ಡಿಕೆಶಿ ನಾಮಪತ್ರ ಅಂಗೀಕಾರ; ಕನಕಪುರದಲ್ಲಿ ಡಿ ಕೆ ಶಿವಕುಮಾರ್‌ ಸ್ಪರ್ಧೆ ಖಚಿತ

Date:

  • ಬಿಜೆಪಿಯ ಷಡ್ಯಂತ್ರ ಅರಿತು ಮುನ್ನೆಚ್ಚರಿಕೆಗಾಗಿ ಸುರೇಶ್ ನಾಮಪತ್ರ ಸಲ್ಲಿಸಿದ್ದರು
  • ರಾಜಕೀಯದಿಂದಲೇ ನನ್ನನ್ನು ತೆಗೆದುಹಾಕಲು ಬಿಜೆಪಿ ಷಡ್ಯಂತ್ರ ರೂಪಿಸಿದ್ದಾರೆ’

ಸಾಕಷ್ಟು ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಮಪತ್ರ ಅಂಗೀಕಾರಗೊಂಡಿದೆ. ಇದರಿಂದ ಕನಕಪುರದಲ್ಲಿ ಡಿಕೆಶಿ ಸ್ಪರ್ಧಿಸುವುದು ಅಂತಿಮವಾಗಿದೆ.

ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ. ಇದರಿಂದ ಆತಂಕದಲ್ಲಿದ್ದ ಡಿ ಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

“ರಾಜಕೀಯ ಜೀವನದಿಂದ ನನ್ನ ಮುಗಿಸಲು ಬಿಜೆಪಿ ಸತತವಾಗಿ ಪ್ರಯತ್ನ ನಡೆಸುತ್ತಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸದಂತೆ ತಡೆ ಹಿಡಿಯಲು ನನ್ನ ಉಮೇದುವಾರಿಕೆ ರಿಜೆಕ್ಟ್‌ ಮಾಡುತ್ತಾರೆ ಎಂಬ ಮಾಹಿತಿ ಬಂದಿದೆ. ಹೀಗಾಗಿ ಬಿಜೆಪಿಯ ಷಡ್ಯಂತ್ರ ಅರಿತು ಮುನ್ನೆಚ್ಚರಿಕೆಗಾಗಿ ಸುರೇಶ್ ನಾಮಪತ್ರ ಸಲ್ಲಿಸಿದ್ದರು” ಎಂದು ಡಿ ಕೆ ಶಿವಕುಮಾರ್‌ ಶುಕ್ರವಾರ ಬೆಳಿಗ್ಗೆ ಸುದ್ದಿಗೋಷ್ಠಿ ಕರೆದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ಯಡಿಯೂರಪ್ಪ ಅವರ ಸರ್ಕಾರ ಬೇರೆಯವರ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಸಿಬಿಐಗೆ ನೀಡದೇ, ಕೇವಲ ನನ್ನ ಪ್ರಕರಣ ಮಾತ್ರ ನೀಡಿದ್ದಾರೆ. ಅಡ್ವಕೇಟ್ ಜನರಲ್ ಇದು ಸಿಬಿಐಗೆ ನೀಡುವ ಪ್ರಕರಣವಲ್ಲ ಎಂದು ಹೇಳಿದ್ದರೂ ದೆಹಲಿಯವರ ಒತ್ತಡದಿಂದ ಈ ಪ್ರಕರಣವನ್ನು ಸಿಬಿಐಗೆ ನೀಡಿದ್ದಾರೆ. ರಾಜಕೀಯದಿಂದಲೇ ನನ್ನನ್ನು ತೆಗೆದುಹಾಕಲು ಷಡ್ಯಂತ್ರ ರೂಪಿಸಿದ್ದಾರೆ” ಎಂದು ಆರೋಪಿಸಿದ್ದರು.

“ನನ್ನ ಅಧ್ಯಕ್ಷತೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆದಿದೆ. ರಾಜಕೀಯದಿಂದ ನನ್ನನ್ನು ದೂರಮಾಡಲು ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಬಂದಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಡಿ ಕೆ ಸುರೇಶ್ ಅವರು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ” ಎಂದರು.

“ಈಗಿನ ತಂತ್ರಜ್ಞಾನದಲ್ಲಿ ಯಾರು ಮಾಹಿತಿ ನೋಡುತ್ತಾರೆ, ಯಾರು ಡೌನ್ಲೋಡ್ ಮಾಡಿಕೊಳ್ಳುತ್ತಾರೆ ಎಂಬ ಮಾಹಿತಿ ಸಿಗುತ್ತದೆ. ಬಿಜೆಪಿ ಸೆಲ್ ನನ್ನ ದಾಖಲೆ ಪರಿಶೀಲಿಸುತ್ತಿದೆ. ಅಧಿಕಾರಿಗಳ ದುರ್ಬಳಕೆಗೆ ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ನಾವು ಜಾಗರೂಕವಾಗಿ ಹೆಜ್ಜೆ ಇಟ್ಟಿದ್ದೇವೆ. ನನಗೆ ಅರ್ಜಿ ಹೇಗೆ ತುಂಬಬೇಕು ಗೊತ್ತಿದೆ. ನನ್ನ ದಾಖಲೆಗಳು ಸರಿಯಾಗಿವೆ. ನನ್ನ ಅರ್ಜಿ ಸ್ವೀಕೃತವಾಗಲಿದೆ ಎಂಬ ನಂಬಿಕೆ ಇದೆ. ಆದರೆ ಬಿಜೆಪಿಯವರ ಷಡ್ಯಂತ್ರ ಏನು ಬೇಕಾದರೂ ಆಗಬಹುದು. ಕಳೆದ ಬಾರಿಯೇ ನನ್ನ ಅರ್ಜಿ ತಿರಸ್ಕರಿಸಲು ಮುಂದಾಗಿದ್ದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕೊನೆ ದಿನ 1,934, ಒಟ್ಟು 5,102 ನಾಮಪತ್ರ ಸಲ್ಲಿಕೆ

“ನನಗೆ ಬೇಕಾದಷ್ಟು ಅಧಿಕಾರಿಗಳು, ಮಾಧ್ಯಮ ಸ್ನೇಹಿತರು ಇದ್ದು, ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನನ್ನ ಮೇಕೆದಾಟು, ಭಾರತ ಜೋಡೋ ಯಾತ್ರೆ, ಸ್ವಾತಂತ್ರ್ಯ ನಡಿಗೆ ತಡೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಅವರಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಭ್ರಷ್ಟಾಚಾರ, ಕೋವಿಡ್ ಭ್ರಷ್ಟಾಚಾರಗಳ ಬಗ್ಗೆ ನನ್ನ ಅವಧಿಯಲ್ಲಿ ದೊಡ್ಡ ಹೋರಾಟ ನಡೆದು ಮಂತ್ರಿ ರಾಜೀನಾಮೆ ನೀಡಬೇಕಾಯಿತು. ಈತನಿಂದ ಈ ಪರಿಸ್ಥಿತಿ ಬಂದಿದೆ ಎಂದು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅವರು ಏನೇ ಕುತಂತ್ರ ಪ್ರಯೋಗ ಮಾಡಿದರೂ ನಾನು ನ್ಯಾಯಾಲಯ ಹಾಗೂ ಜನರ ತೀರ್ಪು ನಂಬಿದ್ದೇನೆ” ಎಂದರು.

“ರಾಹುಲ್ ಗಾಂಧಿ ಅವರನ್ನು ಒಂದು ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಿ, ಕೇವಲ 22 ದಿನಗಳಲ್ಲಿ ವಿಚಾರಣೆ ಮಾಡಿ ಅವರಿಗೆ ಇದುವರೆಗೂ ಯಾರಿಗೂ ನೀಡದ ಶಿಕ್ಷೆ ಪ್ರಕಟಿಸಿ, 24 ಗಂಟೆಗಳಲ್ಲಿ ಅವರ ಸಂಸತ್ ಸದಸ್ಯತ್ವ ರದ್ದು ಮಾಡಿ, ಅವರ ಮನೆ ಖಾಲಿ ಮಾಡಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಯಾವುದೇ ಅಕ್ರಮ ಮಾಡದಿದ್ದರೂ ಯಂಗ್ ಇಂಡಿಯಾ ಸೇರಿದಂತೆ ಅನೇಕ ಪ್ರಕರಣ ದಾಖಲಿಸಿ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆ. ಅವರನ್ನೇ ಬಿಟ್ಟಿಲ್ಲ ನನ್ನನ್ನು ಬಿಡುತ್ತಾರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...