ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ: ಧಾರವಾಡಕ್ಕೆ ಪ್ರವೇಶ ನಿರಾಕರಣೆ

Date:

  • ಕ್ಷೇತ್ರಕ್ಕೆ ಕಾಲಿಡಲು ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
  • ಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ಎದುರಾಗಿದ್ದು, ಧಾರವಾಡ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ವಿನಯ್‌ ಕುಲಕರ್ಣಿ ಧಾರವಾಡಕ್ಕೆ ಪ್ರವೇಶಿಸದಂತೆ ನಿರಾಕರಿಸಿದೆ.

2016ರ ಜೂನ್‌ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಜಿಮ್‌ನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಆರೋಪದ ಮೇಲೆ 2020ರ ನವೆಂಬರ್‌ನಲ್ಲಿ ಅಂದಿನ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪೊಲೀಸರು ಬಂಧಿಸಿದ್ದರು.

ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಹಲವು ಷರತ್ತು ವಿಧಿಸಿ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಜೊತೆಗೆ ಧಾರವಾಡಕ್ಕೆ ಪ್ರವೇಶಿಸಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವು ಇನ್ನೂ ನ್ಯಾಯಾಲಯದ ವಿಚಾರಣೆಯಲ್ಲಿದೆ. ಇದೇ ವೇಳೆ ಚುನಾವಣೆಯೂ ಎದುರಾಗಿದೆ. ಹೀಗಾಗಿ, ತಮಗೆ ಧಾವಾಡ ಪ್ರವೇಶಕ್ಕೆ ಅನುಮತಿ ನಿಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಮುಸ್ಲಿಮರ ಮೀಸಲಾತಿ ರದ್ದು; ಏಪ್ರಿಲ್ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. ಈ ವೇಳೆ, ವನಯ್ ವಿರುದ್ಧ ವಾದ ಮಂಡಿಸಿದ್ದ ವಕೀಲರು, “ಕಳೆದ ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ಕೂಡ ವಿನಯ್‌ ಧಾರವಾಡ ಪ್ರವೇಶಿಸುವುದನ್ನು ನಿರಾಕರಿಸಿತ್ತು” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮಾಹಿತಿ ಪಡೆದ ಜನಪ್ರತಿನಿಧಿಗಳ ನ್ಯಾಯಾಲಯವು ವಿಜಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಗೆ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸ್ಪರ್ಧಿಸಿದ್ದಾರೆ. ಅವರ ಪರವಾಗಿ ಅವರ ಪತ್ನಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ, ನ್ಯಾಯಾಲಯವು ಧಾರವಾಡ ಪ್ರವೇಶಕ್ಕೆ ಅವಕಾಶ ಕಲ್ಪಿಸದೇ ಇರುವುದರಿಂದ ವಿನಯ್‌ ಕುಲಕರ್ಣಿ ಮತ್ತು ಕಾಂಗ್ರೆಸ್‌ಗೆ ಹಿನ್ನೆಡೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...