ಪಕ್ಷೇತರರಾಗಿ ಅಖಂಡ ಕಣಕ್ಕೆ: ಇಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಶ್ರೀನಿವಾಸಮೂರ್ತಿ

Date:

  • ನಿನ್ನೆ ರಾಜೀನಾಮೆ ನೀಡಿ ಇಂದು ನಾಮಪತ್ರ ಸಲ್ಲಿಸಿ ಅಖಂಡ
  • ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡ ಪುಲಿಕೇಶಿ ನಗರದ ಹಾಲಿ ಶಾಸಕ

ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.

ತಮಗೆ ಟಿಕೆಟ್ ನೀಡುವಲ್ಲಿ ಇನ್ನೂ ವಿಳಂಬ ನೀತಿ ಅನುಸರಿಸುತ್ತಿರುವ ಪಕ್ಷದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಏಪ್ರಿಲ್ 17ರಂದು ತಮ್ಮ ಬೆಂಬಲಿಗರ ಸಭೆ ನಡೆಸಿದ ಶ್ರೀನಿವಾಸಮೂರ್ತಿ ಅವರ ಸಲಹೆ ಮೇರೆಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುನ್ನ (ಏಪ್ರಿಲ್ 16ರಂದು) ಶಿರಸಿಗೆ ತೆರಳಿದ್ದ ಅವರು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ರಾಜೀನಾಮೆ ಪತ್ರ ನೀಡಿದ್ದರು. ಇಂದು ಪ್ರೇಜರ್ ಟೌನ್ನಲ್ಲಿರುವ ಸರ್ಕಾರಿ ಕಾಲೇಜಿಗೆ ಕುಟುಂಬ ಸಮೇತರಾಗಿ ಬಂದ ಶ್ರೀನಿವಾಸಮೂರ್ತಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೂರು ಪಟ್ಟಿ ಬಿಡುಗಡೆ ಮಾಡಿದ್ದರೂ ನನಗೆ ಟಿಕೆಟ್ ನೀಡಿಲ್ಲ. ಇದರಿಂದ ಸಾಕಷ್ಟು ನೊಂದಿದ್ದೇನೆ, ಬೇಸತ್ತಿದ್ದೇನೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇಲ್ಲಿಯವರೆಗೂ ಪಕ್ಷ ನನಗೆ ಟಿಕೆಟ್ ನೀಡಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ನನ್ನ ಕ್ಷೇತ್ರದ ಜನರು ದಿನವೂ ನನ್ನನ್ನು ಯಾಕೆ ಟಿಕೆಟ್ ಸಿಕ್ಕಿಲ್ಲ ಎಂದು ಕೇಳುತ್ತಾರೆ.

ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಎಲ್ಲರೂ ಒಗ್ಗಟ್ಟಾಗಿದ್ದೇವೆ ಹೀಗಿದ್ದರೂ ಇನ್ನೂ ಟಿಕೆಟ್ ಏಕಿಲ್ಲ ಎಂದು ಅಖಂಡ ಪಕ್ಷ ಪ್ರಮುಖರನ್ನು ಪ್ರಶ್ನಿಸಿದರು.

ಹಿರಿಯ ನಾಯಕರು ಕೆಲವರು ನನಗೆ ಟಿಕೆಟ್ ಕೊಡಬಾರದು ಎಂದು ರಾಜಕೀಯ ಮಾಡಿದ್ರು. ನನಗೆ ಅನ್ಯಾಯವಾಗಿದೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

ಇದೇ ವೇಳೆ ಪಕ್ಷಾಂತರದ ಸಾಧ್ಯತೆಯ ಬಗೆಗಿನ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಖಂಡ ಬೇರೆ ಪಕ್ಷದವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? :ಕಾರವಾರ | ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ : ಗಂಗಾಧರ ಭಟ್ ಕಣಕ್ಕೆ

ಅಖಂಡ

ಅಖಂಡಗೆ ಟಿಕೆಟ್ ಯಾಕಿಲ್ಲ?

ಮೂಲಗಳ ಮಾಹಿತಿ ಪ್ರಕಾರ ಅಖಂಡ ಅವರಿಗೆ ಕ್ಷೇತ್ರದ ಮೇಲೆ ಹಿಂದಿದ್ದ ಹಿಡಿತ ಇಲ್ಲ ಎನ್ನುವುದು ಟಿಕೆಟ್ ತಪ್ಪಲು ಕಾರಣ ಎನ್ನುವುದು ಹಲವರ ಮಾತು.

ಇದರ ಜೊತೆಗೆ 2020ರ ಆಗಸ್ಟ್ 11 ಅಖಂಡ ಶ್ರೀನಿವಾಸಮೂರ್ತಿ ಸೋದರ ಸಂಬಂಧಿ ನವೀನ್ ಫೇಸ್ಬುಕ್‌ನಲ್ಲಿ ಹಾಕಿದ್ದ ಪೋಸ್ಟ್ ಒಂದು ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಠಾಣೆಗಳಿಗೆ ಬೆಂಕಿ ಹಚ್ಚಿ ಗಲೆಭೆ ಸೃಷ್ಟಿಸಲು ಕಾರಣವಾಗಿತ್ತು.

ಇದಾದ ಕೆಲ ದಿನಗಳ ಬಳಿಕ ಪೋಸ್ಟ್ ಘಟನೆಯಿಂದ ನೊಂದಿದ್ದ ಗುಂಪೊಂದು ಕಾವಲ್ ಭೈರಸಂದ್ರದಲ್ಲಿದ್ದ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟು ಭಾರಿ ಹಾನಿ ಮಾಡಿದ್ದರು.

ಈ ಘಟನೆಗಳ ಬಗ್ಗೆ ಚರ್ಚೆ ನಡೆಸಿದ್ದ ಕಾಂಗ್ರೆಸ್ ಪ್ರಮುಖರು ಪಕ್ಷದ ಇಮೇಜ್ ಮತ್ತು ಎದುರಾಳಿಗಳಿಗೆ ಈ ಘಟನೆಯನ್ನು ದಾಳವಾಗಿಸಿಕೊಳ್ಳುವ ಅವಕಾಶ ತಪ್ಪಿಸಲು, ಪಕ್ಷದ ಮುಜುಗರಕ್ಕೆ ಅವಕಾಶ ಮಾಡಿಕೊಡದಿರಲು ಟಿಕೆಟ್ ನಿರಾಕರಿಸಿದ್ದರೆನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...