ಗದಗ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಯತ್ನಾಳ್‌ ಭಾವಚಿತ್ರ ಸುಟ್ಟು ದಲಿತ ಮುಖಂಡರ ಆಕ್ರೋಶ

Date:

  • ಅಂಬೇಡ್ಕರ್‌ ಪ್ರತಿಮೆಗೆ ಮಾಲೆ ಹಾಕಲು ನಿರಾಕರಣೆ ಆರೋಪ
  • ಗಾಂಧಿ ವೃತ್ತದಲ್ಲಿ ಪ್ರತಿಭಟನೆ; ಯತ್ನಳ್‌ ಭಾವಚಿತ್ರಕ್ಕೆ ಬೆಂಕಿ

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಈಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಹನುಮಸಾಗರದದಲ್ಲಿ ಚುನಾವಣಾ ಪ್ರಚಾರದ ವೇಳೆ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನಿಂದಿಸಿ ಅಗೌವರವ ತೋರಿದ್ದಾರೆ ಎಂದು ಆರೋಪಿಸಿ ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಭಾನುವಾರ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ, ಅಲ್ಪ ಸಂಖ್ಯಾತರ ಸಂಘಟನೆಗಳು, ಹಿಂದುಳಿದ ಸಂಘಟನೆಗಳು ಸಾತ್‌ ನೀಡಿ, ಯತ್ನಾಳ್ ಹೇಳಿಕೆಯನ್ನು ಖಂಡಿಸಿದರು. ಇದೇ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ‌ ಭಾವಚಿತ್ರ ಸುಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ದಲಿತ ಮುಖಂಡ ಶರೀಫ್ ಬಿಳಿಯಲಿ ಮಾತನಾಡಿ, “ಚುನಾವಣಾ ಪ್ರಚಾರ ಸಭೆಯಲ್ಲಿ ಯತ್ನಾಳ್, ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನಿರಾಕರಿಸಿ “ಅವಂಗ ಯಾಕ್ ಹಾರ ಹಾಕಬೇಕು?” ಎಂದು ಸಂವಿಧಾನ ಶಿಲ್ಪಿಯ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಗದಗ ಪ್ರತಿಭಟನೆ 01

“ಸಂವಿಧಾನ ಒಪ್ಪದ, ಒಡೆದಾಳುವ ನೀತಿಯನ್ನು ಅನುಸರಿಸಿಕೊಂಡು ಬಂದಿರುವ ಬಿಜೆಪಿಯ ಕೋಮುವಾದಿ ಯತ್ನಾಳ್, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಏಕವಚನದಿಂದ ನಿಂದಿಸಿ, ಅವಮಾನಿಸಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಇಂತಹ ಅವಿವೇಕಿತನದ ಹೇಳಿಕೆ ನೀಡಿರುವ ಯತ್ನಾಳನಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬಾರದು. ಕೂಡಲೇ ಯತ್ನಾಳ್ ಅವರನ್ನು ಬಂಧಿಸಬೇಕು” ಎಂದು ಚುನಾವಣಾ ಅಧಿಕಾರಿಗಳನ್ನು ಆಗ್ರಹಿಸಿದರು.

“ಬಿಜೆಪಿ ಮತ್ತು ಅದರ ಆರ್.ಎಸ್.ಎಸ್ ಸ್ವಾತಂತ್ರ್ಯ ಪೂರ್ವದಲ್ಲಿಯೂ ಅಂಬೇಡ್ಕರ್ ಅವರು ಸಂವಿಧಾನ ಬರೆಯುವ ಸಂದರ್ಭದಲ್ಲಿಯೂ ವಿರೋಧ ಮಾಡಿದವರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರದಲ್ಲಿ ಇವತ್ತಿಗೂ ಸಂವಿಧಾನ ವಿರೋಧಿಸುತ್ತಲೇ ಬಂದವರು. ಅದಕ್ಕೆ ಉದಾಹರಣೆಯಾಗಿ ಅನಂತಕುಮಾರ ಹೆಗಡೆ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅಂತಹವರು” ಎಂದು ದೂರಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ವಿರೋದಿಸುತ್ತಲೇ ಬಂದಿದ್ದಾರೆ. ಈ ಸಲ ಜನರು ಎಚ್ಚರವಾಗಿದ್ದಾರೆ, ಪ್ರಜ್ಞೆವಂತರಾಗಿದ್ದಾರೆ. ಎಲ್ಲರೂ ಈ ಚುನಾವಣೆಯಲ್ಲಿ ಮನುವಾದಿ ಸರ್ಕಾರವನ್ನು ತೋಲಗಿಸಿ, ದೇಶವನ್ನು ಕಾಪಾಡುವಂತ, ಸಂವಿಧಾನ ಕಾಪಾಡುವಂತವರಿಗೆ ಮತ ಚಲಾಯಿಸೋಣ ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಬಾಲರಾಜ್ ಅರ್ಬರ್ ಮಾತನಾಡಿ, “ಯತ್ನಾಳ್ ಇಂದು ಶಾಸಕ ಸ್ಥಾನಕ್ಕೆ ಬರಲು ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಕಾರಣ, ಅಂತಹ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ ಯತ್ನಾಳ್ ಅವರಿಗೆ ಶಿಕ್ಷೆ ಆಗಲೇಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ರಮೇಶ ಬಾಳಮ್ಮನವರ, ಶಿವಾನಂದ, ಆನಂದ ಸಿಂಗಾಡಿ, ಪರಶು ಕಾಳೆ, ಯೂಸೂಪ್, ವಿಜಯ್ ಕಲಮನಿ, ಪೂಜಾ ಸಿಂಧೆ ಹಾಗೂ ದಲಿತ ಸಂಘರ್ಷ ಸಮಿತಿ ಸಂಘಟಕರು, ಅಲ್ಪಸಂಖ್ಯಾತ ಸಂಘಟಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...