ಎಸ್ಸೆಸ್ಸೆಲ್ಸಿ ಫಲಿತಾಂಶ | ಬರಗಾಲ ಪೀಡಿತ ಪ್ರದೇಶ ಚಿತ್ರದುರ್ಗಕ್ಕೆ ಅಗ್ರಸ್ಥಾನ

Date:

  • ಚರ್ಚೆಗೆ ಗ್ರಾಸವಾದ ಎಸ್ಸೆಸ್ಸೆಲ್ಸಿ ಜಿಲ್ಲಾವಾರು ಫಲಿತಾಂಶ
  • 2020-21ನೇ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ ಈಗ ದ್ವಿತೀಯ

2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಯಾಗಿದ್ದು, ಬರಗಾಲ ಪೀಡಿತ ಪ್ರದೇಶವಾದ ಚಿತ್ರದುರ್ಗ ಜಿಲ್ಲೆ ಮೊದಲನೇ ಸ್ಥಾನ ಪಡೆದಿದೆ.

ಚಿತ್ರದುರ್ಗ ಜಿಲ್ಲೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರಲ್ಲಿ ಸಂಪತ್ಭರಿತವಾಗಿದೆ. ಇದರಲ್ಲಿ ಯಾವುದೇ ಬರವಿಲ್ಲ. ಅದಲ್ಲದೇ ಪ್ರಸಕ್ತ ವರ್ಷ ಚುನಾವಣೆ ಕಾಲವಾದ ಕಾರಣ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು, ಕೋಚಿಂಗ್ ಸೌಲಭ್ಯ, ಶಿಕ್ಷಕರ ಶ್ರಮ ಅದಕ್ಕೆ ವಿದ್ಯಾರ್ಥಿಗಳ ಪರಿಶ್ರಮದಿಂದ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.

ಪ್ರತಿಬಾರಿಯು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಕೋಮು ಗಲಭೆಗೆ ಹೆಸರಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದಂತಹ ಜಿಲ್ಲೆಗಳೇ ಮೇಲುಗೈ ಸಾಧಿಸುತ್ತಿದ್ದವು. ಈ ಬಾರಿ ಚಿತ್ರದುರ್ಗ ಅಗ್ರಸ್ಥಾನ ಪಡೆದಿರುವುದು ಎಲ್ಲರಿಗೂ ಅಚ್ಚರಿಯ ಸಂಗಂತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಾಗಿ ಪ್ರಥಮ ಸ್ಥಾನ ಪಡೆಯುತ್ತಿದ್ದ ಉಡುಪಿ ಜಿಲ್ಲೆ ಈ ಬಾರಿ 18 ನೇ ಸ್ಥಾನ ಪಡೆದಿದೆ. ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದ ದಕ್ಷಿಣ ಕನ್ನಡ ಜಿಲ್ಲೆ, ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ 19ನೇ ಸ್ಥಾನ ಪಡೆದಿರುವುದು ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

ನಾಲ್ಕನೇ ಸ್ಥಾನದಿಂದ ಮೊದಲನೇ ಸ್ಥಾನ

2021-22ನೇ ಸಾಲಿನಲ್ಲಿ ಶೇ 94.31ರಷ್ಟು ಫಲಿತಾಂಶ ಪಡೆದು ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. ಈ ವರ್ಷ ಶೇ 2.5ರಷ್ಟು ಫಲಿತಾಂಶ ಎರಿಕೆ ಕಂಡಿದ್ದು, ಉತ್ತಮ ಸ್ಥಾನಕ್ಕೆ ಏರಿದೆ. 2019- 20ರಲ್ಲಿ ಶೇ 88.66 ಹಾಗೂ 2020-21ರಲ್ಲಿ ಶೇ 100 ರಷ್ಟು ಫಲಿತಾಂಶ ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಸಲ್ಲಿಸಲು ಮೇ 15 ಅಂತಿಮ ದಿನ

ಜಿಲ್ಲಾವಾರು ಫಲಿತಾಂಶ

ಜಿಲ್ಲೆಯಲ್ಲಿ 23,428 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ವಿಷಯವಾರು ಪರಿಣಿತರನ್ನು ಗುರುತಿಸಿ ವಿಶೇಷ ಕಾರ್ಯಾಗಾರಗಳನ್ನು ಏರ್ಪಡಿಸಲಾಗಿತ್ತು. ಅಧ್ಯಯನ ಸಾಮಗ್ರಿ, ಪರೀಕ್ಷಾ ಉತ್ತೀರ್ಣಕ್ಕೆ ಅಗತ್ಯ ಸಾಮಗ್ರಿಗಳನ್ನು ಸಿದ್ಧಪಡಿಸಿ ಮಕ್ಕಳಿಗೆ ನೀಡಲಾಗಿತ್ತು. ಪರೀಕ್ಷಾ ಭಯ ನಿವಾರಣೆಗೆ ಮಕ್ಕಳೊಂದಿಗೆ ಸಂವಾದ ನಡೆಸಲಾಗಿತ್ತು. 2020-21ನೇ ಸಾಲಿನಲ್ಲಿ, ನಾಲ್ಕನೇ ಸ್ಥಾನದಲ್ಲಿದ್ದ ಸಕ್ಕರೆ ಜಿಲ್ಲೆ ಮಂಡ್ಯ ಇದೀಗ ಎರಡನೇ ಸ್ಥಾನ ಅಲಂಕರಿಸಿದೆ.

ಹಾಸನ ಜಿಲ್ಲೆ ಒಂಭತ್ತನೇ ಸ್ಥಾನದಲ್ಲಿತ್ತು ಈ ಬಾರಿ ಮೂರನೇ ಸ್ಥಾನಕ್ಕೇರಿದೆ. ಕಳೆದ ಬಾರಿ ಎರಡನೇ ಸ್ಥಾನದಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಈಗ ನಾಲ್ಕನೇ ಸ್ಥಾನಕ್ಕೆ ಇಳಿದಿದೆ. ಇನ್ನೂ ವಿಜಯನಗರಕ್ಕೆ 2020-21ನೇ ಸಾಲಿನಲ್ಲಿ ಶೇ 86ರಷ್ಟು ಫಲಿತಾಂಶ ಬಂದಿತ್ತು. ಈ ಸಾಲಿಗೆ ಶೇ 91ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿಗೆ ಹೋದರೆ ಶೇ 5ರಷ್ಟು ಫಲಿತಾಂಶದಲ್ಲಿ ಏರಿಕೆ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮೀಸಲಾತಿಯ ಬಹುಪಾಲು ಕಬಳಿಸಿದ್ದು ಒಳಮೀಸಲಾತಿ ವಿರೋಧಿಗಳು; ಮಾಜಿ ಸಚಿವ ಆಂಜನೇಯ ಆಕ್ರೋಶ

"56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು...

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...