ಕೋಗಿಲು ಪ್ರಕರಣ | ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ : ಬಿ ಟಿ ಲಲಿತಾ ನಾಯಕ್ ಆಗ್ರಹ

Date:

“ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ. ಭಾಷೆ ಮತ್ತು ಧರ್ಮ ನೋಡಬೇಡಿ. ಸರ್ಕಾರದವರು ಮಾನವೀಯತೆನ್ನು ಅನುಸರಿಸಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಕೂಡಲೇ ಪುನರ್‌ ವಸತಿ ಕಲ್ಪಿಸಿ” ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್‌ ಆಗ್ರಹಿಸಿದರು.

ಕೋಗಿಲು ಲೇಔಟ್‌ನ ಮನೆ ನೆಲಸಮ ಪ್ರಕ್ರಿಯೆಯಿಂದ ನಿರಾಶ್ರಿತ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ವಸತಿ ಸಚಿವ ಜಮೀರ್‌ ಅಹಮದ್‌ ಖಾನ್ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡರು ಒಪ್ಪಿಕೊಂಡಿರುವ ಮಾತಿನಂತೆ ಕೂಡಲೇ ಪುನರ್‌ ವಸತಿ ವ್ಯವಸ್ಥೆ ಮಾಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘದ ವೀರಸಂಗಯ್ಯ ಮಾತನಾಡಿ “ಎ ಟಿ ರಾಮಸ್ವಾಮಿ ವರದಿ ಪ್ರಕಾರ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಬಲಾಢ್ಯರು ಕಬಳಿಸಿದ್ದಾರೆ. ಈಗಲೂ ಸಹ ಸಾವಿರಾರು ಎಕರೆ ಸರ್ಕಾರಿ ಭೂಮಿ ಬಲಾಢ್ಯರ ಬಳಿ ಇದೆ. ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಆದರೆ ಕೋಗಿಲು ಸಂತ್ರಸ್ತರ ವಿರುದ್ಧ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವುದು ಅಕ್ಷಮ್ಯ. ವಿರೋಧ ಪಕ್ಷಗಳು ನಿರ್ಗತಿಕರ ಜೊತೆ ನಿಲ್ಲುವುದನ್ನು ಬಿಟ್ಟು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿದೆ” ಬೇಸರ ವ್ಯಕ್ತಪಡಿಸಿದರು.

ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಮಾತನಾಡಿ “ಹೆಂಗಸರು ಮತ್ತು ಮಕ್ಕಳ ಜೊತೆಗೆ ಎಲ್ಲರೂ ಚಳಿಯಲ್ಲಿಯೇ ಇದ್ದಾರೆ. ಗಂಜಿ ಕೇಂದ್ರದ ವ್ಯವಸ್ಥೆಯನ್ನು ಸಂತ್ರಸ್ತರಿರುವ ಜಾಗ ಬಿಟ್ಟು ಬೇರೆಡೆಗೆ ತೆರೆಯಲಾಗಿದೆ. ವಿರೋಧ ಪಕ್ಷವಾದ ಬಿಜೆಪಿಯ ಸತ್ಯಶೋಧನೆ ತಂಡ ಬಹುತೇಕರನ್ನು ಭೇಟಿ ಮಾಡಿಲ್ಲ. ಆ ಜಾಗದಲ್ಲಿ ಮುಸ್ಲಿಂ ಸಮುದಾಯದವರಿದ್ದಾರೆ ಎಂಬ ಕಾರಣಕ್ಕೆ ಬಾಂಗ್ಲಾದೇಶದವರು ಎಂದು ಸು‍ಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದೇ ಬಿಜೆಪಿಯವರು ಕಳೆದ ಐದು ವರ್ಷದ ಹಿಂದೆ ಕಾರ್ಪೋರೇಟ್ ಚುನಾವಣೆಯ ಸಂದರ್ಭದಲ್ಲಿ ಈ ಜನರ ಮತ ಪಡೆದುಕೊಂಡು ಗೆದ್ದಿದ್ದಾರೆ. ಮತ ಕೇಳುವಾಗ ಇಲ್ಲದ ಪ್ರಶ್ನೆ, ಈಗ ಯಾಕೆ ಕೇಳುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

ದುಡಿಯುವ ಜನರ ವೇದಿಕೆಯ ನಂದಿನಿ ಮಾತನಾಡಿ “ಜಿಬಿಎ ಮನೆಗಳನ್ನು ನೆಲಸಮಗೊಳಿಸಿದ ದಿನದಿಂದ (ಡಿ.20) ಇಂದಿಗೆ 23 ದಿನಗಳಾಗಿವೆ. ಇಲ್ಲಿಯತನಕ ಯಾವುದೇ ವ್ಯವಸ್ಥೆಗಳಿಲ್ಲದೇ, ಭೂಮಿ ತಾಯಿಯೇ ತೊಟ್ಟಿಲು, ಆಕಾಶವೇ ಸೂರಾಗಿದೆ. ಸರ್ಕಾರ ಪುನರ್ವಸತಿ ವ್ಯವಸ್ಥೆ ಮಾಡುವ ಭರವಸೆ ನೀಡಿದೆ. ಆದರೆ ಈಗ ಭಾಷೆ, ಜಾತಿ, ಧರ್ಮ, ಭೌಗೋಳಿಕ ಹಿನ್ನಲೆಯ ಪ್ರಶ್ನೆ ಕೇಳುತ್ತಿದೆ. ಆದರೆ ಭಾರತ ಸಂವಿಧಾನದ 19 ನೇ ವಿಧಿಯು ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯವಾಗಿ ಬದುಕುವ ಹಕ್ಕನ್ನು ಕಲ್ಪಿಸುತ್ತದೆ. ನಗರವನ್ನು ಕಟ್ಟಲು ಬಂದ ಇಂತಹ ವಲಸಿಗರಿಗೆ ಸಂವಿಧಾನದ 21ನೇ ವಿಧಿಯ ಪ್ರಕಾರ ಘನತೆಯಿಂದ ಬದುಕಲು ಸರ್ಕಾರವು ಸೂರು ನೀಡಬೇಕು” ಎಂದು ಒತ್ತಾಯ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯೇ ದೇಶದ್ರೋಹವಾಗುವ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನ ಹಾದಿಯಲ್ಲಿರುತ್ತದೆ: ಎ ನಾರಾಯಣ

"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ...

ಸಾಹಿತ್ಯ-ಸಿನಿಮಾ ಎರಡಕ್ಕೂ ಅನುಭವ ಲೋಕ ಬಹಳ ಮುಖ್ಯ : ಗಿರೀಶ್ ಕಾಸರವಳ್ಳಿ

ಸಿನಿಮಾ ಎಂಬುದೆ ಒಂದು ಅನುಭವ ಲೋಕ. ಅದರೊಳಗೆ ತಮ್ಮ ಅನುಭವವನ್ನು ಬಳಸಿ,...

ಬೆಂಗಳೂರು | ಫ್ರೀಡಂ ಪಾರ್ಕ್ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿ ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್)...