ದೊಡ್ಡಬಳ್ಳಾಪುರದ ಗ್ರಾಮದಲ್ಲಿ ದಲಿತರಿಗೆ ದೇವಾಲಯ ಪ್ರವೇಶ ನಿರಾಕರಣೆ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸುವ ಮೂಲಕ ಅಸ್ಪೃಶ್ಯತೆ ಪಾಲಿಸುತ್ತಿರುವ ಕಾನೂನುಬಾಹಿರ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದಲ್ಲಿ ಒಟ್ಟು 250 ಮನೆಗಳಿವೆ. ಆ ಪೈಕಿ 150ಕ್ಕೂ ಹೆಚ್ಚು ಮನೆಗಳು ದಲಿತ ಸಮುದಾಯಕ್ಕೆ ಸೇರಿದ್ದು, ಗ್ರಾಮದೇವತೆ ಏಳಿಗಮ್ಮ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.

‘ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ’ ಎಂದು ಹೇಳಿ ವಿಜ್ಞಾನಿಗಳು ಚಂದ್ರಲೋಕಕ್ಕೆ ಹೋಗಿ ಸಾಧನೆ ಮಾಡುತ್ತಿದ್ದರೆ, ಗ್ರಾಮಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು, ಜಾತಿ ನಿಂದನೆಗಳು ಎಗ್ಗಿಲ್ಲದಂತೆ ನಡೆಯುತ್ತಲೇ ಇದೆ. ಗೂಳ್ಯ ಗ್ರಾಮದಲ್ಲಿ ಹಬ್ಬ-ಹರಿದಿನಗಳಲ್ಲಿ ದಲಿತರನ್ನು ಅತ್ಯಂತ ಶೋಚನೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ, ದೇವಸ್ಥಾನದ ಹೊರಗಿನಿಂದಲೇ, ದೇವರನ್ನು ನೋಡಬೇಕಾದ ದುಸ್ಥಿತಿ ಇನ್ನೂ ಜೀವಂತವಾಗಿದೆ ಎಂದು ಗ್ರಾಮದ ದಲಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಳಿಗಮ್ಮ ದೇವಾಲಯದಲ್ಲಿ ಸವರ್ಣೀಯರು 100 ವರ್ಷಗಳಿಂದಲೂ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ಇದುವರೆಗೂ ದಲಿತರಿಗೆ ಪ್ರವೇಶ ನೀಡಿಲ್ಲ. ದೇವಾಲಯದಲ್ಲಿ ಪೂಜೆ ಮಾಡುತ್ತಿರುವ ಪೂಜಾರಿ ಬಚ್ಚೇಗೌಡ ಸೇರಿದಂತೆ ಸವರ್ಣೀಯ ವ್ಯಕ್ತಿಗಳು ದಲಿತರನ್ನು ‘ನೀವು ಹೊಲೆಯರು, ಮಾದಿಗರು ದೇವಾಲಯದ ಒಳಗೆ ಬಂದರೆ, ದೇವಸ್ಥಾನ ಮೈಲಿಗೆ ಆಗುತ್ತದೆ’ ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ಗ್ರಾಮದ ದಲಿತ ಮಹಿಳೆ ಶಕುಂತಲಮ್ಮ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ಪೂಜಾರಿ ಬಚ್ಚೇಗೌಡ ದಲಿತರನ್ನು ದೇವಸ್ಥಾನದ ಬಾಗಿಲಿನಲ್ಲಿಯೇ ನಿಲ್ಲಿಸುವುದರಿಂದ ನಮಗೆ ತುಂಬಾ ನೋವಾಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಬದುಕಲು ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಆದರೆ ನಮ್ಮ ಹಳ್ಳಿಯಲ್ಲಿ ಮೇಲ್ಜಾತಿಗರ ದೌರ್ಜನ್ಯಗಳಿಂದ ನಮಗೆ ಸ್ವಾತಂತ್ರ್ಯ, ದೇವಸ್ಥಾನ ಪ್ರವೇಶ ಸೇರಿದಂತೆ ಇನ್ನಿತರ ಹಕ್ಕುಗಳು ಸಿಕ್ಕಿಲ್ಲ ಮತ್ತು ನಮ್ಮ ಮೇಲಿನ ಶೋಷಣೆಗಳು ನಿಂತಿಲ್ಲ ಎಂದು ಬೇಸರಗೊಳ್ಳುತ್ತಾರೆ ಶಕುಂತಲಮ್ಮ.

‘ದೇವಸ್ಥಾನದೊಳಗೆ ಪ್ರವೇಶ ನೀಡಿ’ ಎಂದು ಮನವಿ ಮಾಡಿದರೆ, ನೀವು ದಲಿತರಿದ್ದೀರಿ, ದೇವಸ್ಥಾನದ ಒಳಗೆ ಬಂದರೆ ನಿಮಗೆ ಲಕ್ವಾ ಹೊಡೆಯುತ್ತದೆ. ನಿಮ್ಮ ಕುಟುಂಬಗಳು ಕಷ್ಟಕ್ಕೆ ಸಿಲುಕುತ್ತವೆ ಎಂದು ಹೆದರಿಸುತ್ತಾರೆ. ಸದ್ಯದಲ್ಲೇ ಊರ ಜಾತ್ರೆ ನಡೆಯಲಿದೆ. ಅದಕ್ಕೆ ಪ್ರತಿಮನೆಯಿಂದ ಕನಿಷ್ಠ 5 ಸಾವಿರ ರೂ.ಸಂಗ್ರಹ ಮಾಡುತ್ತಿದ್ದಾರೆ. ಜಾತ್ರೆ ಮಾಡಲು ದಲಿತ ಹಣ ಬೇಕು, ಆದರೆ ದಲಿತರನ್ನು ಮಾತ್ರ ದೇವಸ್ಥಾನದ ಒಳಗೆ ಬಿಡುವುದಿಲ್ಲ, ದೇವರನ್ನು ಮುಟ್ಟುವುದಕ್ಕೂ ಬಿಡುವುದಿಲ್ಲ. ಕನಿಷ್ಠ ದೇವರ ಪ್ರಸಾದವನ್ನು ದಲಿತ ಸಮುದಾಯಕ್ಕೆ ಸರಿಯಾಗಿ ನೀಡುವುದಿಲ್ಲ ಎಂದು ದಲಿತರು ಅಳಲು ತೋಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿಗೆ ಮಹಿಳೆ ಪತ್ರ

ಗೂಳ್ಯ ಗ್ರಾಮದ ಅಸ್ಪೃಶ್ಯತೆ ಆಚರಣೆಯ ಕುರಿತು ಯಾವುದೇ ಅಧಿಕಾರಿಗಳು ಗಮನಹರಿಸದೇ ಇರುವುದು ದುರಂತ. ಕೂಡಲೇ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಅಸ್ಪೃಶ್ಯತೆ ಆಚರಣೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ದಲಿತರಿಗೆ ದೇವಸ್ಥಾನದ ಪ್ರವೇಶ ನೀಡಿ ನಮಗೆ ನ್ಯಾಯ ಕೊಡಿಸಬೇಕು ಎಂದು ಶಕುಂತಲಮ್ಮ ಜಿಲ್ಲಾಧಿಕಾರಿಗೆ ಪತ್ರ ಬರೆದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ...

ಬೆಂಗಳೂರು| ಹೆಬ್ಬಗೋಡಿಯ ಎಬಿನೈಜರ್​ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ

ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ಕಳೆದ ಕೆಲ ತಿಂಗಳ‌...

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ...

ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ...