ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಶೇ.10 ಕೃಪಾಂಕ

Date:

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಆರಂಭವಾದ ಕೃಪಾಂಕ ನೀಡುವ ಯೋಜನೆಯನ್ನು ಮತ್ತೆ ಜಾರಿ ಮಾಡಲು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈಗಾಗಲೇ ಮಾ.31ರಿಂದ ಆರಂಭವಾಗಿದೆ. ಈ ಬಾರಿಯ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಭಾಷಾ ವಿಷಯಗಳಿಗೆ ಶೇ.10 ಮತ್ತು ಐಚ್ಛಿಕ ವಿಷಯಗಳಿಗೆ ಶೇ.8ರಷ್ಟು ಕೃಪಾಂಕ ನೀಡುವುದಾಗಿ ಮಂಡಳಿ ತಿಳಿಸಿದೆ.

ಫಲಿತಾಂಶ ಉತ್ತಮಗೊಳಿಸುವ ಕಾರಣದಿಂದ ಗರಿಷ್ಠ ಮೂರು ವಿಷಯಗಳಿಗೆ ಶೇ.10ರಷ್ಟು ಕೃಪಾಂಕ ನೀಡುವ ಮಾನದಂಡ ಅನುಸರಿಸಿಕೊಂಡು ಜಾರಿ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಕೋವಿಡ್‌ನಿಂದಾಗಿ ಶಾಲೆಗಳು ಆರಂಭವಾಗದೆ, ಭೌತಿಕ ತರಗತಿಗಳು ನಡೆಯದಿದ್ದ ಕಾರಣ ಮಕ್ಕಳ ಕಲಿಕೆಯಲ್ಲಿ ಹಿನ್ನಡೆ ಉಂಟಾಗಿತ್ತು. ಹಾಗಾಗಿ, 2021ರಲ್ಲಿ ಮಂಡಳಿಯು ಶೇ.5ರಷ್ಟು ನಿಡುತ್ತಿದ್ದ ಕೃಪಾಂಕವನ್ನು ಶೇ.10ಕ್ಕೆ ಹೆಚ್ಚಿಸಿತ್ತು.

2021ರ ವಾರ್ಷಿಕ ಪರೀಕ್ಷೆಯನ್ನು ಎರಡೇ ದಿನದಲ್ಲಿ ಮುಗಿಸಿ ಸಾಮೂಹಿಕವಾಗಿ ಎಲ್ಲರನ್ನೂ ಉತ್ತೀರ್ಣಗೊಳಿಸಿದ್ದರಿಂದ ಆಗ ಕೃಪಾಂಕ ನೀಡುವ ಪ್ರಶ್ನೆ ಉದ್ಭವಿಸಿರಲಿಲ್ಲ. ಆದರೆ, ನಂತರ ನಡೆದ ಪೂರಕ ಪರೀಕ್ಷೆಯಲ್ಲಿ ಶೇ.10 ಕೃಪಾಂಕ ನೀಡಲಾಗಿತ್ತು.ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಗೊಳಿಸುವ ದೃಷ್ಟಿಯಿಂದ ಕೃಪಾಂಕ ನೀಡುವ ವಿಚಾರ ನಿಯಮಾವಳಿಯಲ್ಲೇ ಇದೆ. ಅದು ಈ ವರ್ಷವೂ ಮುಂದುವರೆಯುತ್ತದೆ.

ಕೃಪಾಂಕವನ್ನು ನೀಡುವುದು ಹೇಗೆ?

ವಿದ್ಯಾರ್ಥಿಯು 625 ಅಂಕಕ್ಕೆ 219ಕ್ಕಿಂತ ಕಡಿಮೆ ಅಂಕ ಗಳಿಸಿ ಶೇ.35 ಪಡೆಯದೆ ಅನುತ್ತೀರ್ಣನಾಗಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿ ತೇರ್ಗಡೆಯಾಗುವಂತೆ ಮಾಡಲಾಗುತ್ತದೆ. ಶಿಕ್ಷಣ ಇಲಾಖೆಯ ಸೂಚನೆಯಂತೆ ಈ ನಿಯಮ ಜಾರಿ ಮಾಡಲಾಗಿದೆ ಎಂದು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಮೊದಲ ದಿನದ ಎಸ್ಎಸ್ಎಲ್‌ಸಿ ಪರೀಕ್ಷೆ; ಶೇ 98.48 ಹಾಜರಾತಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...