ನಾವು ಸಂಘಟಿತರಾದರೆ ಮಾತ್ರ ಮೀಸಲಾತಿ ಪಡೆಯಬಹುದು: ಸಿ ಎಸ್ ದ್ವಾರಕಾನಾಥ್

Date:

“ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳು ಜನಸಂಖ್ಯೆಯಲ್ಲಿ ದೊಡ್ಡಮಟ್ಟದಲ್ಲಿ ಇಲ್ಲದಿರುವುದರಿಂದಲೇ ರಾಜಕಾರಣಿಗಳು ನಮ್ಮ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ನಾವು ಸಂಘಟಿತರಾಗಿ ನಮ್ಮ ಮೀಸಲಾತಿಯನ್ನು ಕೇಳಬೇಕು” ಎಂದು ಹಿರಿಯ ನ್ಯಾಯಾವಾದಿ ಸಿ.ಎಸ್.ದ್ವಾರಕಾನಾಥ್ ಅವರು ಹೇಳಿದರು.

ಬೆಂಗಳೂರು ನಗರದ ಗಾಂಧಿಭವನದಲ್ಲಿ ಮಂಗಳವಾರ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಮತ್ತು ಪಾರ್ಧಿ ಹರಣಾ ಶಿಕಾರಿ ಸಂಘ ಸೇರಿ, ಆದಿವಾಸಿ ಒಳ ಮೀಸಲಾತಿ ಕುರಿತು ಚಿಂತನ ಮಂಥನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನು ಓದಿದ್ದೀರಾ?: ಅಸ್ಪೃಶ್ಯ ಅಲೆಮಾರಿ ಒಳಮೀಸಲಾತಿ ಹೋರಾಟ; ಮಳೆಗೆ ಟೆಂಟ್ ಧ್ವಂಸ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿಯೂ 48 ಬುಡಕಟ್ಟು ಸಮುದಾಯಗಳಿಗೆ ಮೀಸಲಾತಿ ದೊರೆತಿಲ್ಲ. ಇವ್ಯಾವುದು ಇಲ್ಲದೆ ಈ ಸಮುದಾಯಗಳು ಹೇಗೆ ಬದುಕಬೇಕು. ರಾಜಕೀಯ ಮೀಸಲಾತಿಯನ್ನು ಪಡೆಯಬೇಕಾದರೆ ನಾವು ಸಂಘಟಿತರಾಗಬೇಕು.” ಎಂದು ಹೇಳಿದರು.

Screenshot2025 11 11at7.03.27P

ಈ ಸಭೆಯಲ್ಲಿ ಪ್ರಮುಖ ನಿರ್ಣಯವನ್ನು ಕೈಗೊಳ್ಳುವ ಕುರಿತು ದ್ವಾರಕಾನಾಥ್ ಅವರು ಐದು ನಿರ್ಣಯಗಳನ್ನು ಮಂಡಿಸಿದರು.

  1. ಕರ್ನಾಟಕ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಿದಂತೆ, ಪರಿಶಿಷ್ಟ ಪಂಗಡ, ಬುಡಕಟ್ಟುಗಳಿಗೂ ಒಳಮೀಸಲಾತಿ ಕಲ್ಪಿಸಲು, ಪರಿಶಿಷ್ಟ ಪಂಗಡ ಒಳ ಮೀಸಲಾತಿ ಆಯೋಗ ರಚನೆ ಮಾಡುವ ಕುರಿತು
  2. ಕರ್ನಾಟಕ ರಾಜ್ಯದಲ್ಲಿನ 50 ಬುಡಕಟ್ಟುಗಳಲ್ಲಿ 48 ಪರಿಶಿಷ್ಟ ಪಂಗಡಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಗಳ ಕ್ರಮ ಸಂಖ್ಯೆ 37/38 ರ ಪ್ರತ್ಯೇಕ ಅಭಿವೃದ್ಧಿ ನಿಗಮ ಇರುವುದರಿಂದ ಅವುಗಳನ್ನು ಹೊರತುಪಡಿಸಿ, ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮವನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಕರ್ನಾಟಕ ಪರಿಶಿಷ್ಟ ಪಂಗಡಗಳ ನಿಗಮದಿಂದ ಪ್ರತ್ಯೇಕಿಸಿ ಸ್ಥಾಪಿಸುವ ಕುರಿತು
  3. ಆದಿವಾಸಿ ನಾಯಕ ಬಿರ್ಸಾಮುಂಡಾ ದಿನಾಚರಣೆಯನ್ನು ಪ್ರತಿವರ್ಷ ಸರ್ಕಾರದ ಮೂಲಕ ಆಚರಿಸುವ ಕುರಿತು
  4. ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಸಂರಕ್ಷಿತ ಅರಣ್ಯಧಾಮವಾಗಿ ಘೋಷಿಸುವ ಪ್ರಸ್ತಾವನೆ ಕುರಿತು
  5. ಪಶ್ಚಿಮ ಘಟ್ಟ ಪ್ರದೇಶದ ಬುಡಕಟ್ಟುಗಳ ಅರಣ್ಯ ಹಕ್ಕು ಕಾಯಿದೆಯ ಅನುಷ್ಟಾನ, ಲೈನ್ ಮನೆಗಳಲ್ಲಿ ಮತ್ತು ಅರಣ್ಯವಾಸಿ ಬುಡಕಟ್ಟುಗಳ ಕುಂದುಕೊರತೆಗಳ ಕುರಿತು

ಕೊನೆಯಲ್ಲಿ ಈ ನಿರ್ಣಯಗಳ ಕುರಿತು ಅಲೆಮಾರಿ, ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಮುಖಂಡರು ಚರ್ಚೆ ನಡೆಸಿದರು.

Screenshot2025 11 11at7.04.41P
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯೇ ದೇಶದ್ರೋಹವಾಗುವ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನ ಹಾದಿಯಲ್ಲಿರುತ್ತದೆ: ಎ ನಾರಾಯಣ

"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ...

ಸಾಹಿತ್ಯ-ಸಿನಿಮಾ ಎರಡಕ್ಕೂ ಅನುಭವ ಲೋಕ ಬಹಳ ಮುಖ್ಯ : ಗಿರೀಶ್ ಕಾಸರವಳ್ಳಿ

ಸಿನಿಮಾ ಎಂಬುದೆ ಒಂದು ಅನುಭವ ಲೋಕ. ಅದರೊಳಗೆ ತಮ್ಮ ಅನುಭವವನ್ನು ಬಳಸಿ,...

ಬೆಂಗಳೂರು | ಫ್ರೀಡಂ ಪಾರ್ಕ್ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿ ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್)...