ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿ ಸೋಮಶೇಖರ್, ಆಸಿಫ್ ಸೇಠ್

Date:

  • ಅಬ್ದುಲ್ ಅಜೀಜ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಡಿಕೆಶಿ
  • ಮಳವಳ್ಳಿಯ ಪ್ರಭಾವಿ ನಾಯಕ ಬಿ ಸೋಮಶೇಖರ್

ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿದ್ದು, ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಬಿ ಸೋಮಶೇಖರ್, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಆಸಿಫ್ ಸೇಠ್, ಅಬ್ದುಲ್ ಅಜೀಜ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವು ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, “ಇಂದು ಬಿಜೆಪಿ ಹಾಗೂ ದಳವನ್ನು ತೊರೆದು ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿ, ಮೈಸೂರು ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು.

“ಸೋಮಶೇಖರ್ ಅವರು ಸಿದ್ದರಾಮಯ್ಯ ಅವರ ಜತೆ ಶಾಸಕರಾಗಿ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರದೇ ಆದ ಸಾಧನೆ ಮಾಡಿದ್ದಾರೆ” ಎಂದು ಹೇಳಿದರು.

“ಬಿಜೆಪಿ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಮ್ಮಂತಹವರಿಗೆ ಬಿಜೆಪಿಯಲ್ಲಿ ಸ್ಥಾನವಿಲ್ಲ ಎಂದು ಯಾವುದೇ ಷರತ್ತು ಇಲ್ಲದೆ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ತಿಳಿಸಿದರು. 

ಈ ಸುದ್ದಿ ಓದಿದ್ದೀರಾ? ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು

“ಬಿಜೆಪಿ ಸರ್ಕಾರ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಆಸಿಫ್ ಸೇಠ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಬಹಳ ತೊಂದರೆ ಆಗಿದೆ. ಇಷ್ಟೆಲ್ಲ ಆದ ನಂತರ ನಾನು ಯಾವ ಮುಖ ಇಟ್ಟುಕೊಂಡು ಬಿಜೆಪಿಯಲ್ಲಿ ಮುಂದುವರಿಯಲಿ ಎಂದು ನಮ್ಮ ಜತೆ ಬಂದಿದ್ದಾರೆ” ಎಂದು ಹೇಳಿದರು.

“ಬಸವೇಗೌಡರು ಮೂಡಾ ಅಧ್ಯಕ್ಷರಾಗಿದ್ದರು, ಅವರು ಅನೇಕ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರೂ ಕೂಡ ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ಹೇಳಿದರು.

ಅಬ್ದುಲ್ ಅಜೀಜ್ ಅವರು 2018ರಲ್ಲಿ ದಳದ ಅಭ್ಯರ್ಥಿಯಾಗಿದ್ದರು. ಅವರು ಕೂಡ ಇಂದು ಬೇಷರತ್ತಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ.  ಹೀಗೆ ಅನೇಕ ನಾಯಕರು ಪಕ್ಷ ಸೇರುತ್ತಿದ್ದು, ನಾವು ಎಲ್ಲಾ ನಾಯಕರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ನರೇಂದ್ರಸ್ವಾಮಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...