ವೇದಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ; ಎಐಡಿಎಸ್‌ಒ ಕಿಡಿ

Date:

  • ಜ್ಯೋತಿಷ್ಯದ ಬಗ್ಗೆ ಅಂಧಾಭಿಮಾನ ಸೃಷ್ಟಿಸುವುದು ಸರ್ಕಾರದ ಉದ್ದೇಶ
  • ದಲಿತ ಮತ್ತು ಮಹಿಳೆಯರನ್ನು ಶಿಕ್ಷಣದಿಂದ ಹೊರಗಿಡಲು ವೈದಿಕ ಶಿಕ್ಷಣ ಕಾರಣ

ಹೊರ ರಾಷ್ಟ್ರದ ವಿದ್ಯಾರ್ಥಿಗಳನ್ನು ಆಕರ್ಷಿಸಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಧರ್ಮನಿರಪೇಕ್ಷ, ವೈಜ್ಞಾನಿಕ ಆಶಯಗಳಿಗೆ ವಿರುದ್ಧವಾಗಿರುವ ವೈದಿಕ ಶಿಕ್ಷಣ, ಜ್ಯೋತಿಷ್ಯ ಪರಿಚಯಿಸಲು ಮುಂದಾಗಿದೆ. ಯುಜಿಸಿ ನಿರ್ಧಾರವನ್ನು ಅಖಿಲ ಭಾರತ ಪ್ರಜಾಸತಾತ್ಮಕ ವಿದ್ಯಾರ್ಥಿಗಳ ಸಂಘಟನೆ (ಎಐಡಿಎಸ್‌ಒ) ವಿರೋಧ ವ್ಯಕ್ತಪಡಿಸಿದೆ.

“ಕೇಂದ್ರ ಸರ್ಕಾರದ ‘ಹೊಸ ಶಿಕ್ಷಣ ನೀತಿ-2020’ರ ಪ್ರಕಾರ ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಆಕರ್ಷಿಸುವ ಸಲುವಾಗಿ ವೈದಿಕ ಗಣಿತ, ಸಂಸ್ಕೃತ, ಯೋಗ, ಆಯುರ್ವೇದ, ಜ್ಯೋತಿಷ್ಯದಂತಹ ವಿಷಯಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹೊಸದಾಗಿ ಸೇರಿಸಬೇಕು” ಎಂದು ಯುಜಿಸಿ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಆದೇಶ ಹೊರಡಿಸಿದೆ.

ದಲಿತರನ್ನು, ಮಹಿಳೆಯರನ್ನು ಶಿಕ್ಷಣದಿಂದ ದೂರವಿರುವಂತೆ ಮಾಡಲು ವೈದಿಕ ಶಿಕ್ಷಣ ಕಾರಣವಾಗಿತ್ತು. ಈ ಪುರಾಣಗಳ ವಿರುದ್ಧ ಜ್ಯೋತಿಬಾ ಫುಲೆ, ಸಾವಿತ್ರಿ ಬಾಯಿ ಫುಲೆ ಜೀವನಪರ್ಯಂತ ಹೋರಾಡಿದ್ದರು. ಇದೀಗ ಅದೇ ಅವೈಜ್ಞಾನಿಕ ಶಿಕ್ಷಣ ಪದ್ದತಿಯನ್ನು ಸರ್ಕಾರ ಜಾರಿ ಮಾಡಲು ಮುಂದಾಗಿದೆ ಎಂದು ಸಂಘಟನೆ ಕಿಡಿಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರಿಟಿಷರು ಭಾರತೀಯರನ್ನು ಅಂಧಕಾರದಲ್ಲಿಡಲು ವೈದಿಕ ಶಿಕ್ಷಣ ಪರಿಚಯಿಸಲು ಹೊರಟಾಗ ಈಶ್ವರ ಚಂದ್ರ ವಿದ್ಯಾಸಾಗರರು ವೇದಶಾಸ್ತ್ರ, ವೈದಿಕ ಜ್ಞಾನದಿಂದ ಯಾವ ಉಪಯೋಗವೂ ಇಲ್ಲ, ಬದಲಾಗಿ ಸಮಾಜದ ಪ್ರಗತಿಗೆ ಇಂಗ್ಲೀಷ್ ಭಾಷೆ, ವಿಜ್ಞಾನ, ಇತಿಹಾಸ, ಭೌಗೋಳ ಶಾಸ್ತ್ರದ ಅವಶ್ಯಕತೆ ಇದೆ ಎಂದಿದ್ದರು. ಜ್ಯೋತಿಷ್ಯ ಶಾಸ್ತ್ರವನ್ನು ಮಾನಸಿಕ ರೋಗ ಎಂದು ಸ್ವಾಮಿ ವಿವೇಕಾನಂದರು ಹೀಗೆಳೆದಿದ್ದರು.

ಈ ಸುದ್ದಿ ಓದಿದ್ದೀರಾ?: ಸಂರಕ್ಷಣಾಧಿಕಾರಿ ಪರೀಕ್ಷೆ; ವರ್ಷಗಳೇ ಕಳೆದರೂ ಪ್ರಕಟವಾಗದ ಫಲಿತಾಂಶ

ಇಂತಹ ಅವೈಜ್ಞಾನಿಕ ವಿಷಯಗಳನ್ನು ಶಿಕ್ಷಣದಲ್ಲಿ ತರುವ ಸರ್ಕಾರದ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ವೈದಿಕ ಶಿಕ್ಷಣ ಜ್ಯೋತಿಷ್ಯದ ಬಗ್ಗೆ ಅಂಧಾಭಿಮಾನ ಸೃಷ್ಟಿಸುವುದು. ‘ಧರ್ಮ, ಶಿಕ್ಷಣ ಹಾಗೂ ರಾಜಕೀಯದಿಂದ ಕೈತೆಗೆ’ ಎಂದಿದ್ದ ವಿವೇಕಾನಂದರ ಆಶಯಗಳ ವಿರುದ್ಧವಾಗಿ ಸರ್ಕಾರ ಕೋಮುದ್ವೇಷ ಸೃಷ್ಟಿಸಲು ಹೊರಟಿದೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ಅತ್ಯುಗ್ರವಾಗಿ ಖಂಡಿಸುತ್ತದೆ.

ವಿಶ್ವ ವಿದ್ಯಾಲಯಗಳಿಗೆ ತನ್ನದೇ ಆದ ಸ್ವಾಯತ್ತತೆ ಇದೆ. ಅಂತಹ ಸಂದರ್ಭದಲ್ಲಿ, ಇದನ್ನೇ ವಿವಿಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಬೋಧಿಸಬೇಕು ಎಂದು ಹಲವು ನಿರ್ದೇಶನಗಳನ್ನು ಎನ್.ಇ.ಪಿ ಹೆಸರಿನಲ್ಲಿ ವಿಶ್ವವಿದ್ಯಾಲಯಗಳ ಮೇಲೆ ಹೇರುತ್ತಿರುವ ಯುಜಿಸಿಯ ಕ್ರಮ ಅತ್ಯಂತ ಅಪ್ರಜಾತಾಂತ್ರಿಕ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಕೂಡಿದೆ ಎಂದು ಎಐಡಿಎಸ್‌ಒ ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...