ದೇವನಹಳ್ಳಿ ರೈತ ಹೋರಾಟ ಹಣಿಯಲು ಷಡ್ಯಂತ್ರ: ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಆರೋಪ

Date:

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ದೇವನಹಳ್ಳಿ ಭೂ ಸ್ವಾಧೀನ ಬೆಂಬಲಿಸಿ ರೈತರು ಸುದ್ದಿಗೋಷ್ಠಿ ನಡೆಸಿದ್ದನ್ನು ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, “ಇಂದು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮುಖಂಡರು ಬಹುಪಾಲು ಕಾಂಗ್ರೆಸ್‌ ಸರ್ಕಾರಕ್ಕೆ ಸೇರಿದವರಾಗಿದ್ದಾರೆ. ಅವರೆಲ್ಲ ಭೂವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳೂ ಕೂಡ ಆಗಿರುತ್ತಾರೆ” ಎಂದು ಆರೋಪಿಸಿದೆ.

“ವಾಸ್ತವದಲ್ಲಿ ‘ದೇವನಹಳ್ಳಿ ಚನ್ನರಾಯಪಟ್ಟಣ ರೈತ ಸಮಿತಿ’ ಹೆಸರಿನ ಯಾವುದೇ ಸಮಿತಿ ಇದುವರೆಗೂ ಚಾಲ್ತಿಯಲ್ಲಿ ಇಲ್ಲ. ಈಗಾಗಲೇ ಇಲ್ಲಿನ ಕೆಲ ರೈತರ ಜಮೀನುಗಳಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ಹಣ ಮಾಡಲು ಇವರೆಲ್ಲ ಹೊರಟಿದ್ದಾರೆ” ಎಂದು ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಸುಮಾರು 1,200 ದಿನಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಭೂಸ್ವಾಧೀನವನ್ನು ವಿರೋಧಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ವಿಚಾರಗಳಿಗೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿರುವುದು ಗಮನಕ್ಕೆ ಬಂದಿದೆ. ಬುಹುಪಾಲು ರೈತರು ಭೂಮಿ ಕೊಡಲು ಸಿದ್ದರಿದ್ದೇವೆ ಎಂದು ಹೇಳಿಕೊಂಡಿರುತ್ತಾರೆ. ಇದು ಸುಳ್ಳು” ಎಂದು ಸಮಿತಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ದೇವನಹಳ್ಳಿ ಭೂ ಸ್ವಾಧೀನ | ಎಕರೆಗೆ ₹3 ಕೋಟಿ ಕೊಟ್ಟರೆ ಜಮೀನು ಕೊಡಲು ಸಿದ್ಧ: ಭೂಸ್ವಾಧೀನ ಬೆಂಬಲ ಸಮಿತಿ

“ಜನಪರ ಸಂಘಟನೆಗಳ ಬೆಂಬಲದೊಂದಿಗೆ ‘ದೇವನಹಳ್ಳಿ ಚಲೋ’ ಯಶಸ್ಸಿನ ನಂತರ ದಿನಾಂಕ 04-07-2025ರಂದು ರೈತ ನಿಯೋಗದೊಂದಿಗೆ ನಡೆಸಿದ ಸಭೆಯಲ್ಲಿ ರೈತಪರವಾದ ನಿರ್ಣಯವನ್ನು ತಗೆದುಕೊಳ್ಳಲು 10 ದಿನಗಳ ಗಡುವು ಕೇಳಿರುವ ಹಿನ್ನೆಲೆಯಲ್ಲಿ ಮತ್ತು ಇಡೀ ದೇವನಹಳ್ಳಿ ರೈತರ ಗೆಲುವನ್ನು ಕಾಯುತ್ತಿರುವ ಸಂದರ್ಭದಲ್ಲಿ ಅವರೆಲ್ಲರನ್ನೂ ದಾರಿತಪ್ಪಿಸಲು ಮತ್ತು ಗೊಂದಲ ಮೂಡಿಸಲು ಮಾಡಿರಬಹುದಾದ ಕುತಂತ್ರವಾಗಿದೆ” ಎಂದು ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ.

“ಇದರ ಹಿಂದೆ ಬಂಡವಾಳ ಶಾಹಿಗಳ ಹಿತಾಸಕ್ತಿ ಕಾಯಲು ಉಸ್ತುವಾರಿ ಮಂತ್ರಿಗಳು ಮತ್ತು ಕೈಗಾರಿಕಾ ಸಚಿವರ ಕುಮ್ಮಕ್ಕು ಕೂಡ ಇರುವುದನ್ನು ಅಲ್ಲಗಳೆಯುವಂತಿಲ್ಲ. ವಾಸ್ತವದಲ್ಲಿ 75% ಗಿಂತ ಹೆಚ್ಚು ರೈತರು ಪ್ರಾಣ ಬಿಟ್ಟರೂ ಭೂಮಿ ಕೊಡುವುದಿಲ್ಲ ಎಂಬ ನಿಲುವಿನೊಂದಿಗೆ ಈಗಾಗಲೇ ಕೆಐಎಡಿಬಿಗೆ ದಾಖಲೆಗಳ ಸಮೇತ ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದಿಗೂ ಅವರೆಲ್ಲರೂ ಒಗ್ಗಟ್ಟಾಗಿಯೇಇದ್ದಾರೆ. ಈ ಹಿನ್ನಲೆಯಲ್ಲಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಇಂದು ನಡೆದ ಪತ್ರಿಕಾಗೋಷ್ಠಿ ರೈತ ವಿರೋಧಿಯಾಗಿದೆ” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ...

ಬೆಂಗಳೂರು| ಹೆಬ್ಬಗೋಡಿಯ ಎಬಿನೈಜರ್​ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ

ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ಕಳೆದ ಕೆಲ ತಿಂಗಳ‌...

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ...

ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ...