ಪ್ರತಿ ಗ್ರಾಮ ಪಂಚಾಯತಿಗೆ 1 ಕೋಟಿ ಅನುದಾನ: ರಾಹುಲ್‌ ಗಾಂಧಿ ಭರವಸೆ

Date:

  • ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸುತ್ತೇವೆ
  • ಕಲಬುರಗಿ ಭಾಗಕ್ಕೆ ₹5000 ಕೋಟಿ ಅನುದಾನ ನೀಡುತ್ತೇವೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯತಿಗೆ 1 ಕೋಟಿ ಅನುದಾನ ಕೊಟ್ಟು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದರು.

ಕಲಬುರಗಿ ಜಿಲ್ಲೆಯ ಜೇರ್ವಗಿ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಪ್ರತಿ ವರ್ಷ ನಮ್ಮ ಸರ್ಕಾರದಿಂದ ಈ ಭಾಗಕ್ಕೆ 5000 ಕೋಟಿ ಅನುದಾನವನ್ನು ನೀಡುತ್ತೇವೆ” ಎಂದರು.

“ಈ ಭಾಗದ ಜನರಿಗೆ ಸಿಗಬೇಕಿದ್ದ ಸುಮಾರು 50,000 ಹುದ್ದೆಗಳನ್ನು ಇನ್ನೂ ಭರ್ತಿ ಮಾಡಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 50,000 ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ವಿಶೇಷವಾಗಿ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸುತ್ತೇವೆ. ಈ ಭಾಗದಲ್ಲಿ ಐಐಟಿ  ಮತ್ತು ಐಐಎಂಗಳ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳನ್ನು ನಾವು ತರುತ್ತೇವೆ” ಎಂದು ಆಶ್ವಾಸನೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ. ಇದು ಜನಾಭಿಪ್ರಾಯದ ಮೂಲಕ ಬಂದ ಸರ್ಕಾರವಲ್ಲ. ನಮ್ಮ ಕಾಂಗ್ರೆಸ್ ಶಾಸಕರನ್ನು ವಾಮಮಾರ್ಗದ ಮೂಲಕ ಖರೀದೀಸಿ ಬಿಜೆಪಿ ಸರ್ಕಾರ ರಚಿಸಿದೆ” ಎಂದು ವಾಗ್ದಾಳಿ ನಡೆಸಿರು.

“ಪ್ರತಿಯೊಂದು ಕೆಲಸದಲ್ಲೂ ಬಿಜೆಪಿ ಸರ್ಕಾರ 40% ಭ್ರಷ್ಟಾಚಾರ ಮಾಡಿದೆ. ಇದೇ ಕಾರಣಕ್ಕೆ ಇಡೀ ದೇಶದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಸರ್ಕಾರ ಎಂದು ಹೆಸರು ಬಂದಿದೆ. ಗುತ್ತಿಗೆದಾರರ ಸಂಘ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಇದೊಂದು 40% ಕಮಿಷನ್ ಸರ್ಕಾರ ಅಂತ ನೇರವಾಗಿ ಆರೋಪಿಸಿದ್ದಾರೆ. ಆದರೆ ಪ್ರಧಾನಿ ಅವರು ಮಾತ್ರ ಈ ಪತ್ರಕ್ಕೆ ಇದುವರೆಗೂ ಉತ್ತರಿಸಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರ ಈ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ” ಎಂದರು.

“ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದನ್ನು ಯಾವ ಕಾರಣಕ್ಕೂ ತಡೆಯಲು ಸಾಧ್ಯವಿಲ್ಲ. ಬಿಜೆಪಿ ಅವರಿಗೆ 40 ಸಂಖ್ಯೆ ಎಂಬುದು ಬಹಳ ಇಷ್ಟವಾದ ಮತ್ತು ಪ್ರೀತಿಯ ಸಂಖ್ಯೆ. ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 40 ಸೀಟು ಮಾತ್ರ ನೀಡುತ್ತಾರೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ 150 ಸೀಟು ಖಂಡಿತವಾಗಿಯೂ ಕರ್ನಾಟಕದ ಜನತೆ ನೀಡುತ್ತಾರೆ” ಭರವಸೆ ವ್ಯಕ್ತಪಡಿಸಿದರು.

“ಧಾರಾಕಾರ ಮಳೆ ಸುರಿಯುತ್ತಿದ್ದರೂ ಇಷ್ಟೊಂದು ಬೃಹತ್ ಸಂಖ್ಯೆಯಲ್ಲಿ ಹಳ್ಳಿಯಿಂದ ಬಂದ ನಿಮಗೆಲ್ಲರಿಗೂ ನನ್ನ ಕೃತಜ್ಞತೆಯ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದ ರಾಹುಲ್‌ ಗಾಂಧಿ ಮಳೆಯಲ್ಲೇ ತೋಯಿಸಿಕೊಂಡು ಭಾಷಣ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...