ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

Date:

ಮೋದಿ ಬಗ್ಗೆ ಎಲ್ಲರಿಗೂ ಅಭಿಮಾನವಿದೆ. ಆದರೆ, ಹಾಸನ ಜಿಲ್ಲೆಗೆ ಯಾರೇ ಬಂದು ಹೋದರು ನಮ್ಮ ಜೆಡಿಎಸ್ ಶಕ್ತಿ ಕುಗ್ಗಿಸಲು ಅಸಾಧ್ಯವೆಂದು ಶಾಸಕ ಕೆ.ಎಸ್ ಲಿಂಗೇಶ್ ಹೇಳಿದರು.

ವಿಧಾನಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ವತಿಯಿಂದ ಬೇಲೂರು ಪುರಸಭೆ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಈ ದೇಶಕ್ಕೆ ಎಚ್.ಡಿ ದೇವೇಗೌಡರು ಪ್ರಧಾನಿಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಲ್ಪಾವಧಿಯಲ್ಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜಿಲ್ಲೆಗೆ ಅಲ್ಲದೆ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅದರಂತೆ ಮೋದಿ ಬಗ್ಗೆ ಗೌರವವಿದೆ. ಜಿಲ್ಲೆಗೆ ಯಾರೇ ಬಂದು ಹೋಗಲಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಅವರ ಶಕ್ತಿಯನ್ನು ಕುಗ್ಗಿಸಲು ಅಸಾಧ್ಯ” ಎಂದರು.

“ಮೋದಿ ಜಿಲ್ಲೆಗೆ ಬಂದಾಕ್ಷಣ ಬೇಲೂರು ಬಿಜೆಪಿ ಪಾಲಾಗುತ್ತದೆ ಎನ್ನುವುದು ಅವರ ಭ್ರಮೆ. ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ. ಇಲ್ಲಿ ಕುಮಾರಸ್ವಾಮಿ, ರೇವಣ್ಣ ಅವರೇ ನಾಯಕರು. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಪಂಚರತ್ನ ಯಾತ್ರೆಯಿಂದ ರಾಜ್ಯದ ಜನತೆಗೆ ಅನುಕೂಲವಾಗುತ್ತದೆ. ನೀರಾವರಿ, ಶಿಕ್ಷಣ, ಕೃಷಿ, ಆರೋಗ್ಯ ಸೇರಿದಂತೆ  ಜನಸಾಮಾನ್ಯರಿಗೆ ಅವಶ್ಯಕತೆ ಇರುವ ಹಲವಾರು ಯೋಜನೆಗಳನ್ನು ಕುಮಾರಣ್ಣ ಗಮನದಲ್ಲಿಟ್ಟುಕೊಂಡಿದ್ದಾರೆ. ಅವುಗಳನ್ನು ಜಾರಿಗೆ ತರಲು ಜೆಡಿಎಸ್ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ನನ್ನನ್ನು ಮತ್ತೊಮ್ಮೆ ಶಾಸಕನಾಗಲು ನಿಮ್ಮ ಸಹಕಾರ, ಬೆಂಬಲ ಅಗತ್ಯ, ಬೇಲೂರು ತಾಲೂಕನ್ನು ಇನ್ನೂ ಅಭಿವೃದ್ಧಿಪಡಿಸಬೇಕಿದೆ. ಹಾಗಾಗಿ ಮತ್ತೊಮ್ಮೆ ಅವಕಾಶ ಕೋರುತ್ತಿದ್ದೇನೆ. ಅಲ್ಲದೆ ನಾನು ಸ್ಥಳೀಯ ಅಭ್ಯರ್ಥಿ, ಬೇಲೂರಿನವನು ನಿಮ್ಮ ಮನೆಮಗನಾದ ನನ್ನನ್ನು ಆಶೀರ್ವದಿಸಿ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

“ಜೆಡಿಎಸ್ ಅಧಿಕಾರಕ್ಕೆ ಬಂದರೆ ಇಡೀ ಜಿಲ್ಲೆ ಅಲ್ಲದೆ ರಾಜ್ಯದ ಅಭಿವೃದ್ಧಿ ಸಾಧ್ಯ. ಕುಮಾರಸ್ವಾಮಿ ಅಲ್ಪ ಅವಧಿಯಲ್ಲಿ ಆಡಳಿತ ನಡೆಸಿದರೂ ರಾಜ್ಯದ ಜನತೆ ಮೆಚ್ಚುವ ಕೆಲಸ ಮಾಡಿದ್ದಾರೆ. ನೀವು ಕಾಂಗ್ರೆಸ್ಸಿಗೆ ವೋಟ್ ಹಾಕಿದರೆ ಬಿಜೆಪಿಗೆ ಹಾಕಿದಂತೆ ಇದನ್ನು ಯಾರು ಮರೆಯಬಾರದು” ಎಂದು  ಪುರಸಭೆ ಮಾಜಿ ಅಧ್ಯಕ್ಷ ತಜ್ಜಮುಲ್ಲಪಾರ ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಟಿ.ಎ. ಶ್ರೀನಿಧಿ, ಸದಸ್ಯ ಜಗದೀಶ್, ನಗರ ಪ್ರಧಾನ ಕಾರ್ಯದರ್ಶಿ ಖಾದರ್, ಸುರೇಶ್, ಮಂಜುನಾಥ್, ಅಸ್ಲಾಂಪಾಷ, ಆರೀಫ್, ನವೀದ್, ಜಮೀಲ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...