ಮುದ್ರಿಸಿ, ಶಾಲೆಗಳಿಗೆ ಕಳಿಸಿದೆ ಎಂದು ತಿಳಿದುಬಂದಿದೆ. ಅಂಬೇಡ್ಕರರ ಆಶಯವೇ ನಮ್ಮ ನಿಲುವು, ಸಂವಿಧಾನವೇ ನಮ್ಮ ಧ್ಯೇಯ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ ಸರ್ಕಾರವೇ ಅಂಬೇಡ್ಕರ್ ಅವರನ್ನು ಆಧುನಿಕ ಮನು ಎಂದು ಕರೆದಿದೆ. ವಿವಾದವನ್ನು ಸೃಷ್ಠಿಸಿದೆ. ಕಾಂಗ್ರೆಸ್‌ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಎಸ್‌ಎಸ್‌ಎಲ್‌ಸಿ, ಪ್ರಶ್ನೆಪತ್ರಿಕೆ, ಅಂಬೇಡ್ಕರ್‌, ಆಧುನಿಕ ಮನು, SSLC, question paper, Ambedkar, modern Manu,

ಮನುಸ್ಮೃತಿಯನ್ನು ಬರೆದಿದ್ದ ಮನು ಒಬ್ಬ ಜಾತಿವಾದಿ. ಸಮಾಜದಲ್ಲಿ ವರ್ಣಾಶ್ರಮಗಳು ಜಾರಿಯಲ್ಲಿರಬೇಕು ಎಂದು ಪ್ರತಿಪಾದಿಸಿದ್ದವನು. ಶೂದ್ರರು-ಅಸ್ಪೃಶ್ಯರು ಮುಟ್ಟಲು ಅರ್ಹರಲ್ಲದವರು ಎಂದಿದ್ದವನು. ಮಹಿಳೆಯರು 2ನೇ ಪ್ರಜೆಗಳು, ಗಂಡಿನ ಅಧೀನದಲ್ಲಿರಬೇಕು ಎಂದು ಹೇಳಿದ್ದವನು. ಬಿಜೆಪಿ-ಆರ್‌ಎಸ್‌ಎಸ್‌ ಸೇರಿದಂತೆ ಹಿಂದುತ್ವವಾದಿಗಳು ಮನುವನ್ನು ತಮ್ಮ ಆರಾದ್ಯದೈವದಂತೆ ನೋಡುತ್ತಾರೆ. ಬಿಜೆಪಿ-ಆರ್‌ಎಸ್‌ಎಸ್‌ನ ಒಳ ಅಜೆಂಡಾ ಕೂಡ ಮನು ಬರೆದ ಮನುಸ್ಮೃತಿಯನ್ನೇ ಸಂವಿಧಾನ ಮಾಡಬೇಕೆಂಬುದಾಗಿದೆ.

ಶೂದ್ರರು, ತಳ ಸಮುದಾಯದವರು ಹಾಗೂ ಮಹಿಳಾ ವಿರೋಧಿಯಾಗಿದ್ದ ಮನುವಿಗೆ ಸಮಾನತಾವಾದಿ ಅಂಬೇಡ್ಕರ್‌ರನ್ನು ಹೋಲಿಕೆ ಮಾಡಿರುವುದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿವೆ.

ಅಂದಹಾಗೆ, ಮನು ರಚಿಸಿದದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟುಹಾಕಿದ್ದರು. ಹಿಂದು ಧರ್ಮದಲ್ಲಿ ಎಲ್ಲರಿಗೂ ಎಲ್ಲ ಅವಕಾಶ, ಹಕ್ಕುಗಳು ದೊರೆಯಬೇಕೆಂದು ಸಂವಿಧಾನ ರಚನಾ ಸಭೆಯಲ್ಲಿ ‘ಹಿಂದು ಕೋಡ್‌ ಬಿಲ್‌’ಅನ್ನು ಮಂಡಿಸಿದ್ದರು.

ಆದರೆ, ಈಗ ಅಂಬೇಡ್ಕರ್ ಅವರು ವಿರೋಧಿಸಿದ್ದ ಮನುವಿಗೇ ಅಂಬೇಡ್ಕರರನ್ನು ಹೋಲಿಸಲಾಗುತ್ತಿದೆ. ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆಯಲಾಗುತ್ತಿದೆ. ಅಂಬೇಡ್ಕರ್ ಹಿಂದು ಧರ್ಮದ ಪರವಾಗಿದ್ದರು ಎಂದು ಬಣ್ಣಿಸಲು ಸಂಘಪರಿವಾರವು, ಹಿಂದು ಧರ್ಮದ ಸುಧಾರಣೆಗಾಗಿ ಅಂಬೇಡ್ಕರ್ ‘ಹಿಂದು ಕೋಡ್‌ ಬಿಲ್’ ರಚಿಸಿದ್ದರು. ಆದ್ದರಿಂದ ಅಂಬೇಡ್ಕರ್ ‘ಆಧುನಿಕ ಮನು’ ಎಂಬ ಸುಳ್ಳನ್ನು ಸಮಾಜದಲ್ಲಿ ಹರಿಬಿಟ್ಟಿದೆ. ಆ ಸುಳ್ಳನ್ನೇ ಸತ್ಯವೆಂದು ಭಾವಿಸಿ ಕೆಲವು ಅಂಬೇಡ್ಕರ್ ಅನುಯಾಯಿಗಳೂ ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆಯುವುದು ಕಂಡುಬಂದಿದೆ.

ಆದರೆ, ಅಂಬೇಡ್ಕರ್ ಹಿಂದು ಧರ್ಮದ ಸುಧಾಕರರಲ್ಲ. ಹಿಂದು ಧರ್ಮದಲ್ಲಿನ ಅನಿಷ್ಠ ಪದ್ದತಿಗಳ ವಿರುದ್ಧ ಹೋರಾಡಿದವರು. ಶೂದ್ರರು, ಅಸ್ಪೃಷ್ಯರು, ಹಿಂದುಳಿದವರು ಹಾಗೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಗಾಗಿ ಹೋರಾಟಿದವರು. ಮನುವಾದವನ್ನು ವಿರೋಧಿಸಿದವರು. ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆಯುವ ಪರಿಪಾಠವನ್ನು ಕೈಬಿಡಬೇಕು ಎಂದು ಅಂಬೇಡ್ಕರ್‌ ವಾದಿಗಳು ಒತ್ತಾಯಿಸುತ್ತಲೇ ಇದ್ದಾರೆ. ಆದಾಗ್ಯೂ, ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆದು ಆಕ್ರೋಶಕ್ಕೆ ಗುರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...