ಬೇಲೂರು-ಸಕಲೇಶಪುರ-ಅರಕಲಗೂಡು ಕ್ಷೇತ್ರ | ತ್ರಿಕೋನ ಸ್ಪರ್ಧೆಯ ರಣಕಣಗಳು

Date:

ಬೇಲೂರು: ತ್ರಿಕೋನ ಸ್ಪರ್ಧೆ

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯಕ್ಕೆ ಜೆಡಿಎಸ್‌ನ ಹಾಲಿ ಶಾಸಕ ಕೆ.ಎಸ್.ಲಿಂಗೇಶ್, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಜಯಗೊಂಡ ಬಿಜೆಪಿಯ ಹುಲ್ಲಳ್ಳಿ ಸುರೇಶ್ ಮತ್ತು ಕಾಂಗ್ರೆಸ್ಸಿನ ಬಿ.ಶಿವರಾಂ ಕಣದಲ್ಲಿದ್ದಾರೆ.

ಕಳೆದ ಬಾರಿಯೇ ಬೇಲೂರು ಟಿಕೆಟ್ ಗೆ ಪ್ರಯತ್ನಿಸಿ ವಿಫಲರಾಗಿದ್ದ ಗಂಡಸಿ ಶಿವರಾಂ, ಕಳೆದ ನಾಲ್ಕು ವರ್ಷಗಳಿಂದ ಕ್ಷೇತ್ರದ ಜನತೆಯ ವಿಶ್ವಾಸ ಗಳಿಸುವಲ್ಲಿ ಸಫಲರಾಗಿದ್ದಾರೆ. ಹಾಗೆಯೇ ಇದೇ ಕೊನೆಯ ಚುನಾವಣೆ ಎಂದಿರುವ ಅವರು, ಟಿಕೆಟ್ ವಂಚಿತ ರುದ್ರೇಶಗೌಡರ ಪತ್ನಿ ಕೀರ್ತನಾ, ರಾಜಶೇಖರ್, ಕೃಷ್ಣೇಗೌಡರ ಮನವೊಲಿಸಿ, ಒಮ್ಮತದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇದು ಕಾಂಗ್ರೆಸ್ಸಿಗೆ ಗೆಲುವಿನ ಹಾದಿಯನ್ನು ಸುಗಮಗೊಳಿಸಿದೆ.

ಹಾಗೆಯೇ ಕಳೆದ ಬಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಬಿಜೆಪಿ ಈ ಬಾರಿ ಕಮಲ ಅರಳಿಸಲು ಪಣ ತೊಟ್ಟಿದೆ. ಕಳೆದ ಬಾರಿ ಸೋತ ಅನುಕಂಪವನ್ನು ಈ ಬಾರಿ ಗೆಲುವನ್ನಾಗಿ ಮಾಡಿಕೊಳ್ಳಲು ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಗಿರುವ ಹುಲ್ಲಳ್ಳಿ ಸುರೇಶ್‌ ಸಾಕಷ್ಟು ತಾಲೀಮು ನಡೆಸುತ್ತಿದ್ದಾರೆ. ಬೇಲೂರಿಗೆ ಪ್ರಧಾನಿ ಮೋದಿಯವರನ್ನು ಕರೆತಂದು, ಕಾರ್ಯಕರ್ತರಲ್ಲಿ ಹುರುಪು-ಹುಮ್ಮಸ್ಸು ಮೂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರಿಬ್ಬರ ನಡುವೆ, ಜೆಡಿಎಸ್‌ನ ಹಾಲಿ ಶಾಸಕ ಲಿಂಗೇಶ್, ಹೇಳಿಕೊಳ್ಳುವ ಅಭಿವೃದ್ಧಿಯನ್ನೇನೂ ಮಾಡದೆ, ಮತದಾರರ ಅವಕೃಪೆಗೆ ಒಳಗಾಗಿದ್ದಾರೆ. ಬೇಲೂರು ಹೇಳಿಕೇಳಿ ಐತಿಹಾಸಿಕ ಪ್ರವಾಸಿತಾಣ. ರಾಷ್ಟ್ರೀಯ-ಅಂತಾರಾಷ್ಟ್ರೀಯ ಪ್ರವಾಸಿಗರು ನಿತ್ಯ ನೆರೆಯುವ ಜಾಗ. ಇಂತಹ ಪ್ರವಾಸಿತಾಣಗಳನ್ನು ಮೂಲಸೌಕರ್ಯಗಳ ಮೂಲಕ ಅಭಿವೃದ್ಧಿಪಡಿಸಿ, ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಬದಲು, ಕಳೆಗುಂದುವಂತೆ ಮಾಡಲಾಗಿದೆ ಎಂಬ ಆರೋಪ ಹಾಲಿಶಾಸಕರ ಮೇಲಿದೆ.

ಲಿಂಗಾಯತರು ಮತ್ತು ಪರಿಶಿಷ್ಟ ಜಾತಿ/ಪಂಗಡದವರೇ ಬಹುಸಂಖ್ಯಾತರಿರುವ ಬೇಲೂರು ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಮುಸ್ಲಿಮರು ಮತ್ತು ದಲಿತರು ಒಂದಾದರೆ ಕಾಂಗ್ರೆಸ್‌ಗೆ ಅನುಕೂಲವಿದೆ. ಜೆಡಿಎಸ್-ಬಿಜೆಪಿ ನಡುವಿನ ಪೈಪೋಟಿಯಾದರೆ ಬಿಜೆಪಿ ಮುನ್ನುಗ್ಗಲಿದೆ.

ಅರಕಲಗೂಡು: ಗೆಲ್ಲುವ ಕ್ಷೇತ್ರ ಕಳೆದುಕೊಂಡ ಕಾಂಗ್ರೆಸ್

ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಎ.ಮಂಜು, ಆಶ್ಚರ್ಯಕರ ರೀತಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಯೋಗಾರಮೇಶ್ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಪೊಲೀಸ್ ಕೆಲಸ ಬಿಟ್ಟು ರಾಜಕಾರಣಕ್ಕೆ ಬಂದಿರುವ ಎಚ್.ಪಿ ಶ್ರೀಧರ್ ಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮಾಜಿ ಐಎಎಸ್ ಅಧಿಕಾರಿ ರಾಮೇಗೌಡರ ಸಹೋದರ, ಕಾಂಗ್ರೆಸ್ ಟಿಕೆಟ್ ಆಕ್ಷಾಂಕ್ಷಿ ಕೃಷ್ಣೇಗೌಡ ಈಗ ಪಕ್ಷೇತರ ಅಭ್ಯರ್ಥಿಯಾಗಿ, ಕಾಂಗ್ರೆಸ್ಸಿಗೆ ತಲೆನೋವಾಗಿದ್ದಾರೆ.

ದುರದೃಷ್ಟಕರ ಸಂಗತಿ ಎಂದರೆ, ಸಜ್ಜನ ರಾಜಕಾರಣಿ ಎ.ಟಿ.ರಾಮಸ್ವಾಮಿ, ಕೋಮುವಾದಿ ಪಕ್ಷದ ಪರ ಪ್ರಚಾರ ಮಾಡುವಂತಾಗಿದೆ. ಎ.ಟಿ ರಾಮಸ್ವಾಮಿ ಈ ಬಾರಿ ಗೆಲ್ಲುವುದು ಕಷ್ಟ ಎಂದರಿತ ರೇವಣ್ಣ, ನಾಜೂಕಾಗಿ ಅವರನ್ನು ಪಕ್ಷದಿಂದ ಹೊರಹಾಕಿ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಲ್ಲಂತ ಎ.ಮಂಜುವನ್ನು ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸಿದ್ದಾರೆ. ಇದು ಒಂದು ರೀತಿಯಲ್ಲಿ ಚುನಾವಣಾ ಚಮತ್ಕಾರಿಕೆಯಂತೆ ಕಂಡರೂ, ಸೈದ್ಧಾಂತಿಕ ರಾಜಕಾರಣಕ್ಕೆ ತಿಲಾಂಜಲಿ ಎಂದೇ ಭಾವಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ?: ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

ಇನ್ನು ಅರಕಲಗೂಡು ಮೇಲ್ನೋಟಕ್ಕೆ ಒಕ್ಕಲಿಗರ ಭದ್ರಕೋಟೆಯಂತೆ ಕಂಡರೂ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗರಿದ್ದರೂ, ಸ್ಪರ್ಧಿಸಿರುವ ನಾಲ್ವರೂ ಒಕ್ಕಲಿಗರೇ ಆಗಿರುವುದು ನಾಲ್ವರಿಗೂ ಕಷ್ಟವಾಗಲಿದೆ. ಈ ಸಮುದಾಯವನ್ನು ಹೊರತುಪಡಿಸಿ, ಕುರುಬರು ಮತ್ತು ಪರಿಶಿಷ್ಟ ಜಾತಿ/ಪಂಗಡದ ಮತದಾರರು ಹೆಚ್ಚಾಗಿದ್ದಾರೆ. ಜೊತೆಗೆ ಲಿಂಗಾಯತರು, ಮುಸ್ಲಿಮರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇವರ ಮತ ಗಳಿಸುವ ಅಭ್ಯರ್ಥಿ ಗೆಲ್ಲುವುದು ಸದ್ಯಕ್ಕೆ ಸುಲಭದ ಹಾದಿಯಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿಯಿದೆ. ಚುನಾವಣೆಗೆ ಮುಂಚೆ ಕಾಂಗ್ರೆಸ್ ಗೆಲ್ಲುವ ಕ್ಷೇತ್ರವಾಗಿತ್ತು. ಅದು ಈಗ ಇಲ್ಲವಾಗಿದೆ.

ಸಕಲೇಶಪುರ: ಮುಸ್ಲಿಮರೇ ನಿರ್ಣಾಯಕ

ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಕುಮಾರಸ್ವಾಮಿ, ಒಂದು ಸಲ ಮಂತ್ರಿಯೂ ಆಗಿದ್ದಾರೆ. ಜೆಡಿಎಸ್ ಅಧ್ಯಕ್ಷರೂ ಆಗಿದ್ದರು. ಆದರೆ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಲಿಲ್ಲ ಎಂಬ ಮಾತಿದೆ. ಕೊನೆಪಕ್ಷ ರಸ್ತೆಯಂತಹ ಮೂಲಭೂತ ಸೌಕರ್ಯವನ್ನೂ ಮಾಡಲಾಗಲಿಲ್ಲ. ಇನ್ನು ಕಾಡು ಪ್ರಾಣಿಗಳ ಉಪಟಳ, ಕಾಫಿ ಬೆಳೆ ನಷ್ಟ, ಕೃಷಿ ಕುಂಠಿತವನ್ನು ಕೇಳುವವರಿಲ್ಲ. ಹೀಗಾಗಿ ಇಲ್ಲಿಯ ಜನ ಈ ಬಾರಿ ಜೆಡಿಎಸ್ ಶಾಸಕರ ಬಗ್ಗೆ ಭಾರೀ ಬೇಸರ ವ್ಯಕ್ತಪಡಿಸುತ್ತಾರೆ.
ಕಳೆದಬಾರಿ ಜೆಡಿಎಸ್ ನಿಂದ ಎಚ್.ಕೆ.ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ನಾರ್ವೇ ಸೋಮಶೇಖರ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿತ್ತು. ಕೊನೆ ಗಳಿಗೆಯಲ್ಲಿ ಮುಸ್ಲಿಮರು ಕೈಹಿಡಿದ ಕಾರಣ ಜೆಡಿಎಸ್ ಗೆಲುವು ದಾಖಲಿಸಿತ್ತು. ಗೆದ್ದ ಕುಮಾರಸ್ವಾಮಿ ನಿದ್ರೆಗೆ ಜಾರಿದರು. ಸೋತು ಸೈಡಿಗೆ ಸರಿದ ನಾರ್ವೇ ಸೋಮಶೇಖರ್, ಇವತ್ತಿನವರೆಗೆ ಕ್ಷೇತ್ರದತ್ತ ತಲೆಹಾಕದೆ ದೂರ ಉಳಿದರು. ಈ ಬಾರಿ ಅದೇ ನಾರ್ವೇ ಸೋಮಶೇಖರ್ ಜೆಡಿಎಸ್ ಸೇರಿ, ಕುಮಾರಸ್ವಾಮಿಯವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ಸಿನಿಂದ ಮುರಳಿಮೋಹನ್, ಬಿಜೆಪಿಯಿಂದ ಸಿಮೆಂಟ್ ಮಂಜು ಕಣದಲ್ಲಿದ್ದಾರೆ.

ಈ ಕ್ಷೇತ್ರದಲ್ಲಿ ಲಿಂಗಾಯತರು ಮತ್ತು ಕ್ರಿಶ್ಚಿಯನ್ನರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಕಣದಲ್ಲಿರುವ ಮೂವರ ಪೈಕಿ, ಕ್ಷೇತ್ರದ ಮತದಾರರ ಒಲವು ಕಾಂಗ್ರೆಸ್ ನತ್ತ ಹೆಚ್ಚಾಗಿದೆ. ಒಕ್ಕಲಿಗರು, ಮುಸ್ಲಿಮರು, ಎಸ್ಸಿಎಸ್ಟಿ ಪಂಗಡದವರು ಒಂದಾದರೆ ಮುರಳಿಮೋಹನ್ ಗೆಲುವು ನಿಶ್ಚಿತ ಎಂಬ ಮಾತಿದೆ.

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...