ಅಶ್ಲೀಲ ಪದ ಬಳಸಿ ನಿಂದನೆ ; ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌

Date:

ಸ್ವಯಂಘೋಷಿತ ಹಿಂದೂ ಧರ್ಮ ರಕ್ಷಕನಾಗಿ, ಗೋರಕ್ಷಣೆಯ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಮತ್ತು ಬೆದರಿಕೆಯೊಡ್ಡುವ ಆರೋಪ ಎದುರಿಸುತ್ತಿರುವ ಪುನೀತ್‌ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಳಸುತ್ತಿರುವ ಅಶ್ಲೀಲ ನಿಂದನೀಯ ಪದಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದೆ.

ಕಾಂಗ್ರೆಸ್ ಮುಖಂಡರು ಹಾಗೂ ವಕೀಲರೂ ಆದ ಸೂರ್ಯ ಮುಕುಂದರಾಜ್ ಅವರ ವಿರುದ್ಧ ಅಶ್ಲೀಲ ಶಬ್ದಗಳಿಂದ ನಿಂದಿಸಿರುವ ಸಂಬಂಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬೂರು ಪೊಲೀಸ್ ಠಾಣೆಯ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ಎಚ್‌.ಸಿ. ಸಾಧಿಕ್ ಪಾಷಾ ಅವರು ಹಾಜರಾಗಿ, ನ್ಯಾಯಾಲಯವು ಪ್ರಕರಣ ದಾಖಲಿಸಲು ನೀಡಿದ ಅನುಮತಿ ಪತ್ರವನ್ನು ತಂದು ಠಾಣೆಗೆ ನೀಡಿದ್ದಾರೆ. ಅದರನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

13-10-2023ರಂದು ಪುನೀತ್‌ ಕೆರೆಹಳ್ಳಿ ಎಂಬ ವ್ಯಕ್ತಿಯು ಸೂರ್ಯ ಮುಕುಂದರಾಜ್‌ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಪುನೀತ್‌ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಕೆಟ್ಟದ್ದಾಗಿ ಈ ಪೋಸ್ಟ್‌ಗೆ ಕಮೆಂಟ್ ಮಾಡಿರುತ್ತಾರೆ. ಪುನೀತ್‌ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ ಎಂದು ದೂರು ವಿವರಿಸಲಾಗಿದೆ.

ಪುನೀತ್‌ ಕೆರೆಹಳ್ಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅವರ ಫೇಸ್‌ ಬುಕ್ ಖಾತೆಯನ್ನು ನಿರ್ಬಂಧಿಸಿ ನ್ಯಾಯ ಒದಗಿಸಿಕೊಡಬೇಕು. ಎಫ್‌ಐಆರ್‌ ದಾಖಲಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ತುಮಕೂರಿನ 4ನೇ ಅಧಿಕ ಸಿವಿಲ್ ಮತ್ತು 5ನೇ ಜೆ.ಎಂ.ಎಫ್‌.ಸಿ. ನ್ಯಾಯಾಲಯದಲ್ಲಿ ಮನವಿ ಮಾಡಲಾಗಿತ್ತು. ನ್ಯಾಯಾಲಯವು ಅನುಮತಿ ನೀಡಿದ್ದು, ಅದರ ಅನ್ವಯ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಿಂದೂ ಧರ್ಮ ರಕ್ಷಣೆಯ ಹೆಸರಲ್ಲಿ ಸಕ್ರಿಯನಾಗಿರುವ ಪುನೀತ್ ಕೆರೆಹಳ್ಳಿ ತನ್ನ ವಿರೋಧಿಗಳ ಕುರಿತು ಅಶ್ಲೀಲ ಪದಗಳಲ್ಲಿ ಬರೆಯುವುದು, ಮಾತನಾಡುವುದು ಸಾಮಾನ್ಯವಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಅಮಾನಿಸುವಂತಹ ’ನಪುಂಸಕ’ ಪದವನ್ನು ಪದೇ ಪದೇ ಬಳಸುತ್ತಿರುವುದನ್ನು ಕಾಣಬಹುದು. ಸಂಸ್ಕೃತಿಯ ಬಗ್ಗೆ ಮಾತನಾಡುವ ಪುನೀತ್‌ ಕೆರೆಹಳ್ಳಿ, ಬಳಸುವ ಭಾಷೆ ತೀರಾ ಸಂಸ್ಕೃತಿ ಹೀನವಾಗಿರುವುದು ಕಂಡುಬಂದಿದೆ.

ಬಿಜೆಪಿ ಅಧಿಕಾರದಲ್ಲಿದ್ದಾಗ 2013ರ ಮಾರ್ಚ್ ವೇಳೆ ದಾಖಲಾದ ವೇಶ್ಯಾವಾಟಿಕೆ ಧಂದೆ ಪ್ರಕರಣದಲ್ಲಿ ಪುನೀತ್‌ ಕೆರೆಹಳ್ಳಿ ಹೆಸರಿತ್ತು. ಪೊಲೀಸರ ನಿರ್ಲಕ್ಷ್ಯದಿಂದಾಗಿ ಪ್ರಕರಣ ದಿಕ್ಕುತಪ್ಪಿರುವ ಕುರಿತು ಆರೋಪಗಳು ಬಂದಿವೆ.

ವೇಶ್ಯಾವಾಟಿಕೆಯಲ್ಲಿ ಪಿಂಪ್‌ ಆಗಿ ಸಿಕ್ಕಿಬಿದ್ದಿದ್ದ ವ್ಯಕ್ತಿಯು ತಪ್ಪಿಸಿಕೊಂಡಿದ್ದು ಹೇಗೆ ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ವಿಚಾರವಾಗಿ ಮಾತನಾಡಿದವರ ಕುರಿತು ತಂದೆ, ತಾಯಿ, ಮಕ್ಕಳನ್ನೂ ಎಳೆದುತಂದು ಅಶ್ಲೀಲ ಪದಗಳಿಗಳಿಂದ ನಿಂದಿಸುವ ಕೆಲಸಕ್ಕೆ ಪುನೀತ್ ಕೆರೆಹಳ್ಳಿ ಮುಂದಾಗಿದ್ದನ್ನು ಕಾಣಬಹುದು. ಕನ್ನಡಪರ ಹೋರಾಟಗಾರ ಹರೀಶ್‌ ಭೈರಪ್ಪ ಮತ್ತು ಕಾಂಗ್ರೆಸ್‌ ಮುಖಂಡ ಸೂರ್ಯ ಮುಕುಂದರಾಜು ಅವರ ಬಗ್ಗೆ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಾಕುತ್ತಿದ್ದ ಪೋಸ್ಟ್‌ಗಳು ಅತ್ಯಂತ ತುಚ್ಛವಾಗಿದ್ದವು.

ಅಲ್ಲದೆ ವಿಧಾನಸೌಧಕ್ಕೆ ಕಲ್ಲು ಹೊಡೆಯುವುದಾಗಿ, ಬಸ್ಸಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುವ ಸಂಬಂಧ ಇತ್ತೀಚೆಗೆ ಮತ್ತೊಂದು ಪ್ರಕರಣ ಕೂಡ ದಾಖಲಾಗಿತ್ತು. ಹಿಂಸಾತ್ಮಕ ಕೃತ್ಯಗಳನ್ನು ನಡೆಸಿ ಸಾಮಾಜಿಕ ಸ್ಥಾಸ್ಥ್ಯ ಕೆಡಿಸುವ ಬೆದರಿಕೆಗಳನ್ನು ಪುನೀತ್ ಕೆರೆಹಳ್ಳಿ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...