ಬೀದರ್ | ಪೋಷಕರಿಲ್ಲದ ಪ್ರತಿಭಾವಂತ ಬಾಲಕಿಯ ಶಿಕ್ಷಣಕ್ಕೆ ಬೇಕಿದೆ ಸಹಾಯಹಸ್ತ

Date:

  • ಸಹಾಯ ಮಾಡಲು ಇಚ್ಛಿಸುವವರು 9353419036 ಸಂಪರ್ಕಿಸಿ
  • ಮೊಮ್ಮಗಳನ್ನು ಓದಿಸುವ ಆಶಯ ಆದರೆ ಆರ್ಥಿಕವಾಗಿ ದುರ್ಬಲರು

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿಯೊಬ್ಬರು ಪದವಿ ಸೇರಲು ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ ಎದುರಾಗಿದ್ದು, ಶಿಕ್ಷಣ ಅರ್ಧಕ್ಕೆ ಕೈ ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಯನಗುಂದಾ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ, ಬಸವಜ್ಯೋತಿ ಬಾಬುಗೊಂಡ ಎಂಬುವವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.92.48ರಷ್ಟು ಅಂಕ ಗಳಿಸಿದ್ದಾರೆ. ಆದರೆ, ಪದವಿ ಸೇರಲು ಆಕೆಯ ಬಳಿ ಹಣವಿಲ್ಲ. ಪ್ರವೇಶಾತಿ ಮಾಡಿಸಲು ಆಕೆಯ ಪೋಷಕರಿಲ್ಲ.

ಹುಟ್ಟುವ ಮುನ್ನವೇ ತಂದೆಯನ್ನು ಕಳೆದುಕೊಂಡ ಬಸವಜ್ಯೋತಿ ಬಾಬುಗೊಂಡ ಅಜ್ಜಿ ಮತ್ತು ತಾತನೊಡನೆ ಬೆಳೆದರು. ವಯಸ್ಸಾದ ಜೀವಕ್ಕೆ ಮೊಮ್ಮಗಳನ್ನು ಓದಿಸುವ ಆಶಯವಿದೆ. ಆದರೆ, ದುಡಿದು ಪದವಿಗೆ ಸೇರಿಸಲು ತ್ರಾಣವಿಲ್ಲ. ಪ್ರತಿಭಾವಂತೆ ಆಗಿದ್ದರೂ ಮುಂದೆ ವಿದ್ಯಾಭ್ಯಾಸ ಮಾಡಿಸಲಾಗದ ಅಸಹಾಯಕ ಪರಿಸ್ಥಿತಿ. ಹೊಟ್ಟೆ ತುಂಬಿದರೆ ಸಾಕು ಎನ್ನುವ ಬಡತನ ಅವರಲ್ಲಿ ಮನೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಕಾಂಗ್ರೆಸ್ ಗ್ಯಾರಂಟಿಗಳ ಜಾರಿಗೆ ಮೊದಲ ಆದ್ಯತೆ: ಪ್ರಿಯಾಂಕ್‌ ಖರ್ಗೆ

ಚೆನ್ನಾಗಿ ಓದಬೇಕು, ಉನ್ನತ ಹುದ್ದೆ ಪಡೆದು ಸಮಾಜ ಸೇವೆ ಸಲ್ಲಿಸಬೇಕು ಎಂದು ಕನಸಿನ ಮೂಟೆ ಹೊತ್ತ ವಿದ್ಯಾರ್ಥಿಗೆ ವಿದ್ಯಾಭ್ಯಾಸ ಮುಂದುವರೆಸುವುದು ಹೇಗೆ ಎಂಬುದೇ ಜಟಿಲವಾದ ಪ್ರಶ್ನೆಯಾಗಿದೆ. ಪ್ರತಿಭೆವುಳ್ಳ ಬಸವಜ್ಯೋತಿ ಬಾಬುಗೊಂಡ  ಅವರಿಗೆ ಮುಂದಿನ ಶಿಕ್ಷಣ ಜೀವನಕ್ಕೆ ಸಹಾಯ ಮಾಡಲು ಇಚ್ಛಿಸುವವರು ಅವರ ದೂರವಾಣಿಗೆ 9353419036 ಕರೆ ಮಾಡಿ ಮಾಹಿತಿ ಪಡೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...