ನಕಲಿ ಅಂಕಪಟ್ಟಿ | 51 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು: ವಿಟಿಯು

Date:

ನಕಲಿ ಅಂಕಪಟ್ಟಿ ಮತ್ತು ದಾಖಲೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವು (ವಿಟಿಯು) 51 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು ಪಡಿಸಿದೆ.

ಮೊದಲ ವರ್ಷದ ಎಂಜಿನಿಯರಿಂಗ್ ಪ್ರವೇಶಾತಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಒಎಸ್)ನಿಂದ ಅಂಕಪಟ್ಟಿ ತೆಗೆದುಕೊಂಡಿರುವದಾಗಿ 51 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶದ ಅಂಕಪಟ್ಟಿ ಸಲ್ಲಿಸಿದ್ದರು. ಆದರೆ, ಅವು ನಕಲಿ ಅಂಕಪಟ್ಟಿಗಳು ಎನ್ನಲಾಗಿದೆ.

ದಾಖಲೆಗಳ ಪರಿಶೀಲನೆಯಲ್ಲಿ ‌ಕ್ಯೂ‌ಆರ್ ಕೋಡ್ ಸ್ಕ್ಯಾನ್ ನಡೆಸಿದಾಗ ಅಕ್ರಮ ದೃಢಪಟ್ಟಿದೆ. ಇದಕ್ಕೂ ಮುನ್ನ ಎಲ್ಲ ಅಂಕಪಟ್ಟಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆ ಮಾನ್ಯ ಮಾಡಿತ್ತು. ಆದರೆ, ಕಾಲೇಜುವಾರು ಅನುಮೋದನೆ ‌ನೀಡುವಾಗ ಆ ಅಂಕಪಟ್ಟಿಗಳನ್ನು ವಿಟಿಯು ಅಮಾನ್ಯ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲಿ ಅಂಕಪಟ್ಟಿಗಳ ಹಿಂದೆ ದೊಡ್ಡ ಹಗರಣ ನಡೆದಿರುವ ಬಗ್ಗೆ ವಿಟಿಯು ಶಂಕೆ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ಮತ್ತು ಎನ್ಐಓಎಸ್‌ಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ರಮವೆಸಗಿದ ವಿದ್ಯಾರ್ಥಿಗಳು ಮ್ಯಾನೇಜ್‌ಮೆಂಟ್‌ ‌ಕೋಟಾದಡಿ ಬೆಂಗಳೂರಿನ ಪ್ರತಿಷ್ಠಿತ ‌ಇಂಜಿನಿಯರಿಂಗ್‌ ಕಾಲೇಜಿಗೆ ಪ್ರವೇಶ ಪಡೆದಿದ್ದರು. ವಿದ್ಯಾರ್ಥಿಗಳು ತುಮಕೂರು, ಚಿಕ್ಕಬಳ್ಳಾಪುರ ಮೂಲದವರೆಂಬ‌ ಮಾಹಿತಿ ಸಿಕ್ಕಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನೀಡಿದ ಪ್ರಮಾಣಪತ್ರಗಳು ನಕಲಿ ಎಂದು ಸಾಬೀತಾದ ಕಾರಣ, ಪ್ರವೇಶ ಪಡೆಯಲು ಅವಕಾಶ ನೀಡಿಲ್ಲ. ಇದಕ್ಕೂ ಮುನ್ನ ತಾಂತ್ರಿಕ ಶಿಕ್ಷಣ ಇಲಾಖೆ ಈ ಎಲ್ಲ ಅಂಕಪಟ್ಟಿಗಳನ್ನೂ ಮಾನ್ಯ ಮಾಡಿದೆ. ಆದರೆ, ವಿಟಿಯು ಕಾಲೇಜುವಾರು ಅನುಮೋದನೆ ನೀಡುವಾಗ ಅಮಾನ್ಯ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ವೇದಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ; ಎಐಡಿಎಸ್‌ಒ ಕಿಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...