ಚುನಾವಣೆ 2023 | ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸೂಚನೆ

Date:

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲೆಗೆ ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗ ನಿಯೋಜಿಸಿದೆ. ಅವರೆಲ್ಲರೂ ಜಿಲ್ಲೆಯಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಹಲವು ಸಮಿತಿಗಳ ಜೊತೆ ಸಭೆ ನಡೆಸಿದ್ದು, ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸುವಂತೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಹಾಸನ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆದಿದೆ. “ಯಾವುದೇ ಲೋಪ ಇಲ್ಲದಂತೆ ಅಧಿಕಾರಿಗಳು ಪರಸ್ಪರ ಸಹಕಾರ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತಗಟ್ಟೆ ಹಂತದಲ್ಲಿ ಯಾವುದೇ ಸಮಸ್ಯೆಗಳು ಇಲ್ಲದಿರುವುದನ್ನು ಖಾತರಿ ಪಡಿಸಿಕೊಳ್ಳಬೇಕು” ಎಂದು ಚುನಾವಣಾ ವೀಕ್ಷಕರು ಸೂಚಿಸಿದ್ದಾರೆ.

“ಮತಯಂತ್ರಗಳ ಸಾಗಾಟಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ತಂಡಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕಾಗಿದೆ. ಎಲ್ಲ ತಂಡಗಳಿಗೆ ಸೂಕ್ತ ಗುಣಾತ್ಮಕ ತರಬೇತಿ ನೀಡಿ, ಅಗತ್ಯ ಸೌಲಭ್ಯ ಒದಗಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹೆಚ್ಚಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕರು, ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳು ತಮ್ಮ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಿ ದೂರು, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ವ್ಯಾಪಕ ಪ್ರಚಾರ ನೀಡಿ, ಏನಾದರೂ ದೂರುಗಳಿದ್ದರೆ ಅವುಗಳನ್ನು ಸಲ್ಲಿಸುವಂತೆ ಜಾಗೃತಿ ಮೂಡಿಸಿ” ಎಂದು ವೀಕ್ಷಕರು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಸಭೆಯಲ್ಲಿ ಚುನಾವಣಾ ವೀಕ್ಷಕರುಗಳಾದ ಸಂಜೀವ್ ಕುಮಾರ್, ಅಶೋಕ್ ಕುಮಾರ್, ಮನೀತ್ ಗೋಯಲ್, ಬಾಲಾಜಿ ದಿಗಂಬ‌ ಮಂಜುಲೆ, ಪೊಲೀಸ್ ವೀಕ್ಷಕ ಬೀಮಲ್ ಗುಪ್ತ, ಚುನಾವಣಾ ವೆಚ್ಚ ವೀಕ್ಷಕರು ಐಆರ್‌ಎಸ್ ಡಾ.ನಿಖಿಲ್ ಕುಮಾರ್ ಸಿಂಗ್,  ಐಆರ್‌ಎಸ್ ಡಾ. ಕಾರ್ತಿಕೇಯನ್ ಪಾಂಡ್ಯ, ಐಆರ್‌ಎಸ್ ಮದನ್ ಮೋಹನ್ ಮೀನಾ, ಐಆರ್‌ಎಸ್ ಎಂ.ವಿ ಸಿಂಗ್, ಜಿಲ್ಲಾ ನೋಡಲ್‌ ಅಧಿಕಾರಿಯಾದ ಆದಾಯ ತೆರಿಗೆ ಇಲಾಖೆಯ ಎಡಿಐಟಿ ಚರುಮಾಮಿಲ ವಿನಯ್ ಕೆ.ಚೌದರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...