ಚುನಾವಣಾ ಪ್ರಚಾರಕ್ಕೆ ಕೇಜ್ರಿವಾಲ್ ಗೈರು; ಎಎಪಿ ಕಾರ್ಯಕರ್ತರಲ್ಲಿ ಕುಗ್ಗಿದೆಯಾ ಉತ್ಸಾಹ?

Date:

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶರುವಾಗಿದೆ. ಎಲ್ಲ ಪಕ್ಷಗಳು ಅಂತಿಮ ಸುತ್ತಿನ ಪ್ರಚಾರಕ್ಕೆ ತಂತ್ರ ರೂಪಿಸುತ್ತಿವೆ. ಆದರೆ, ಈ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ತೋರಿಸಲು ಮುಂದಾಗಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ಸದ್ದಿಲ್ಲದಂತಾಗಿದೆ. ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಪ್ರಚಾರಕ್ಕೆ ಗೈರುಹಾಜರಾಗಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹವನ್ನು ಕುಗ್ಗಿಸಿದಂತೆ ಕಾಣುತ್ತಿದೆ.

ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬಳಿಕ ಎಲ್ಲ ಪಕ್ಷಗಳ ರಾಷ್ಟ್ರ ಮತ್ತು ಸ್ಥಳೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಎಎಪಿ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರಾಜ್ಯಕ್ಕೆ ಒಮ್ಮೆಯಷ್ಟೆ ಭೇಟಿ ನೀಡಿದ್ದಾರೆ. ಅದೂ, ಮಾರ್ಚ್‌ ತಿಂಗಳಿನಲ್ಲಿ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರಷ್ಟೇ. ಎಎಪಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಅದು ಎದುರಿಸುತ್ತಿರುವ ಮೊದಲ ಚುನಾವಣೆಯಿದು. ಆದರೂ, ಪಕ್ಷದ ನಾಯಕರು ರಾಜ್ಯದತ್ತ ಮುಖಮಾಡಿಲ್ಲ.

ಕೇಜ್ರಿವಾಲ್ ದೆಹಲಿಯಲ್ಲಾಗುತ್ತಿರುವ ಬೆಳವಣಿಗೆಗಳಿಂದಾಗಿ ಅಲ್ಲಿಯೇ ಸಿಕ್ಕಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಅನುಪಸ್ಥಿತಿಯು ರಾಜ್ಯದ ಎಎಪಿ ಕಾರ್ಯಕರ್ತರಲ್ಲಿ ಚುನಾವಣಾ ಸಡಗರವನ್ನು ಕುಗ್ಗಿಸಿದೆ. ರಾಜ್ಯ ನಾಯಕರು ತಮ್ಮ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸುವ, ಚುನಾವಣೆಯಲ್ಲಿ ಉತ್ಸುಕತೆಯಲ್ಲಿ ಕೆಲಸ ಮಾಡುವಂತೆ ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಒಂದಷ್ಟು ಕ್ಷೇತ್ರಗಳನ್ನಾದರೂ ಗೆಲ್ಲಬೇಕು ಮತ್ತು ತಮ್ಮ ಪ್ರಭಾವವನ್ನು ವೃದ್ಧಿಸಬೇಕೆಂದು ಶ್ರಮಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಡಾ ಕೆ.ಸುಧಾಕರ್: ಅಪಾಯಕಾರಿ ರಾಜಕೀಯ ಶೈಲಿ

“ನಮ್ಮದು ಒಂದು ಸಣ್ಣ ಪಕ್ಷ. ದೆಹಲಿ ಎಎಪಿ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನೋಡಿಕೊಳ್ಳುತ್ತಿದ್ದ ಇಬ್ಬರು ಪ್ರಮುಖ ಮಂತ್ರಿಗಳು ಜೈಲಿನಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಮತ್ತು ಅಲ್ಲಿಯ ಜನರು ನಿರಾಶೆಗೊಳ್ಳದಂತೆ ನೋಡಿಕೊಳ್ಳುವುದು ಕೇಜ್ರಿವಾಲ್ ಅವರ ಮೊದಲ ಆಧ್ಯತೆಯಾಗಿದೆ,” ಎಂದು ರಾಜ್ಯ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

“ಸಂಸದರಾದ ಸಂಜಯ್ ಸಿಂಗ್, ರಾಘವ್ ಚಡ್ಡಾ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ಇತರ ಎಎಪಿ ನಾಯಕರು ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಕೇಜ್ರಿವಾಲ್ ಗೈರಾಗಿದ್ದರೂ, ಅವರ ತತ್ವ-ಆದರ್ಶಗಳು ನಮ್ಮೊಂದಿಗಿವೆ. ಹೀಗಾಗಿ, ಕಾರ್ಯಕರ್ತರು ಉತ್ಸಾಹದಿಂದಲೇ ಕೆಲಸ ಮಾಡುತ್ತಿದ್ದಾರೆ,” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ಮೇಲೆ ಬಿಜೆಪಿಯವರು ಮುಗಿಬಿದ್ದಿರುವ ಕಾರಣ ವಿವರಿಸಿದ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...