ಮೋದಿ ರೋಡ್‌ ಶೋ : ನಿಜಕ್ಕೂ ಹೂವು ತಂದಿದ್ದು ಜನರೇ?

Date:

  • ಪ್ರಧಾನಿ ರೋಡ್‌ ಶೋನಲ್ಲಿ 40 ಟನ್‌ ಹೂವು ಬಳಕೆ
  • ರಾಶಿ ಹೂವು ಜನರ ಕೈ ಸೇರಿದ್ದರ ಹಿಂದಿನ ಅಸಲಿಯತ್ತು ಬಯಲು

ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ನಡೆಸಿದ ರೋಡ್‌ ಶೋಗೆ ಬಳಕೆಯಾದ 40 ಟನ್‌ ಹೂವುಗಳು ಸಾರ್ವಜನಿಕರು ತಂದಿದ್ದಲ್ಲ, ಬದಲಿಗೆ ಬಿಜೆಪಿಗರೇ ಮಾರುಕಟ್ಟೆಯಿಂದ ಹೂವು ಖರೀದಿಸಿ ಜನರಿಗೆ ಹಂಚಿದ್ದು ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಮಾತುಗಳಿಗೆ ಪುಷ್ಟಿ ನೀಡುವುಂತೆ ಬಿಜೆಪಿಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೂಗಳನ್ನು ರಾಶಿ ಹಾಕಿರುವ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಬಹುಭಾಷಾ ನಟ ಪ್ರಕಾಶ್‌ ರಾಜ್‌ ಸೇರಿದಂತೆ ಹಲವರು ಬಿಜೆಪಿಗರಿಗೆ ಛೀಮಾರಿ ಹಾಕಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ಕಳೆದ ಶನಿವಾರ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿದ್ದರು. ಈ ರೋಡ್‌ ಶೋನಲ್ಲಿ ಮೋದಿ ಅವರ ಸ್ವಾಗತಕ್ಕೆ 40 ಟನ್‌ ಹೂಗಳು ಬಳಕೆಯಾಗಿದೆ ಎಂದು ವರದಿಯಾಗಿತ್ತು. ಸಾರ್ವಜನಿಕರು ತಮ್ಮ ಸ್ವಂತ ಹಣದಲ್ಲಿ ಹೂವು ಖರೀದಿಸಿ ದಾರಿಯುದ್ದಕ್ಕೂ ಚೆಲ್ಲಿ ಪ್ರಧಾನಿಗಳಿಗೆ ಭವ್ಯ ಸ್ವಾಗತ ನೀಡಿದರು ಎಂದೆಲ್ಲ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಗಿಟ್ಟಸಿಕೊಂಡಿದ್ದರು. ಆದರೆ, ಬೆಂಗಳೂರಿನ ಬೀದಿಗಳಲ್ಲಿ ಕಿಲೋ ಮೀಟರ್‌ಗಟ್ಟಲೇ ಬಿದ್ದ 40 ಟನ್‌ ಹೂಗಳನ್ನು ಸಾರ್ವಜನಿಕರು ತಮ್ಮ ಸ್ವಂತ ಹಣದಲ್ಲಿ ಖರೀದಿಸಿ ತಂದಿದ್ದಲ್ಲ, ಬದಲಿಗೆ ಬಿಜೆಪಿ ನಾಯಕರು ಖರೀದಿಸಿ ಜನರಿಗೆ ಹಂಚಿದ್ದು ಎಂಬ ಅಂಶ ಬಹಿರಂಗಗೊಂಡಿದೆ.

ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೂವಿನ ರಾಶಿಯನ್ನು ಪರಿಶೀಲಿಸುತ್ತಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ʼಆಲ್ಟ್‌ ನ್ಯೂಸ್‌ʼ ಮುಖ್ಯಸ್ಥ ಮೊಹಮ್ಮದ್‌ ಝುಬೈರ್‌, “ಜನ ಸಾಮಾನ್ಯರು ತಮ್ಮ ಸ್ವಂತ ಹಣ ಖರ್ಚು ಮಾಡಿ ಹೂವು ಚೆಲ್ಲಿ ಮೋದಿ ಅವರನ್ನು ಸ್ವಾಗತಿಸಿದರು ಎಂದು ಮಾಧ್ಯಮಗಳು ಬಿಂಬಿಸುತ್ತಿವೆ. ಆದರೆ, ಬಿಜೆಪಿ ಕಾರ್ಯಕರ್ತರಿಗೆ ಹೂವು ಹಂಚಿದ್ದು ಯಾರು ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ನೋಡಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಝುಬೈರ್‌ ಅವರ ಈ ಟ್ವೀಟ್‌ ಅನ್ನು ಬಳಸಿ ಬಿಜೆಪಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಕಾಶ್‌ ರಾಜ್‌, “ನಾಚಿಕೆಗೇಡು, ಮಹಾಸುಳ್ಳನ ರಂಗತಯಾರಿ” ಎಂದು ಛೀ ಮಾರಿ ಹಾಕಿದ್ದಾರೆ.

ಮೋದಿ ರೋಡ್‌ ಶೋಗೆ ಬಳಕೆಯಾದ ಹೂವಿನ ರಾಶಿಯ ಬಳಿ ಶೋಭಾ ಕರಂದ್ಲಾಜೆ ಇರುವ ವಿಡಿಯೋ ವೈರಲ್‌ ಆಗುತ್ತಲೇ ಆಕ್ರೋಶಗೊಂಡ ನೆಟ್ಟಿಗರು, “ಬಿಜೆಪಿ ನಾಯಕರು ಹೂವನ್ನು ಮಾತ್ರ ಖರೀದಿಸಿಲ್ಲ, ದಾರಿಯುದ್ದಕ್ಕೂ ಆ ಹೂಗಳನ್ನು ಚೆಲ್ಲಲು ಜನರನ್ನು ಕೂಡ ದುಡ್ಡು ಕೊಟ್ಟು ಕರೆ ತಂದಿದ್ದಾರೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...