‌ಗಾಂಧಿ ಪ್ರತಿಮೆ ಎದುರು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದ ಅಡಗೂರು ಎಚ್‌ ವಿಶ್ವನಾಥ್; ಬಿಜೆಪಿ ವಿರುದ್ಧ ಕಿಡಿ

Date:

  • ಮೈಸೂರು ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ
  • ಬಿಜೆಪಿ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ ಧರಣಿ ನಡೆಸಿದ ಹಳ್ಳಿಹಕ್ಕಿ

ಭಾರತೀಯ ಜನತಾ ಪಕ್ಷ ಸೇರಿ ಸೇರಿ ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ ಬಿಜೆಪಿ ನಾಮನಿರ್ದೇಶಿತ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪಶ್ಚಾತ್ತಾಪ ಸತ್ಯಾಗ್ರಹ ಮಾಡಿದರು.

ಮೈಸೂರು ನ್ಯಾಯಾಲಯದೆದುರಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ಹಮ್ಮಿಕೊಂಡಿದ್ದ ಅಡಗೂರು ಎಚ್ ವಿಶ್ವನಾಥ್ ಬಿಜೆಪಿಯ ಕೆಟ್ಟ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪಶ್ಚಾತ್ತಾಪದ ದಿನ ಎಂಬ ಹೆಸರಿನಲ್ಲಿ ಬಿಜೆಪಿ ಸರ್ಕಾರವನ್ನು ಅಣಕಿಸಿದ ಎಚ್ ವಿಶ್ವನಾಥ್, ಬಿಜೆಪಿ ಸರ್ಕಾರ ಮಾಡುತ್ತಿರುವ ಬೆಲೆ ಏರಿಕೆ, ಅಲ್ಪಸಂಖ್ಯಾತರ ಮೀಸಲಾತಿ ಹಾಗೂ ಭ್ರಷ್ಟಾಚಾರದ ಬಗ್ಗೆ ಪ್ರತಿಭಟಿಸಿದರು. ಧರಣಿಯಲ್ಲಿ ವಿಶ್ವನಾಥ್ ಬೆಂಬಲಿಗರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಮಾಜದಲ್ಲಿ ಬದಲಾವಣೆ ಉಂಟಾಗುತ್ತದೆ ಎಂದು ನಂಬಿದ್ದೆ.

ಹೀಗಾಗಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣಕರ್ತನಾದೆ. ಆದರೆ ಬಿಜೆಪಿ ಸರ್ಕಾರ ಸಾರ್ವಜನಿಕವಾಗಿ ಸಾಲು ಸಾಲು ಅನ್ಯಾಯಗಳನ್ನು ಮಾಡುತ್ತಿರುವುದು ಬೇಸರದ ಸಂಗತಿ. ಇಂತಹ ಭ್ರಷ್ಟ ಸರ್ಕಾರಕ್ಕೆ ನಾನು ಬೆಂಬಲ ನೀಡಿದೆ.

ಈ ಸರ್ಕಾರದ ಸೃಷ್ಟಿಗೆ ನಾನು ಕಾರಣನಾದೆನಲ್ಲ ಎಂಬ ವಿಚಾರಕ್ಕೆ ಪಶ್ಚಾತ್ತಾಪವಾಗಿದೆ. ಹೀಗಾಗಿ ಇಂದು ನಾನು ಪಶ್ಚಾತ್ತಾಪ ಸತ್ಯಾಗ್ರಹವನ್ನು ನ್ಯಾಯಾಲಯದ ಮುಂಭಾಗ ಹಮ್ಮಿಕೊಂಡಿದ್ದೆ ಎಂದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾತಿಗೆ ಬೆಲೆಕೊಟ್ಜು ನಾನು ಜೆಡಿಎಸ್ ಸೇರ್ಪಡೆಯಾದೆ. ಶಾಸಕನಾಗಿದ್ದ ನನ್ನನ್ನು ಆ ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಜೆಡಿಎಸ್-ಕಾಂಗ್ರೆಸ್ಸಿನ ಮೈತ್ರಿಯಲ್ಲಿ ರಾಕ್ಷಸಿ ಸರ್ಕಾರ ನಡೆಯುತ್ತಿದೆ ಎಂದೆನಿಸಿ ನಾನು ಮತ್ತೊಂದು ಅನಿವಾರ್ಯ ಹೆಜ್ಜೆ ಇಟ್ಟೆ.

ನನಗೆ ಮಂತ್ರಿಗಿರಿ ಸಿಗದ ಕಾರಣದಿಂದ ನಾನು ಜೆಡಿಎಸ್ ತೊರೆಯಲಿಲ್ಲ. ಮಂತ್ರಿಗಿರಿಗೆ ನಾನೆಂದಿಗೂ ಆಸೆಪಟ್ಟವನಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ಧುದರಿಂದ, ರಾಜ್ಯದಲ್ಲೂ ಅದೇ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಒಳಿತಾಗಲಿದೆಯೆಂದು ಸಮಾನ ಮನಸ್ಕರೊಡನೆ ಸೇರಿ ಚರ್ಚಸಿ ಬಿಜೆಪಿ ಸರ್ಕಾರ ತರಲು ಕೈ ಜೋಡಿಸಿದೆವು ಎಂದು ಅಡಗೂರು ವಿಶ್ವನಾಥ್ ಹೇಳಿದರು.

ಮುಂದೆ ಅಧಿಕಾರಕ್ಕೆ ಬಂದ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಆಗುವ ಕನಸು ಕಂಡಿದ್ದೆವು. ಆದರೆ ಅದೆಲ್ಲವೂ ನುಚ್ಚುನೂರಾದವು. ಇದೊಂದು ಐತಿಹಾಸಿಕ ಪರಮ ಭ್ರಷ್ಟ ಸರ್ಕಾರವೆಂಬ ಟೀಕೆಗೆ ಗುರಿಯಾಯಿತು. ಇದರಿಂದ ನನಗೆ ಪಶ್ಚಾತ್ತಾಪವಾಗಿದೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರಲು ಕೈ ಜೋಡಿಸಿದ್ದಕ್ಕೆ ಅತೀವ ಬೇಸರವಿದೆ, ನೋವಿದೆ. ನನ್ನ ಅಂತರಾತ್ಮವೇ ನನ್ನನ್ನು ತಿವಿಯುತ್ತಿದೆ.

ಈ ಪಾಪದ ಹೊರೆಯನ್ನು ಇಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ನನ್ನ ಮುಂದಿತ್ತು. ಈ ಕಾರಣದಿಂದ ನಾನು ಈ ಸತ್ಯಾಗ್ರಹ ನಡೆಸಿದೆ ಎಂದು ವಿಶ್ವನಾಥ್ ತಿಳಿಸಿದರು.

ಈ ಸುದ್ದಿ ಓದಿದೀರಾ? :ಬಿಎಸ್‌ವೈ ತವರಲ್ಲಿ ಬಿಜೆಪಿಗೆ ಬಂಡಾಯದ ಬಿಸಿ : ಈಶ್ವರಪ್ಪ…

ಈ ಬಾರಿಯ ಚುನಾವಣೆಯಲ್ಲಿ ನನಗೆ ತಾಯಿಯಂತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇನೆ. ನಾನು ರಾಜ್ಯಪಾಲರಿಂದ ನಾಮಕರಣಗೊಂಡ ಸದಸ್ಯನಾದುದರಿಂದ ಸ್ವತಂತ್ರನಾಗಿದ್ದೇನೆ. ನಾನು ಯಾವುದೇ ಪಕ್ಷದ ಸಿದ್ಧಾಂತಕ್ಕೂ ಸೇರಿದವನಲ್ಲ. ನಾನೀಗ ಸಂಪೂರ್ಣ ಸ್ವತಂತ್ರ. ನಾನೀಗ ಸ್ವಚ್ಛಂದವಾಗಿ ಹಾರಾಡುವ ಅಪ್ಪಟ ಹಳ್ಳಿಹಕ್ಕಿ ಎಂದು ವಿಶ್ವನಾಥ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...