ಬೈಕ್‌ ಟ್ಯಾಕ್ಸಿ ಚಾಲಕರಿಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ನಿರಾಕರಣೆ; ಆಕ್ರೋಶ

Date:

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಬೈಕ್ ಟ್ಯಾಕ್ಸಿ ವೆಲ್​ಫೇರ್​ ಅಸೋಸಿಯೇಷನ್ ಸದಸ್ಯರಿಗೆ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದಾರೆ.

ಹೈಕೋರ್ಟ್‌ನಿಂದ ಬೈಕ್‌ ಟ್ಯಾಕ್ಸಿ ನಿಷೇಧಿಸಿದ ನಂತರ ಬೈಕ್‌ ಟ್ಯಾಕ್ಸಿ ಸಂಘಟನೆಗಳಲ್ಲಿ ಒಂದಾದ ಬೈಕ್ ಟ್ಯಾಕ್ಸಿ ವೆಲ್​ಫೇರ್​ ಅಸೋಸಿಯೇಷನ್ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಮ್ಮ ಅಹವಾಲನ್ನು ತಿಳಿಸಿಸಲು ಉದ್ದೇಶಿಸಿತ್ತು. ಹಲವು ಬಾರಿ ಪ್ರತಿಭಟನೆ ನಡೆಸಲು ಸಂಘಟನೆಯ ಸದಸ್ಯರು ಪೊಲೀಸರಿಗೆ ಮನವಿ ಮಾಡಿದರೂ ಪೊಲೀಸರು ಬೈಕ್‌ ಟ್ಯಾಕ್ಸಿ ಸಂಘಟನೆಗೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಂಗಟನೆಯ ಸದಸ್ಯರು ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಎದುರು ಶಾಂತಿ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಂಘಟನೆಯ ಮುಖಂಡರಾದ ಕೊಟ್ಟಪ್ಪ ಹಾಗೂ ತಿಮ್ಮರೆಡ್ಡಿ ಅವರು, ” ಹೈಕೋರ್ಟ್ ಬೈಕ್‌ ಟ್ಯಾಕ್ಸಿ ನಿಷೇಧಿಸಿದ ನಂತರ ಬೈಕ್‌ ಚಾಲನೆಯನ್ನು ಜೀವನಾಧಾರ ಮಾಡಿಕೊಂಡಿದ್ದ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ತಮ್ಮ ಅಹವಾಲು ತಿಳಿಸಲು ಉದ್ದೇಶಿಸಿದ್ದೆವು. ಹಲವು ಬಾರಿ ಉಪ್ಪಾರಪೇಟೆ ಪೊಲೀಸರಿಗೆ ಮನವಿಯನ್ನು ಕೂಡ ಮಾಡಿದ್ದೆವು. ಆದರೆ ಜಾಗ ಖಾಲಿ ಇಲ್ಲ ಎಂಬ ನೆಪ ಹೇಳಿ ನಮಗೆ ಧರಣಿ ಕೈಗೊಳ್ಳಲು ಅವಕಾಶ ನಿರಾಕರಿಸಲಾಗುತ್ತಿದೆ. ಬೈಕ್‌ ಟ್ಯಾಕ್ಸಿ ನಂಬಿಕೊಂಡಿದ್ದ ನೂರಾರು ಕುಟುಂಬಗಳು ಬೀದಿಗೆ ಬಂದಿದ್ದರೂ ರಾಜ್ಯ ಸರ್ಕಾರ ನಮ್ಮ ಬಗ್ಗೆ ಗಮನ ಹರಿಸುತ್ತಿಲ್ಲ. ಬೈಕ್‌ ಟ್ಯಾಕ್ಸಿ ನಿಷೇಧದಿಂದಾಗಿ ನಮ್ಮ ಹಲವು ಚಾಲಕರು ಬಾಡಿಗೆ ಪಾವತಿಸಲು, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ದಿನಸಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 15 ದಿನದಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದೇ ರಾಜ್ಯದಲ್ಲಿ ಹುಟ್ಟಿ ಜೀವನ ನಡೆಸುತ್ತಿದ್ದೇನೆ. ದಯವಿಟ್ಟು ಬೈಕ್‌ ಟ್ಯಾಕ್ಸಿ ನಿಷೇಧ ತೆರವುಗೊಳಿಸಲು ಕ್ರಮ ವಹಿಸಬೇಕು” ಎಂದು ನೋವನ್ನು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಜೂನ್ 16 ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲು ಸರ್ಕಾರ ಹೊಸ ನಿಯಮಗಳನ್ನು ರೂಪಿಸದ ಕಾರಣ ನ್ಯಾಯಾಲಯವು ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಐಫೋನ್‌ ಕದ್ದು ರೀಲ್ಸ್ ಮಾಡಲು ಅಪ್ರಾಪ್ತರಿಂದ ಬೆಂಗಳೂರು ಯುವಕನ ಕೊಲೆ

ಬೈಕ್‌ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2 ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿದ್ದರು.

ಬೆಂಗಳೂರಿನಂತಹ ನಗರದಲ್ಲಿ, ಬೈಕ್ ಟ್ಯಾಕ್ಸಿಗಳು ಕಡಿಮೆ ವೆಚ್ಚದ, ತ್ವರಿತ ಮತ್ತು ಸುಲಭವಾಗಿ ಲಭ್ಯವಿರುವ ಸಾರಿಗೆ ಸೌಲಭ್ಯವಾಗಿತ್ತು. ಈ ಸೇವೆಯ ಮೂಲಕ ಜೀವನ ಹಾಗೂ ಕುಟುಂಬದ ನಿರ್ವಹಣೆ ಮಾಡಿಕೊಂಡಿದ್ದ ಚಾಲಕರಿಗೆ ಈಗ ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ. ಬೆಂಗಳೂರು ನಗರ ಒಂದರಲ್ಲೆ ಸುಮಾರು 1 ಲಕ್ಷಕ್ಕೂ ಅಧಿಕ ಗಿಗ್ ಕಾರ್ಮಿಕರು ಪೂರ್ಣಕಾಲಿಕ ಹಾಗೂ ಅರೆಕಾಲಿಕ ಬೈಕ್ ಟ್ಯಾಕ್ಸಿ ಸೇವೆಯ ಮೇಲೆ ಅವಲಂಬಿತರಾಗಿದ್ದರು. ಈ ಕಾರ್ಮಿಕರು ದಿನಕ್ಕೆ ಸರಾಸರಿ 10-12 ಗಂಟೆ ಕೆಲಸ ಮಾಡಿ, ತಮ್ಮ ಕುಟುಂಬ ನಿರ್ವಹಣೆ ಮಾಡಿಕೊಳ್ಳುತ್ತಿದ್ದರು. ಈಗ ಈ ಸೇವೆ ಸ್ಥಗಿತಗೊಂಡಿರುವುದರಿಂದ, ಅವರಿಗೆ ಪರ್ಯಾಯ ಉದ್ಯೋಗಗಳನ್ನು ಹುಡುಕುವುದು ತುರ್ತು ಅಗತ್ಯವಾಗಿದೆ. ಆದರೆ, ಕಡಿಮೆ ಶಿಕ್ಷಣ, ವೃತ್ತಿಪರ ತರಬೇತಿಯ ಕೊರತೆ ಮತ್ತು ಆರ್ಥಿಕ ಸಂಕಷ್ಟದಿಂದಾಗಿ ಇಂತಹ ಅವಕಾಶಗಳು ಸುಲಭವಾಗಿ ದೊರೆಯುವುದಿಲ್ಲ.

ಗಿಗ್ ಕಾರ್ಮಿಕರ ಮೇಲಿನ ಪರಿಣಾಮವು ಕೇವಲ ಆರ್ಥಿಕವಾಗಿ ಸೀಮಿತವಾಗಿಲ್ಲ. ಈ ಕಾರ್ಮಿಕರಲ್ಲಿ ಬಹುತೇಕರು ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ವಲಸೆ ಬಂದವರಾಗಿದ್ದು, ಕುಟುಂಬದ ಏಕೈಕ ಆದಾಯದ ಮೂಲವಾಗಿದ್ದರು. ಬೈಕ್ ಟ್ಯಾಕ್ಸಿ ಚಾಲಕರಿಗೆ ಈ ಉದ್ಯೋಗವು ತಮ್ಮ ಸಮಯವನ್ನು ಸ್ವತಂತ್ರವಾಗಿ ನಿರ್ವಹಿಸಿಕೊಳ್ಳಲು, ಕಡಿಮೆ ಹೂಡಿಕೆಯೊಂದಿಗೆ (ಕೇವಲ ಒಂದು ಬೈಕ್ ಮತ್ತು ಸ್ಮಾರ್ಟ್‌ಫೋನ್) ಆದಾಯ ಗಳಿಸಲು ಅವಕಾಶ ನೀಡಿತ್ತು. ಈಗ ಈ ಅವಕಾಶ ಕಸಿದುಕೊಳ್ಳಲಾಗಿದ್ದು, ಅವರ ಕುಟುಂಬದ ಜೀವನಮಟ್ಟದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರ ಜೊತೆಗೆ, ಈ ಕಾರ್ಮಿಕರಲ್ಲಿ ಕೆಲವರು ತಮ್ಮ ಬೈಕ್ ಖರೀದಿಗೆ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಂಡಿದ್ದು, ಆದಾಯವಿಲ್ಲದೆ ಸಾಲದ ಕಂತುಗಳನ್ನು ಪಾವತಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇವೆಲ್ಲವೂ ಚಾಲಕರಿಗೆ ಮಾನಸಿಕ ಒತ್ತಡ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.

ಬೈಕ್ ಟ್ಯಾಕ್ಸಿಗಳ ಮೇಲಿನ ಅವಲಂಬನೆಯು ಕೇವಲ ಚಾಲಕರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಈ ಸೇವೆಯನ್ನು ಪ್ರಯಾಣಿಕರೂ ವ್ಯಾಪಕವಾಗಿ ಬಳಸುತ್ತಿದ್ದರು. ಬೆಂಗಳೂರಿನಂತಹ ದಟ್ಟ ಜನಸಂಖ್ಯೆಯ ನಗರದಲ್ಲಿ, ಟ್ರಾಫಿಕ್ ಜಾಮ್‌ನಿಂದ ಕೂಡಿದ ರಸ್ತೆಗಳಲ್ಲಿ ಬೈಕ್ ಟ್ಯಾಕ್ಸಿಗಳು ತ್ವರಿತ ಮತ್ತು ಕೈಗೆಟುಕುವ ಸಾರಿಗೆ ಆಯ್ಕೆಯಾಗಿದ್ದವು. ಈ ಸೇವೆಯನ್ನು ವಿದ್ಯಾರ್ಥಿಗಳು, ಕಚೇರಿ ಉದ್ಯೋಗಿಗಳು, ಸಣ್ಣ ವ್ಯಾಪಾರಿಗಳು ಮತ್ತು ದಿನಗೂಲಿ ಕಾರ್ಮಿಕರು ಸೇರಿದಂತೆ ವಿವಿಧ ವರ್ಗದ ಜನರು ಬಳಸುತ್ತಿದ್ದರು. ವಿದ್ಯಾರ್ಥಿಗಳಿಗೆ, ತಮ್ಮ ಕಾಲೇಜುಗಳಿಗೆ ತೆರಳಲು ಕಡಿಮೆ ವೆಚ್ಚದ ಆಯ್ಕೆಯಾಗಿತ್ತು. ಉದ್ಯೋಗಿಗಳಿಗೆ, ಕಚೇರಿಗೆ ತಡವಾಗದಂತೆ ತಲುಪಲು ಇದು ಸಹಾಯಕವಾಗಿತ್ತು. ಈಗ ಈ ಸೇವೆ ಇಲ್ಲದಿರುವುದರಿಂದ, ಪ್ರಯಾಣಿಕರು ಆಟೋರಿಕ್ಷಾ, ಕ್ಯಾಬ್‌ಗಳು ಅಥವಾ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಬೇಕಾಗಿದೆ, ಇವು ಹೆಚ್ಚು ವೆಚ್ಚದಾಯಕವಾಗಿರುವುದರ ಜೊತೆಗೆ ಸಮಯಕ್ಕೆ ಸರಿಯಾಗಿ ತಲುಪಲು ಆಗದಿರುವುದರಿಂದ ತೊಂದರೆ ಅನುಭವಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...