ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

Date:

  • ಪೊಲೀಸ್‌ ಬ್ಯಾರಿಕೇಡ್‌ಗಳ ಮೇಲೆ ಸುದೀಪ್ ಚಿತ್ರ
  • ನೀತಿ ಸಂಹಿತೆ ಮುಗಿಯುವವರೆ ನಿಗಾ ವಹಿಸುವಂತೆ ಮನವಿ

ಬಿಜೆಪಿ ಪರ ಪ್ರಚಾರಕ್ಕೆ ಮುಂದಾಗಿರುವ ನಟ ಕಿಚ್ಚ ಸುದೀಪ್ ಅವರ ಜಾಹೀರಾತು ಮತ್ತು ಸಿನಿಮಾಗಳಿಗೆ ತಡೆ ಹಿಡಿಯುವಂತೆ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಸುದೀಪ್ ಅವರನ್ನು ಸ್ಟಾರ್‌ ಪ್ರಚಾರಕರನ್ನಾಗಿ ಮಾಡಿಕೊಂಡಿತ್ತು. ಅದಾದ ಬಳಿಕ ಅನೇಕರು ಆಯೋಗಕ್ಕೆ ಪತ್ರ ಬರೆದು, ಸುದೀಪ್ ನಟನೆಯ ಜಾಹೀರಾತು ಮತ್ತು ಸಿನಿಮಾಗಳಿಗೆ ತಡೆ ನೀಡುವಂತೆ ಒತ್ತಾಯಿಸಿದ್ದರು. ಇದೀಗ, ಸುರ್ಜೇವಾಲ ಕೂಡ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬಿಜೆಪಿ ಪರ ಪ್ರಚಾರಕ್ಕೆ ಸುದೀಪ್‌ ಮುಂದಾಗಿದ್ದಾರೆ. ಈ ನಡುವೆ ಸರ್ಕಾರಿ ಜಾಗಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಅವರ ನಟನೆಯ ಜಾಹೀರಾತುಗಳು ರಾರಾಜಿಸುತ್ತಿವೆ. ಇದನ್ನು ಉಲ್ಲೇಖಿಸಿ, ಸುರ್ಜೇವಾಲ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀತಿ ಸಂಹಿತೆ ಮುಗಿಯುವವರೆಗೆ ಸುದೀಪ್ ಅವರ ಸಿನಿಮಾಗಳ ಬಿಡುಗಡೆಯನ್ನು ಮುಂದೂಡುವಂತೆ ಅಧಿಕಾರಿಗಳಿಗೆ ಸುರ್ಜೇವಾಲ ಒತ್ತಾಯಿಸಿದ್ದಾರೆ. “ಪೊಲೀಸ್ ಬ್ಯಾರಿಕೇಡ್‌ ಸೇರಿದಂತೆ ಸರ್ಕಾರದ ಒಡೆತನದ ಕೆಲವು ಸಲಕರಣೆಗಳ ಮೇಲೆ ಬಿಜೆಪಿಯ ಸ್ಟಾರ್ ಪ್ರಚಾರಕ ಸುದೀಪ್ ನಟನೆಯ ಜಾಹೀರಾತುಗಳ ಚಿತ್ರಗಳು ಕಾಣಿಸುತ್ತಿವೆ. ಇದು ಪ್ರಚಾರದ ವಿಷಯಕ್ಕೆ ಸಂಬಂಧಿಸಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ನಮ್ಮ ಕಾರ್ಯಕರ್ತರು ಹಂಚಿಕೊಂಡ ವರದಿಗಳು ಮತ್ತು ಛಾಯಾಚಿತ್ರಗಳ ಪ್ರಕಾರ, ಏಪ್ರಿಲ್ 14ನೇ ತಾರೀಕಿನಂದು ಬೆಂಗಳೂರಿನ ಮೇಖ್ರಿ ವೃತ್ತದಲ್ಲಿರುವ ಪೊಲೀಸ್ ಬ್ಯಾರಿಕೇಡ್‌ನ ಮೇಲೆ ಸುದೀಪ್ ಭಾವಚಿತ್ರ ಇರುವ ಜಾಹೀರಾತಿದೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮ ದೇಣಿಗೆ ಹಣದಲ್ಲೇ ಠೇವಣಿ ಇಡಿ : ಕಾರ್ಯಕರ್ತರ ಒತ್ತಾಯ, ಭಾವುಕರಾದ ಪರಮೇಶ್ವರ್‌

“ಸುದೀಪ್ ಅವರ ಸೆಲೆಬ್ರಿಟಿ ಸ್ಥಾನಮಾನದ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ. ಇದೊಂದು ಸಮಸ್ಯೆಯಲ್ಲದಿದ್ದರೂ, ಸುದೀಪ್ ಸ್ಪಷ್ಟವಾಗಿ ಬಿಜೆಪಿಯ ಮುಖವಾಗಿದ್ದಾರೆ. ಆದ್ದರಿಂದ ಅವರ ಚಲನಚಿತ್ರಗಳ ಬಿಡುಗಡೆ ಮುಂದೂಡಬೇಕು. ಜಾಹೀರಾತು ತಡೆ ಹಿಡಿಯಬೇಕು” ಎಂದು ಮನವಿ ಮಾಡಿಕೊಂಡಿದ್ದಾರೆ.

“ನೀತಿ ಸಂಹಿತೆಯ ನಿಯಮಗಳ ಅನ್ವಯ, ಸುದೀಪ್ ಅವರ ವಾಣಿಜ್ಯ ಪ್ರಚಾರದ ಲಾಭವನ್ನು ಚುನಾವಣೆ ಮುಗಿಯುವವರೆಗೆ ಮಾತ್ರ ಬಳಸದಂತೆ ತಡೆಯಬೇಕು. ಇಲ್ಲವಾದಲ್ಲಿ ಇದು ಬಿಜೆಪಿಗೆ ಲಾಭ ನೀಡುತ್ತದೆ” ಎಂದಿದ್ದಾರೆ..

“ಕರ್ನಾಟಕ ಸರ್ಕಾರಕ್ಕೆ ಸೇರಿದ ಯಾವುದೇ ಉಪಕರಣಗಳು, ತಡೆಗೋಡೆ, ಹೋರ್ಡಿಂಗ್‌ನಲ್ಲಿ ಸುದೀಪ್ ಅವರ ಪ್ರಚಾರದ ವಿಷಯ, ಜಾಹೀರಾತು ಇತ್ಯಾದಿಗಳನ್ನು ತೆಗೆದುಹಾಕಲು ರಾಜ್ಯ ಅಧಿಕಾರಿಗಳಿಗೆ ತುರ್ತು ಮತ್ತು ತಕ್ಷಣದ ನಿರ್ದೇಶನಗಳನ್ನು ರವಾನಿಸಬೇಕು” ಎಂದು ಸುರ್ಜೇವಾಲ ಮನವಿ ಮಾಡಿದ್ದಾರೆ.ಸುರ್ಜೇವಾಕ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...