ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

Date:

  • ಶಿರಸಿಯಲ್ಲೂ ರೋಡ್‌ ಶೋ ನಡೆಸಲಿರುವ ಶಿವರಾಜ್‌ ಕುಮಾರ್‌
  • ಸಿದ್ದರಾಮಯ್ಯ ನಮ್ಮ ಮೈಸೂರು ಪ್ರಾಂತ್ಯದವರು ಎಂದ ಹಿರಿಯ ನಟ

ಚಿತ್ರ ನಿರ್ಮಾಪಕಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ ಬೆನ್ನಲ್ಲೇ ಅವರ ಪತಿ, ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌, ಕೈ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

ಏಪ್ರಿಲ್‌ 30ರಂದು ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ತಮ್ಮ ಸಂಬಂಧಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಪರ ರೋಡ್‌ ಶೋ ನಡೆಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಶಿವಣ್ಣ, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿ ಕಾಂಗ್ರೆಸ್‌ನ ಅನೇಕ ಅಭ್ಯರ್ಥಿಗಳ ಪರ ಮತ ಯಾಚಿಸುವುದಾಗಿ ತಿಳಿಸಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿವಣ್ಣ, “ಮಧು ಬಂಗಾರಪ್ಪ ನನ್ನ ಸಂಬಂಧಿ ಎನ್ನುವುದಕ್ಕಿಂತ ಆತ ನನ್ನ ಸ್ನೇಹಿತ, ಹೀಗಾಗಿ ಆತನ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದೇನೆ. ಸಾಗರ ಕೂಡ ಪಕ್ಕದ ಕ್ಷೇತ್ರವಾದ ಕಾರಣಕ್ಕೆ ಅಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರ ಪರ ರೋಡ್‌ ಶೋ ನಡೆಸುತ್ತಿದ್ದೇನೆ. ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಭಿಮಣ್ಣ ನಾಯಕ್‌ ನಮ್ಮ ಕುಟುಂಬ ಆತ್ಮೀಯರು ಹೀಗಾಗಿ ಅವರ ಪರವೂ ಪ್ರಚಾರ ಮಾಡಲಿದ್ದೇನೆ. ಜಗದೀಶ್‌ ಶೆಟ್ಟರ್‌ ಅವರು ಕೂಡ ನಮ್ಮ ಕುಟುಂಬದ ಆಪ್ತರು, ಅವರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ಅಶೋಕ್‌ ಖೇಣಿ ನನಗೆ ಒಳ್ಳೆಯ ಸ್ನೇಹಿತರು, ಅವರ ಪರ ಬೀದರ್‌ ಕ್ಷೇತ್ರದಲ್ಲಿ ರೋಡ್ ಶೋ ಮಾಡಲಿದ್ದೇನೆ. ಅಪ್ಪಾಜಿಯವರ ಕಾಲದಿಂದಲೂ ಸಿದ್ದರಾಮಯ್ಯನವರು ನಮ್ಮ ಕುಟುಂಬಕ್ಕೆ ಬೇಕಾದವರು, ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಮೈಸೂರು ಪ್ರಾಂತ್ಯದವರು, ಹೀಗಾಗಿ ಮೇ 4ರಂದು ಅವರ ಪರ ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದೇನೆ. ಜನರ ಸ್ಪಂದನೆ ಕೂಡ ಚೆನ್ನಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಟ ಸುದೀಪ್‌ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಶಿವಣ್ಣ, “ಪ್ರತಿಯೊಬ್ಬರಿಗೂ ಅವರದ್ದೇ ಆದ ಸಿದ್ಧಾಂತಗಳಿರುತ್ತವೆ. ನಾನು ಯಾರನ್ನು ವಿರೋಧಿಸಿ ಮಾತನಾಡುವವನಲ್ಲ. ನನಗೆ ಬೇಕಾದವರನ್ನು ಬೆಂಬಲಿಸುತ್ತಿದ್ದೇನೆ ಅಷ್ಟೇ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಪ್ರಚಾರ | ಸುದೀಪ್‌ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಏಟು

ಈ ಬಾರಿಯ ಚುನಾವಣೆಯಲ್ಲಿ ನಟ ಸುದೀಪ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಹಲವು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದು, ಮತ್ತೊಬ್ಬ ಸ್ಟಾರ್‌ ನಟ ದರ್ಶನ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಶಿವಣ್ಣ ಕೂಡ ಚುನಾವಣಾ ಕಣಕ್ಕೆ ಧುಮುಕಿದ್ದು, ಕೈ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...