ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Date:

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್‌ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್‌ಗಳನ್ನು ವಾಪಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್‌ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಶೇ. 40 ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್. ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.

ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...