ಮೈತ್ರಿ ಸರ್ಕಾರ ಉರುಳಿಸಲು ನೆರವಾಗಿದ್ದ ಸಂತೋಷ್‌ಗೆ ಜೆಡಿಎಸ್‌ ಟಿಕೆಟ್?

Date:

  • ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆ
  • ಐವರು ಜೆಡಿಎಸ್‌ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ ಎಚ್‌ ಡಿ ಕುಮಾರಸ್ವಾಮಿ

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಅರಸೀಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸೀಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.

“ಜೆಡಿಎಸ್‌ ನಾಯಕ ಹೆಚ್ ಡಿ ರೇವಣ್ಣ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮುನ್ನ ಎನ್ ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸೀಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ ಆರ್‌ ಸಂತೋಷ್‌ ಅವರನ್ನು ಜೆಡಿಎಸ್‌ಗೆ ಸೇರಿಸಿಕೊಳ್ಳಲಾಗಿದೆ” ಎಂದು ಜೆಡಿಎಸ್‌ ಮೂಲಗಳಿಂದ ತಿಳಿದುಬಂದಿದೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕುರುಬ ಸಮುದಾಯದ ಬಾಣಾವರ ಅಶೋಕ್‌ಗೆ ಟಿಕೆಟ್ ಘೋಷಿಸಲಾಗಿತ್ತು. ಇದೀಗ ಘೋಷಿತ ಅಭ್ಯರ್ಥಿಯಾಗಿರುವ ಅಶೋಕ್​ ಅವರ ಮನವೊಲಿಸಿ ಎನ್‌ ಆರ್‌ ಸಂತೋಷ್​ಗೆ ಟಿಕೆಟ್​ ನೀಡುವ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದು, ಚಿತ್ರದುರ್ಗಕ್ಕೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ರಘು ಆಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕಟಿಸಿದರು.

ಎನ್ ಆರ್ ಸಂತೋಷ್, ದೇವರಾಜ್ ಪಾಟೀಲ್  ಸೇರ್ಪಡೆ

ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ...

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...

ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ...