ವೇಶ್ಯಾವಾಟಿಕೆ ದಂಧೆ | ಪುನೀತ್ ಕೆರೆಹಳ್ಳಿ ಜೊತೆ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕ ಯುವತಿ ಹೇಳಿದ್ದೇನು ?

Date:

ಗಾರ್ಮೆಂಟ್ ಫ್ಯಾಕ್ಟರಿಗೆ ಹೋಗುವ ಬಡ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ತಂಡದಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಇದ್ದ. ಅವರ ಬಡತನವನ್ನೇ ಬಳಸಿಕೊಂಡು ವೇಶ್ಯಾವಾಟಿಕೆಗೆ ದೂಡುತ್ತಿದ್ದರು. ಈ ಬಗ್ಗೆ ವೇಶ್ಯಾವಾಟಿಕೆಯಿಂದ ರಕ್ಷಣೆಗೊಳಗಾದ ಯುವತಿಯೇ ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ನೀಡಿದ್ದಾಳೆ.

ವೇಶ್ಯಾವಾಟಿಕೆಯ ಅಡ್ಡೆಯಲ್ಲಿ ಬಂಧಿಯಾಗಿ ಪುನೀತ್ ಕೆರೆಹಳ್ಳಿಯ ಕಪಿಮುಷ್ಠಿಯಲ್ಲಿದ್ದ ಯುವತಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಲಿಖಿತ ಹೇಳಿಕೆಯ ಯಥಾವತ್ತು ಇಲ್ಲಿದೆ.

ನಾನು ಶ್ರೀಮತಿ ಪ್ರೇಮ (ಗೌಪ್ಯತೆಗಾಗಿ ಹೆಸರು ಬದಲಿಸಲಾಗಿದೆ) ಗಂಡ ಲೇಟ್ ರಮೇಶ, 36 ವರ್ಷ, ಬಸ್ ನಿಲ್ದಾಣದ ಹತ್ತಿರ, ಮನೋರಾಯನ ಪಾಳ್ಯ, ಆರ್ ಟಿ ನಗರ ಅಂಚೆ, ಬೆಂಗಳೂರು ನಗರ 32. ಸ್ವಂತ ವಿಳಾಸ ಭಾರತಿ ನಗರ, ಹಾವಡಿ ಚೆನ್ನೈ, ತಮಿಳುನಾಡು. ನಾನು ಹೊಟ್ಟೆಪಾಡಿಗಾಗಿ ಬೆಂಗಳೂರಿನ ಕನಕನಗರದ ಗಾಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದೇನೆ.

ನನಗೆ ಇತ್ತೀಚಿಗೆ ಶ್ರೀಮತಿ ಮಂಜುಳ ಮತ್ತು ಮದನ್ ಮೋಹನ್‌ರವರು ಪರಿಚಯವಾಗಿದ್ದು, ನನ್ನನ್ನು ಅವರು ವಾಸವಿದ್ದ ಕೆ ಬಿ ಸಂದ್ರ, ಗುರುಕೃಪ ಹೋಟೆಲ್ ಹತ್ತಿರ, ರಾಜಾರಾಮಣ್ಣ ರಸ್ತೆ, ಅನ್ಸಿಆಲ್ಫಾ ಅಪಾರ್ಟ್‌ಮೆಂಟ್, ನಂ ಸಿ 17[12] ಕ್ಕೆ ಕರೆದುಕೊಂಡು ಹೋಗುತ್ತಿದ್ದರು. ನಾನು ಅವರ ಮನೆಗೆ ಹೋದಾಗ ಹಣದ ಆಸೆ ತೋರಿಸಿ ವೇಶ್ಯಾವಾಟಿಕೆಗೆ ತೊಡಗುವಂತೆ ಬಲವಂತ ಮಾಡುತ್ತಿದ್ದರು. ನಾನು ಬೇಡವೆಂದು ಹೇಳಿದರೂ ಪುಸಲಾಯಿಸಿ ಹೊರಗಡೆಯಿಂದ ಗಿರಾಕಿಗಳನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದರು. ನಂತರ ಗಿರಾಕಿಗಳಿಂದ ಹೆಚ್ಚಿನ ಹಣ ಪಡೆದು ನನಗೆ ಕಡಿಮೆ ಹಣ ಕೊಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನನ್ನಂತೆಯೆ ಕೇವಲ 19 ವರ್ಷ ವಯಸ್ಸಿನ ನೇಹಾ, 33 ವರ್ಷ ವಯಸ್ಸಿನ ಶಿಲ್ಪಾ, 33 ವರ್ಷ ವಯಸ್ಸಿನ ತಾಹೀರಾ ಭಾನು (ಎಲ್ಲರ ಹೆಸರುಗಳನ್ನು ಈ ಲೇಖನಕ್ಕಾಗಿ ಬದಲಿಸಲಾಗಿದೆ) ಎಂಬುವರು ಮಂಜುಳಾರವರ ಮನೆಗೆ ಬಂದಿದ್ದು ಅವರುಗಳಿಗೂ ಸಹ ಹಣದ ಆಸೆ ತೋರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದರು.

ದಿನಾಂಕ 21/03/2013ರಂದು ಮಧ್ಯರಾತ್ರಿ ಸುಮಾರು 3.00 ಗಂಟೆಯ ಸಮಯದಲ್ಲಿ ಡಿಜೆ ಹಳ್ಳಿ ಪೊಲೀಸರು ನಾವುಗಳು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಂಜುಳಾ, ಮದನ್ ಮೋಹನ್‌ರವರು ಬಾಡಿಗೆಗೆ ಪಡೆದು ವಾಸವಿದ್ದ ಮನೆಯ ಮೇಲೆ ದಾಳಿ ಮಾಡಿದ್ದು, ನಮ್ಮನ್ನು ಹಿಡಿದುಕೊಂಡರು. ನಂತರ ಪೊಲೀಸರು ನಮ್ಮನ್ನು ಘಟನೆಯ ಬಗ್ಗೆ ವಿಚಾರಣೆ ಮಾಡಿದಾಗ ಮಂಜುಳಾರವರು ಹಣದ ಆಸೆ ತೋರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿರುವುದಾಗಿ ಒಪ್ಪಿಕೊಂಡೆವು.

ಪೊಲೀಸರು ದಾಳಿ ಮಾಡಿದಾಗ ಮನೆಯಲ್ಲಿ ಮಂಜುಳಾ, ಮದನ್‌ಮೋಹನ್, ಸಿ ರವಿ, ಕೆರೆಹಳ್ಳಿಯ ಪುನೀತ್ ಕುಮಾರ್, ಭರತ್, ಹೆಚ್ ಡಿ ಚಂದ್ರಶೇಖರ್, ಜಿ ಎಸ್ ಪುನಿತ್ ಕುಮಾರ್ ರವರು ಇದ್ದು ಅವರನ್ನು ವಶಕ್ಕೆ ತೆಗೆದುಕೊಂಡರು.

ಮನೆಯಲ್ಲಿ ವೇಶ್ಯಾವಾಟಿಕೆಗೆ ಬಳಸುತ್ತಿದ್ದ ನಿರೋದ್ ಪ್ಯಾಕೆಟ್‌ಗಳು, ಮೊಬೈಲ್‌ಗಳು, ಮದ್ಯದ ಬಾಟೆಲ್‌ಗಳು, ಮೋಟಾರ್ ಬೈಕನ್ನು ವಶಕ್ಕೆ ತೆಗೆದುಕೊಂಡರು. ನಂತರ ಎಲ್ಲರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದರು.

ನಮಗೆ ಹಣದ ಆಸೆ ತೋರಿಸಿ ಪುಸಲಾಯಿಸಿ ಬಲವಂತವಾಗಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದು, ಮಂಜುಳಾ ಮತ್ತು ಮದನ್ ಮೋಹನ್ ಹಾಗು ಅವರ ಮನೆಯಲ್ಲಿ ವೇಶ್ಯಾಟಿಕೆಯಲ್ಲಿ ತೊಡಗಿದ್ದ ಸಿ ರವಿ, ಪುನೀತ್ ಕುಮಾರ್, ಭರತ್, ಹೆಚ್ ಡಿ ಚಂದ್ರಶೇಖರ್, ಜಿ ಎಸ್ ಪುನಿತ್‌ ಕುಮಾರ್‌ರವರನ್ನು ನೋಡಿದ್ದು ಮತ್ತೆ ನೋಡಿದರೆ ಗುರುತಿಸುತ್ತೇನೆ.

ನನ್ನ ಸಮಕ್ಷಮ
ಓದಿಸಿ ಕೇಳಿದೆ, ಹೇಳಿದಂತೆ ಸರಿಯಿದೆ.

(ಚಾರ್ಜ್‌ಶೀಟ್‌ನಲ್ಲಿರುವ ನೊಂದ ಯುವತಿಯ ಹೇಳಿಕೆಯ ಯಥಾವತ್ತನ್ನು ಅರ್ಥ ವ್ಯತ್ಯಾಸವಾಗದಂತೆ, ಆದರೆ ಕಾನೂನು ಭಾಷೆಯು ಜನಸಾಮಾನ್ಯರಿಗೆ ಅರ್ಥವಾಗುವಂತೆ ಬದಲಾವಣೆ ಮಾಡಿಕೊಂಡು ಅಕ್ಷರ ರೂಪಕ್ಕೆ ಇಳಿಸಲಾಗಿದೆ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ಯಾಚಾರಿಗಳಿಗೆ ರಾಜಕೀಯ ರಕ್ಷೆ: ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ?

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ...

‘ಸಂಸ್ಕಾರಿ’ ಅತ್ಯಾಚಾರಿಗಳಿಗೆ ರಾಜಕೀಯ ರಕ್ಷಾಕವಚ: ಆಸಾರಾಮ ಬಾಪೂ ಆಟ ಮತ್ತು ಅಧಿಕಾರಸ್ಥರ ಬೆತ್ತಲೆ ಹಗರಣ

ಒಬ್ಬ ಸಾಮಾನ್ಯ ಕೈದಿಗೆ ಸಿಗದ ಸವಲತ್ತುಗಳು, ಅತ್ಯಾಚಾರ ಮತ್ತು ಕೊಲೆ ಬೆದರಿಕೆಯಂತಹ...

ಉನ್ನಾಂವ್ ಅತ್ಯಾಚಾರ ಹಗರಣ: ಕುಲದೀಪ್ ಸೆಂಗರ್‌ನ ಹೀನಕೃತ್ಯ; ಬಿಜೆಪಿ ನೈತಿಕ ದಿವಾಳಿತನ

ಅತ್ಯಾಚಾರದ ಆರೋಪಿಗೆ ಸರ್ಕಾರದಲ್ಲಿ ಮಂತ್ರಿಗಿರಿ ಕೊಡುವುದು, ಅತ್ಯಾಚಾರದ ಆರೋಪ ಹೊತ್ತು ಜೈಲಿಗೆ...

ಸಮಗ್ರ ವರದಿ | ವಕ್ಫ್ ಬಗ್ಗೆ ಬಿಜೆಪಿ ಬಿತ್ತಿದ ಭಯಾನಕ ಸುಳ್ಳುಗಳು!

ಬಿಜೆಪಿ ನಾಯಕರು ಬಿತ್ತಿದ ಸರಣಿ ಸುಳ್ಳುಗಳನ್ನು ತೆರೆದಿಡುವ ಮತ್ತು ವಾಸ್ತವಗಳನ್ನು ತಿಳಿಸುವ...