ಗ್ರೇಟರ್‌ ಬೆಂಗಳೂರು ಪ್ರಾಧಿಕಾರ | 5 ಪಾಲಿಕೆಗಳಲ್ಲಿ 368 ವಾರ್ಡ್; ನಗರಾಭಿವೃದ್ದಿ ಇಲಾಖೆ ಅಧಿಸೂಚನೆ

Date:

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಣೆ ಮಾಡಿ, ಗಡಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್‌ಗಳಿವೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024 (ಜಿಬಿಜಿಎ) ಅಡಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರವನ್ನು (ಜಿಬಿಎ) ಸೆಪ್ಟೆಂಬರ್‌ 2ರಂದು ರಚಿಸಲಾಗಿತ್ತು. ಜಿಬಿಎ ವ್ಯಾಪ್ತಿಯಲ್ಲಿ ಹಿಂದಿನ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡ್‌ಗಳನ್ನು ಹಂಚಿಕೆ ಮಾಡಿ ಐದು ನಗರ ಪಾಲಿಕೆಗಳನ್ನು ರಚಿಸಿ, ಗಡಿ ನಿಗದಿ ಮಾಡಿ ಅಂದೇ ಅಧಿಸೂಚನೆ ಹೊರಡಿಸಲಾಗಿತ್ತು.

ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಿಸಲು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್ ನೇತೃತ್ವದಲ್ಲಿ‘ವಾರ್ಡ್‌ಗಳ ಪುನರ್‌ ವಿಂಗಡಣಾ ಆಯೋಗ’ವನ್ನು ರಚಿಸಿ, ಸೆಪ್ಟೆಂಬರ್‌ 23ರಂದು ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಆಯೋಗ ಒಂದು ವಾರ ತಡವಾಗಿ, ಸೆ. 30ರಂದು ವರದಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3)ರ ಅನ್ವಯ ವಾರ್ಡ್‌ಗಳ ಪುನರ್‌ ವಿಂಗಡಣೆ ಮಾಡಿ, ಸಲ್ಲಿಸಲಾಗಿದ್ದ ವಾರ್ಡ್‌ ಮರು ವಿಂಗಡಣೆಯ ವರದಿಯನ್ನು ಸರ್ಕಾರ ಒಪ್ಪಿದೆ. ಜಿಬಿಜಿಎ ಕಾಯ್ದೆಯ 29ರಲ್ಲಿ ಪ್ರದತ್ತವಾದ ಅಧಿಕಾರದನ್ವಯ 2011ರ ಜನಗಣತಿಯ ಆಧಾರದಲ್ಲಿ, ಗ್ರೇಟರ್‌ ಬೆಂಗಳೂರು ಪ್ರದೇಶದ ಐದು ನಗರ ಪಾಲಿಕೆಗಳಲ್ಲಿ ವಾರ್ಡ್‌ವಾರು ಕ್ಷೇತ್ರ ಪುನರ್‌ ವಿಂಗಡಣೆ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.

ಯಾವುದೇ ಆಕ್ಷೇಪ/ ಸಲಹೆಗಳಿದ್ದರೆ ಸಾರ್ವಜನಿಕರು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಸೂಕ್ತ ಕಾರಣ–ವಿವರಣೆಗಳೊಂದಿಗೆ ಲಿಖಿತ ರೂಪದಲ್ಲಿ ‘ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ, ವಿಕಾಸ ಸೌಧ, ಬಿ.ಆರ್‌. ಅಂಬೇಡ್ಕರ್‌ ವೀದಿ, ಬೆಂಗಳೂರು– 560001’ ಇವರಿಗೆ ಅಕ್ಟೋಬರ್‌ 15ರ ಸಂಜೆ 5ರೊಳಗೆ ಸಲ್ಲಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಆಕ್ಷೇಪಣೆ/ ಸಲಹೆಗಳನ್ನು ಪರಿಶೀಲಿಸಿ, ನಗರ ಪಾಲಿಕೆಗಳ ವಾರ್ಡ್‌ವಾರು ಕ್ಷೇತ್ರ ಪುನರ್‌ ವಿಂಗಡಣೆಯನ್ನು ಅಂತಿಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯೇ ದೇಶದ್ರೋಹವಾಗುವ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನ ಹಾದಿಯಲ್ಲಿರುತ್ತದೆ: ಎ ನಾರಾಯಣ

"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ...

ಸಾಹಿತ್ಯ-ಸಿನಿಮಾ ಎರಡಕ್ಕೂ ಅನುಭವ ಲೋಕ ಬಹಳ ಮುಖ್ಯ : ಗಿರೀಶ್ ಕಾಸರವಳ್ಳಿ

ಸಿನಿಮಾ ಎಂಬುದೆ ಒಂದು ಅನುಭವ ಲೋಕ. ಅದರೊಳಗೆ ತಮ್ಮ ಅನುಭವವನ್ನು ಬಳಸಿ,...