ಬಿಜೆಪಿಯ ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ತಕ್ಕ ಉತ್ತರ: ಬಿ ಕೆ ಹರಿಪ್ರಸಾದ್

Date:

  • ರಾಜ್ಯದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ
  • ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯಲ್ಲ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್‌ ಗಾಂಧಿಯವರ ವಿರುದ್ಧದ ಬಿಜೆಪಿಯ ಷಡ್ಯಂತ್ರ ಮತ್ತು ದ್ವೇಷ ರಾಜಕೀಯಕ್ಕೆ ಸರಿಯಾದ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಗೆಲುವು ಕುರಿತು ಪ್ರತಿಕ್ರಿಯಿಸಿರುವ ಅವರು, “ರಾಜ್ಯದ ಮತದಾರರು ಈ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ” ಎಂದು ಹೇಳಿದ್ದಾರೆ.

“ಕೋಲಾರದಲ್ಲಿ ಲೋಕಸಭಾ ಚುನಾವಣೆ ವೇಳೆ ರಾಹುಲ್‌ ಗಾಂಧಿ ಅವರ ಭಾಷಣವನ್ನು ಮುಂದಿಟ್ಟುಕೊಂಡು ಷಡ್ಯಂತ್ರ ರೂಪಿಸಿ, ಅವರ ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡಿದ್ದರು. ಈಗ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದರು. ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂಬ ಸಂದೇಶವನ್ನು ಈ ಫಲಿತಾಂಶದ ಮೂಲಕ ರವಾನಿಸಿದ್ದಾರೆ” ಎಂದಿದ್ದಾರೆ.

“2019ರಲ್ಲಿ ಆಪರೇಷನ್‌ ಕಮಲ ನಡೆಸಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದ್ದ ಬಿಜೆಪಿ, ಆರಂಭದ ದಿನಗಳಿಂದಲೂ ಮತೀಯ ಗೂಂಡಾಗಿರಿಗೆ ಪ್ರಚೋದನೆ ನೀಡುತ್ತಾ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿತ್ತು. ಭ್ರಷ್ಟಾಚಾರ, ದುರಾಡಳಿತ ಮೇರೆ ಮೀರಿತ್ತು. 40% ಭ್ರಷ್ಟಾಚಾರದ ಸರ್ಕಾರ ಎಂಬ ಹಣೆಪಟ್ಟಿ ಅಂಟಿಸಿಕೊಂಡಿದ್ದ ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆದಿದ್ದಾರೆ” ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಮುಂದುವರಿದಿದ್ದರೆ ರಾಜ್ಯವು ಇನ್ನೂ ಹಿನ್ನಡೆ ಅನುಭವಿಸುವ ಅಪಾಯವಿತ್ತು. ಅದನ್ನು ಅರಿತ ಮತದಾರರು ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ. ರೋಡ್‌ ಶೋ, ಪ್ರಚಾರದ ಹೆಸರಿನಲ್ಲಿ ಕರ್ನಾಟಕದ ಜನರನ್ನು ಮತ್ತೆ ವಂಚಿಸುವ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ. ರಾಜ್ಯದ ಉದ್ದಗಲಕ್ಕೆ ಜನರು ಬದಲಾವಣೆಯ ಪರ ಮತ ಚಲಾಯಿಸಿರುವುದೇ ಇದಕ್ಕೆ ಸಾಕ್ಷಿ” ಎಂದಿದ್ದಾರೆ.

“ರಾಜ್ಯದ ಜನರು ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್‌ ನೀಡಿದ ಗ್ಯಾರಂಟಿಗಳಲ್ಲಿ ನಂಬಿಕೆ ಇರಿಸಿದ್ದು, ಸ್ವಚ್ಛ ಮತ್ತು ಭ್ರಷ್ಟಾಚಾರರಹಿತ ಆಡಳಿತವನ್ನು ನಮ್ಮ ಪಕ್ಷ ನೀಡಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿರುವುದಕ್ಕಾಗಿ ರಾಜ್ಯದ ಸಮಸ್ತ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...